ಆಪತ್ತು ಸ್ಪಂದನೆ,ಸಾಧಕರಿಗೆ ಅಭಿನಂದನೆ ಕಾಂಗ್ರೆಸ್ ಗೆ ಸಿಕ್ತು ಪ್ರಶಂಸೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ ದಾದ್ಯಂತ ಕೋವಿಡ್ ಸಂದರ್ಭ ಹಾಗೂ ಮಳೆ, ಪ್ರವಾಹದ ಸಂಸರ್ಭದಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಬಹುತೇಕ ಕಡೆ ನೆರವಿಗೆ ಧಾವಿಸಿದ್ದು ಪ್ರಶಂಸೆಗೆ ಪಾತ್ರವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಸಿದ್ಧಾಪುರ ಶಾಸಕರು ಮತ್ತು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಬಿಟ್ಟು ಬಹುತೇಕ ಎಲ್ಲಾ ಶಾಸಕರೂ ಕೋವಿಡ್ ಮತ್ತು ನೆರೆ,ಮಳೆ ಸಂದರ್ಭಗಳಲ್ಲಿ ಜನರಿಗೆ ಸ್ಪಂದಿಸಿದ್ದಾರೆ. ಆದರೆ ಜನಪ್ರತಿನಿಧಿಗಳಲ್ಲದ ಕಾಂಗ್ರೆಸ್ ನಾಯಕರು ಜನಸ್ಪಂದನದ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ರಾಜ್ಯದ ಪ್ರಮುಖ ನಾಯಕರ ಜೊತೆಗೆ ಕಾರವಾರ ಕ್ಷೇತ್ರದಲ್ಲಿ ಸತೀಶ್ ಶೈಲ್, ಭಟ್ಕಳದಲ್ಲಿ ಜೆ.ಡಿ.ನಾಯ್ಕ, ಮಂಕಾಳು ವೈದ್ಯ, ಹಳಿಯಾಳ, ಯಲ್ಲಾಪುರಗಳಲ್ಲಿ ಪ್ರಶಾಂತ್ ಮತ್ತು ಆರ್, ವಿ.ದೇಶಪಾಂಡೆ ಹಾಗೂ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ, ಸೊರಬದಲ್ಲಿ ಮಧು ಬಂಗಾರಪ್ಪ, ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಮತ್ತು ಬೇಳೂ ರು ಗೋಪಾಲಕೃಷ್ಣ ಸೇರಿದಂತೆ ಜಿಲ್ಲೆ, ರಾಜ್ಯದ ಬಹುತೇಕ ಕಡೆ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗಿಂತ ತುಸು ಹೆಚ್ಚೇ ಆಸಕ್ತಿಯಿಂದ ಕಾಂಗ್ರೆಸ್ ನಾಯಕರು ಸಂತೃಸ್ತರಿಗೆ ನೆರವಾದ ಬಗ್ಗೆ ಸಾರ್ವಜನಿಕರಿಂದ ಪ್ರಶಂಸೆ ದೊರೆತಿದೆ.

ಬಹುತೇಕ ಕಡೆ ಕಾಂಗ್ರೆಸ್ ನಾಯಕರು ಎಸ್.ಎಸ್. ಎಲ್.ಸಿ., ಪಿ,ಯು.ಸಿ. ಮತ್ತು ಇತರ ಪರೀಕ್ಷೆ, ಗಳಲ್ಲಿ ಗರಿಷ್ಠ ಅಂಕಗಳಿಂದ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಗೌರವಿಸಿದ್ದಾರೆ.

ಶಿರಸಿ-ಸಿದ್ದಾಪುರಗಳಲ್ಲಿ ಸಾಧಕರು, ಸಂತೃಸ್ತರು, ತೊಂದರೆಗೊಳಗಾದವರನ್ನು ಸಂಪರ್ಕಿಸಿ ನೆರವು-ಉತ್ತೇಜನ ನೀಡಿದ ಪ್ರಮುಖರಲ್ಲಿ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕರ ಹೆಸರು ಮುಂಚೂಣಿಯಲ್ಲಿದೆ. ಸುಷ್ಮಾ ರೆಡ್ಡಿ, ಉಪೇಂದ್ರ ಪೈ ಕೂಡಾ ಅಲ್ಲಲ್ಲಿ ನೆರವಿಗೆ ಧಾವಿಸಿದ ವರ್ತಮಾನವಿದೆ.

ಸಿದ್ದಾಪುರ. : ರಾಜ್ಯದ ವಿವಿಧೆಡೆ ಪ್ರವಾಹದಿಂದ ನೆರೆ ಬಂದು ವಿವಿಧ ಭಾಗದ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ನೆರೆಯಿಂದ ಸಂತ್ರಸ್ತರಾದವರ ನೆರವಿಗೆ ಉಪೇಂದ್ರ ಪೈ ಸೇವಾ ಟ್ರಸ್ಟ್, ಅಧ್ಯಕ್ಷ ಉಪೇಂದ್ರ ಪೈ ಅವರು ರವಿವಾರ ಸಿದ್ದಾಪುರ ತಾಲೂಕಿನ ಕಲ್ಯಾಣಪುರ ಗ್ರಾಮದ ಸುಮಾರು 10 ಕುಟುಂಬಕ್ಕೆ ದಿನಸಿ ಕಿಟ್ ಹಾಗೂ ಬಟ್ಟೆಗಳನ್ನು ನೀಡಿ ಧೈರ್ಯ ತುಂಬಿದರು.
ಯಾರು ಕೂಡಾ ಭಯಪಡುವ ಅವಶ್ಯಕತೆ ಇಲ್ಲ ನಿಮ್ಮೆಲ್ಲರ ಜೊತೆಯಲ್ಲಿ  ನಮ್ಮ ಟ್ರಸ್ಟ್ ನಮ್ಮ ಸೇವೆ ಹಾಗೂ ನಾನು ಕೂಡಾ ನಿಮ್ಮ ಜೊತೆಯಲ್ಲಿ ಇದ್ದೇನೆ
ಮತ್ತೆ ಮೂರು, ನಾಲ್ಕು  ದಿನದಲ್ಲಿ ಬೇಟಿ ನೀಡಿ ಎಲ್ಲಾ ಸಂತ್ರಸ್ತರ ಮನೆಯ ಪರಿಸ್ಥಿತಿಯನ್ನು ಪರಿಶೀಲಿಸಿ ಅದಕ್ಕೆ ಅನುಕೂಲ  ಆಗುವಂತೆ ಪರಿಹಾರವನ್ನು ನೀಡುತ್ತೇನೆ ಎಂದು ಶ್ರೀ ಉಪೇಂದ್ರ ಪೈ ಹೇಳಿದರು.
ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರು, ನಜೀರ್ ಮೂಡಿ, ಹಾಗೂ ಊರ ಪ್ರಮುಖರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *