ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ

ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ; ಪ್ರವಾಹದಲ್ಲಿ ಕೊಚ್ಚಿಹೋದ ಜನ ಜೀವನ

ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ. 

Coast Guard officials carry on their rescue work at rain-hit Karwar district of Karnataka. (Photo| EPS)

ಧರೆ ಕುಸಿದು ಮೃತಪಟ್ಟಿದ್ದ ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ಹೊಸಗದ್ದೆಯ ದ್ಯಾವಾ ರಾಮಾ ನಾಯ್ಕ ಕುಟುಂಬಕ್ಕೆ ಇಂದು ತಾಲೂಕಾ ಆಡಳಿತ ಸರ್ಕಾರದ 5 ಲಕ್ಷ ಪರಿಹಾರ ಧನ ವಿತರಿಸಿತು.

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ. 

ಅಪಾಯದಲ್ಲಿ ಸಿಲುಕಿರುವ ನೂರಾರು ಮಂದಿಯನ್ನು ರಕ್ಷಿಸಲು ಭಾರತೀಯ ನೌಕಾ ದಳ ಹಾಗೂ ಭಾರತೀಯ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿಗಳು ನೆರವಿಗೆ ಧಾವಿಸಿದ್ದು ಸಿಲುಕಿದ್ದ ಜನರನ್ನು ಏರ್ಲಿಫ್ಟ್ ಮಾಡಿ ಸುರಕ್ಷಿತ ಪ್ರದೇಶಗಳಿಗೆ ಕಳಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.

https://imasdk.googleapis.com/js/core/bridge3.472.0_en.html#goog_1172669529

https://imasdk.googleapis.com/js/core/bridge3.472.0_en.html#goog_1172669532

https://imasdk.googleapis.com/js/core/bridge3.472.0_en.html#goog_1172669535

ಅಂಕೋಲಾದ ಸುಂಕಸಾಳದಲ್ಲಿ ಭಾಗಶಃ ಜಲಾವೃತಗೊಂಡಿದ್ದ ಹೊಟೆಲ್ ನಲ್ಲಿ ಸಿಲುಕಿದ್ದ 15 ಪ್ರವಾಸಿಗರನ್ನು ರಕ್ಷಿಸಲು ನೌಕಾಪಡೆ ಹೆಲಿಕಾಫ್ಟರ್ ನೆರವಾಗಿದ್ದು ಸುರಕ್ಷಿತ ಪ್ರದೇಶಗಳಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಖರ್ಗೆಜೋಗ ಗ್ರಾಮದಲ್ಲಿ  ಖರ್ಗೆಜೋಗ್, ಉಂಗ್ಲಿ ಜೋಗ, ಬೋಡೋಜೋಗ ದ್ವೀಪಗಳಿಂದ 161 ಮಂದಿಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. 

ಕುಮುಟಾದಲ್ಲಿ ಅಘನಾಶಿನಿ, ಅಂಕೋಲದಲ್ಲಿ ಗಂಗಾವಳಿ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿರುವುದರಿಂದ ದಿವಗಿ, ಮಿರ್ಜಾನ್, ಹೆಗಡೆ ಹಾಗೂ ಕೊಡ್ಕಣಿ ಗ್ರಾಮಗಳು ಮುಳುಗಡೆಯ ಭೀತಿಯನ್ನು ಎದುರಿಸುತ್ತಿವೆ. ಈ ಗ್ರಾಮದಲ್ಲಿರುವವರನ್ನು ರಕ್ಷಣಾ ತಂಡಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದಾರೆ. ಗಂಗಾವಳಿ ನದಿಯಲ್ಲಿ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಅಂಕೋಲಾ-ಹುಬ್ಬಳ್ಳಿ ಹೆದ್ದಾರಿ ಜಲಾವೃತಗೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. 

ಇನ್ನು ಕಾಳಿ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ 2 ಲಕ್ಷ ಕ್ಯುಸೆಕ್ಸ್ ನಷ್ಟು ನೀರನ್ನು ಕೊಡಸಳ್ಳಿ, ಕದ್ರಾ ಜಲಾಶಯಗಳಿಂದ ಹೊರಬಿಡಲಾಗಿದೆ. 

ಈ ಜಲಾಶಯಗಳ ದಿಕ್ಕಿನಲ್ಲಿರುವ ಗ್ರಾಮಗಳಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ರಕ್ಷಣಾ ತಂಡಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮಾನವೀಯ ನೆರವು ಹಾಗೂ ವಿಪತ್ತು ಪರಿಹಾರ (ಹೆಚ್‌ಎಡಿಆರ್) ಹಾಗೂ ರಕ್ಷಣಾ ಕಾರ್ಯಾಚರಣೆಗಳ ತಂಡ ತುರ್ತಾಗಿ ನೆರವಿಗೆ ಧಾವಿಸಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಶಸ್ತ್ರ ಪಡೆಗಳು ಸ್ಥಳೀಯ ಆಡಳಿತದ ಜೊತೆಗೆ ಸಂಪರ್ಕದಲ್ಲಿದ್ದು, ಐಸಿಜಿ ಪಡೆ ನಿರಂತರ ಮಳೆಯ ಪರಿಣಾಮಗಳನ್ನು ತಗ್ಗಿಸಲು, ಜನತೆಯ ಜೀವ ಉಳಿಸಲು, ನೆರವು ನೀಡಲು  ಸನ್ನದ್ಧಗೊಂಡಿದೆ ಎಂದು ಐಸಿಜಿ ವಕ್ತಾರರು ಹೇಳಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿರುವ ಶಂಕೆ ಇದೆ. 24 ಗಂಟೆಗಳಲ್ಲಿ ನದಿ ಪ್ರವಾಹದಲ್ಲಿ ಇಬ್ಬರು ಕೊಚ್ಚಿಹೋಗಿದ್ದು ಇನ್ನಿಬ್ಬರು ಪ್ರತ್ಯೇಕ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಾವಳಿ ನದಿಯಲ್ಲಿ ರಕ್ಷಣಾಕಾರ್ಯಚರಣೆಯಲ್ಲಿ ತೊಡಗಿದ್ದ ಬೋಟ್ ತಲೆಕೆಳಗಾಗಿದ್ದು ಓರ್ವ ಮಹಿಳೆ ಹಾಗೂ ಪುರುಷ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಅವರ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. 

ಶಿರೂರು ಗ್ರಾಮದ ಮೊರು ಗೌಡ (65) ಹಾಗೂ ಗಂಗಾಧರ ಗೌಡ (36) ನದಿ ತೀರಕ್ಕೆ ವಾಪಸ್ಸಾಗುತ್ತಿದ್ದಾಗ ಬೋಟ್ ಮಗುಚಿಬಿದ್ದಿದೆ. ಇದೇ ಮಾದರಿಯ ಘಟನೆ ಹೊನ್ನಾವರದಲ್ಲಿ ವರದಿಯಾಗಿದ್ದು, ಬೋಟ್ ಮಗುಚಿಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಶಿರಸಿಯಲ್ಲಿ ಓರ್ವ ದ್ವಿಚಕ್ರ ವಾಹನ ಸವಾರ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *