ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ

ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ; ಪ್ರವಾಹದಲ್ಲಿ ಕೊಚ್ಚಿಹೋದ ಜನ ಜೀವನ

ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ. 

Coast Guard officials carry on their rescue work at rain-hit Karwar district of Karnataka. (Photo| EPS)

ಧರೆ ಕುಸಿದು ಮೃತಪಟ್ಟಿದ್ದ ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ಹೊಸಗದ್ದೆಯ ದ್ಯಾವಾ ರಾಮಾ ನಾಯ್ಕ ಕುಟುಂಬಕ್ಕೆ ಇಂದು ತಾಲೂಕಾ ಆಡಳಿತ ಸರ್ಕಾರದ 5 ಲಕ್ಷ ಪರಿಹಾರ ಧನ ವಿತರಿಸಿತು.

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ. 

ಅಪಾಯದಲ್ಲಿ ಸಿಲುಕಿರುವ ನೂರಾರು ಮಂದಿಯನ್ನು ರಕ್ಷಿಸಲು ಭಾರತೀಯ ನೌಕಾ ದಳ ಹಾಗೂ ಭಾರತೀಯ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿಗಳು ನೆರವಿಗೆ ಧಾವಿಸಿದ್ದು ಸಿಲುಕಿದ್ದ ಜನರನ್ನು ಏರ್ಲಿಫ್ಟ್ ಮಾಡಿ ಸುರಕ್ಷಿತ ಪ್ರದೇಶಗಳಿಗೆ ಕಳಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.

https://imasdk.googleapis.com/js/core/bridge3.472.0_en.html#goog_1172669529

https://imasdk.googleapis.com/js/core/bridge3.472.0_en.html#goog_1172669532

https://imasdk.googleapis.com/js/core/bridge3.472.0_en.html#goog_1172669535

ಅಂಕೋಲಾದ ಸುಂಕಸಾಳದಲ್ಲಿ ಭಾಗಶಃ ಜಲಾವೃತಗೊಂಡಿದ್ದ ಹೊಟೆಲ್ ನಲ್ಲಿ ಸಿಲುಕಿದ್ದ 15 ಪ್ರವಾಸಿಗರನ್ನು ರಕ್ಷಿಸಲು ನೌಕಾಪಡೆ ಹೆಲಿಕಾಫ್ಟರ್ ನೆರವಾಗಿದ್ದು ಸುರಕ್ಷಿತ ಪ್ರದೇಶಗಳಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಖರ್ಗೆಜೋಗ ಗ್ರಾಮದಲ್ಲಿ  ಖರ್ಗೆಜೋಗ್, ಉಂಗ್ಲಿ ಜೋಗ, ಬೋಡೋಜೋಗ ದ್ವೀಪಗಳಿಂದ 161 ಮಂದಿಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. 

ಕುಮುಟಾದಲ್ಲಿ ಅಘನಾಶಿನಿ, ಅಂಕೋಲದಲ್ಲಿ ಗಂಗಾವಳಿ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿರುವುದರಿಂದ ದಿವಗಿ, ಮಿರ್ಜಾನ್, ಹೆಗಡೆ ಹಾಗೂ ಕೊಡ್ಕಣಿ ಗ್ರಾಮಗಳು ಮುಳುಗಡೆಯ ಭೀತಿಯನ್ನು ಎದುರಿಸುತ್ತಿವೆ. ಈ ಗ್ರಾಮದಲ್ಲಿರುವವರನ್ನು ರಕ್ಷಣಾ ತಂಡಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದಾರೆ. ಗಂಗಾವಳಿ ನದಿಯಲ್ಲಿ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಅಂಕೋಲಾ-ಹುಬ್ಬಳ್ಳಿ ಹೆದ್ದಾರಿ ಜಲಾವೃತಗೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. 

ಇನ್ನು ಕಾಳಿ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ 2 ಲಕ್ಷ ಕ್ಯುಸೆಕ್ಸ್ ನಷ್ಟು ನೀರನ್ನು ಕೊಡಸಳ್ಳಿ, ಕದ್ರಾ ಜಲಾಶಯಗಳಿಂದ ಹೊರಬಿಡಲಾಗಿದೆ. 

ಈ ಜಲಾಶಯಗಳ ದಿಕ್ಕಿನಲ್ಲಿರುವ ಗ್ರಾಮಗಳಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ರಕ್ಷಣಾ ತಂಡಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮಾನವೀಯ ನೆರವು ಹಾಗೂ ವಿಪತ್ತು ಪರಿಹಾರ (ಹೆಚ್‌ಎಡಿಆರ್) ಹಾಗೂ ರಕ್ಷಣಾ ಕಾರ್ಯಾಚರಣೆಗಳ ತಂಡ ತುರ್ತಾಗಿ ನೆರವಿಗೆ ಧಾವಿಸಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಶಸ್ತ್ರ ಪಡೆಗಳು ಸ್ಥಳೀಯ ಆಡಳಿತದ ಜೊತೆಗೆ ಸಂಪರ್ಕದಲ್ಲಿದ್ದು, ಐಸಿಜಿ ಪಡೆ ನಿರಂತರ ಮಳೆಯ ಪರಿಣಾಮಗಳನ್ನು ತಗ್ಗಿಸಲು, ಜನತೆಯ ಜೀವ ಉಳಿಸಲು, ನೆರವು ನೀಡಲು  ಸನ್ನದ್ಧಗೊಂಡಿದೆ ಎಂದು ಐಸಿಜಿ ವಕ್ತಾರರು ಹೇಳಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿರುವ ಶಂಕೆ ಇದೆ. 24 ಗಂಟೆಗಳಲ್ಲಿ ನದಿ ಪ್ರವಾಹದಲ್ಲಿ ಇಬ್ಬರು ಕೊಚ್ಚಿಹೋಗಿದ್ದು ಇನ್ನಿಬ್ಬರು ಪ್ರತ್ಯೇಕ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಾವಳಿ ನದಿಯಲ್ಲಿ ರಕ್ಷಣಾಕಾರ್ಯಚರಣೆಯಲ್ಲಿ ತೊಡಗಿದ್ದ ಬೋಟ್ ತಲೆಕೆಳಗಾಗಿದ್ದು ಓರ್ವ ಮಹಿಳೆ ಹಾಗೂ ಪುರುಷ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಅವರ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. 

ಶಿರೂರು ಗ್ರಾಮದ ಮೊರು ಗೌಡ (65) ಹಾಗೂ ಗಂಗಾಧರ ಗೌಡ (36) ನದಿ ತೀರಕ್ಕೆ ವಾಪಸ್ಸಾಗುತ್ತಿದ್ದಾಗ ಬೋಟ್ ಮಗುಚಿಬಿದ್ದಿದೆ. ಇದೇ ಮಾದರಿಯ ಘಟನೆ ಹೊನ್ನಾವರದಲ್ಲಿ ವರದಿಯಾಗಿದ್ದು, ಬೋಟ್ ಮಗುಚಿಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಶಿರಸಿಯಲ್ಲಿ ಓರ್ವ ದ್ವಿಚಕ್ರ ವಾಹನ ಸವಾರ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *