hebbar out- sunilkumar in-kageri mum! ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು 

ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು ಸೇರ್ಪಡೆಯಾಗುತ್ತಾರೆ, ಯಾರ್ಯಾರಿಗೆ ಈ ಬಾರಿ ಸಚಿವ ಸ್ಥಾನ ಒಲಿಯುತ್ತದೆ ಎಂದು.

Basavaraja Bommai

ಬೆಂಗಳೂರು: ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು ಸೇರ್ಪಡೆಯಾಗುತ್ತಾರೆ, ಯಾರ್ಯಾರಿಗೆ ಈ ಬಾರಿ ಸಚಿವ ಸ್ಥಾನ ಒಲಿಯುತ್ತದೆ ಎಂದು.

ಜಾತಿ, ಪ್ರದೇಶವಾರು ಪ್ರಾತಿನಿಧ್ಯವನ್ನು ನೋಡಿಕೊಂಡು ಶಾಸಕರಿಗೆ ಹಿಂದಿನ ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮಣೆ ಹಾಕಲಾಗಿದ್ದು, ಅವರಲ್ಲಿ ಹಲವರಿಗೆ ಈ ಬಾರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಸಂಶಯವಾಗಿದೆ. ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಸುಮಾರು 10 ಮಂದಿ ಹಿರಿ-ಕಿರಿಯ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ದೊರಕುವುದು ಸಂಶಯವಾಗಿದ್ದು ಈ ಬಾರಿ ಹೊಸ ಮುಖಗಳಿಗೆ ಹೈಕಮಾಂಡ್ ಆದ್ಯತೆ ಕೊಡಲಿದೆ ಎಂದು ಹೇಳಲಾಗುತ್ತಿದೆ.

ಹಿಂದಿನ ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ 34 ಮಂದಿ ಸಚಿವರಿದ್ದರು, 2019ರಲ್ಲಿ ಜೆಡಿಎಸ್-ಕಾಂಗ್ರೆಸ್ ನಿಂದ ತೊರೆದು ಬಿಜೆಪಿ ಸೇರಿ ಸರ್ಕಾರ ರಚನೆಗೆ ಸಹಾಯ ಮಾಡಿದ 11 ಮಂದಿ ಶಾಸಕರಿಗೂ ಸಚಿವ ಸ್ಥಾನ ದೊರಕುವುದು ಸಂಶಯ ಎಂದು ಹೇಳಲಾಗುತ್ತಿದೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಮಾಜಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೂತನ ಸಂಪುದಲ್ಲಿ ಸೇರ್ಪಡೆಯಾಗುವುದಿಲ್ಲ. ಸಿಡಿ ಕೇಸಿನಲ್ಲಿ ಜಲಸಂಪನ್ಮೂಲ ಸಚಿವ ಖಾತೆಗೆ ರಾಜೀನಾಮೆ ಸಲ್ಲಿಸಿದ ರಮೇಶ್ ಜಾರಕಿಹೊಳಿಯವರಿಗೆ ಇನ್ನೂ ಕೇಸ್ ನಲ್ಲಿ ಕ್ಲೀನ್ ಚಿಟ್ ಸಿಕ್ಕಿಲ್ಲ. ಇನ್ನು ಜಗದೀಶ್ ಶೆಟ್ಟರ್ ಅವರು ಅವರಾಗಿಯೇ ನೂತನ ಸಂಪುಟಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಸಂಪುಟದಲ್ಲಿ ಬೆಂಗಳೂರಿನಿಂದ 8 ಮಂದಿ ಶಾಸಕರು ಸಚಿವರಾಗಿದ್ದರು, ಅವರಲ್ಲಿ ಮೂವರಾದ ಎಸ್ ಟಿ ಸೋಮಶೇಖರ್, ಗೋಪಾಲಯ್ಯ ಮತ್ತು ಭೈರತಿ ಬಸವರಾಜು ಜೆಡಿಎಸ್-ಕಾಂಗ್ರೆಸ್ ನಿಂದ ಬಂದವರು. ಈ ಮೂವರಿಗೆ ನೂತನ ಸಂಪುಟದಲ್ಲಿ ಕೂಡ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

ಇನ್ನು ಹಿರಿಯರಾದ ಸುರೇಶ್ ಕುಮಾರ್, ವಿ ಸೋಮಣ್ಣ ಮತ್ತು ಆರ್ ಅಶೋಕ್ ಅವರನ್ನು ನೂತನ ಸಂಪುಟದಲ್ಲಿ ಹೊರಗಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನು ಒಂದೂವರೆ ವರ್ಷವಿದೆ. ಹಿಂದಿನ ಬಾರಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದವರಿಗೇ ಈ ಬಾರಿ ಕೂಡ ನೀಡಲು ಸಾಧ್ಯವಾಗುವುದಿಲ್ಲ. ಕಳೆದ ಬಾರಿ ಅವಕಾಶ ವಂಚಿತರಿಗೆ ಈ ಬಾರಿ ಸ್ಥಾನ ನೀಡುವ ಸಾಧ್ಯತೆಯಿದೆ ಎಂದು ಬಿಜೆಪಿ ಆಂತರಿಕ ಮೂಲಗಳು ಹೇಳುತ್ತಿವೆ.

ಆದರೆ ಬಿಜೆಪಿ ಹಿರಿಯ ನಾಯಕರನ್ನು ಸಂಪುಟದಿಂದ ದೂರ ಇಡುವುದು ಪಕ್ಷಕ್ಕೆ ಸವಾಲಿನ ಕೆಲಸ. ಡಾ ಸಿ ಎನ್ ಅಶ್ವಥ ನಾರಾಯಣ ಅವರು ಈ ಬಾರಿ ಸಂಪುಟಕ್ಕೆ ಸೇರ್ಪಡೆಯಾದರೂ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ. ವಲಸಿಗ ಶಿವರಾಮ್ ಹೆಬ್ಬಾರ್ ಅವರನ್ನು ಸಹ ಸಚಿವ ಮಾಡುವುದು ಸಂಶಯ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎ ರಾಮದಾಸ್, ಬಸವನಗುಡಿಯ ರವಿ ಸುಬ್ರಹ್ಮಣ್ಯ ಅವರು ಸುರೇಶ್ ಕುಮಾರ್ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಹ ಸೇರ್ಪಡೆಯಾಗಬಹುದು.

ಶ್ರೀರಾಮುಲು ಅವರನ್ನು ಡಿಸಿಎಂ ಮಾಡಬಹುದಾದರೂ, ರಾಜಕೀಯವಾಗಿ ಪ್ರಬಲವಾದ ಕುರುಬ ಸಮುದಾಯದ ಒತ್ತಡದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರೂ ಕೇಳಿಬರುತ್ತಿದೆ. ಮೊಟ್ಟೆಯ ವಿತರಣೆಯಲ್ಲಿ ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಆರೋಪಗಳು ಈ ಬಾರಿ ಸಂಪುಟದಿಂದ ಅವರನ್ನು ದೂರವಿಡುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. ಮಾಜಿ ಸಚಿವ ಜೆ.ಸಿ.ಮಧುಸ್ವಾಮಿ ತಮಗೇನು ಗೊತ್ತಿಲ್ಲ, ತಮ್ಮ ಕ್ಷೇತ್ರ ಚಿಕ್ಕನಾಯಕನಹಳ್ಳಿ ಮೇಲೆ ಗಮನ ಹರಿಸುತ್ತಿದ್ದೇನೆ ಎನ್ನುತ್ತಿದ್ದಾರೆ.

ನಾನು 12 ವರ್ಷಗಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಸಂಪುಟದಲ್ಲಿ ಸ್ಥಾನ ಕೊಡಿ ಎಂದು ಯಾರನ್ನೂ ಕೇಳಿಕೊಂಡು ಹೋಗುವುದಿಲ್ಲ ಎಂದು ಮಾಜಿ ವಸತಿ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಜೆ ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ವಿ ಸೋಮಣ್ಣ ಅವರು ಸಚಿವರಾಗಿದ್ದರು. ಆಗ ಬಸವರಾಜ ಬೊಮ್ಮಾಯಿಯವರು ಪಟೇಲರ ರಾಜಕೀಯ ಕಾರ್ಯದರ್ಶಿಯಾಗಿದ್ದರು. ನಿನ್ನೆ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ ವಿ ಸೋಮಣ್ಣ ಮಾತುಕತೆ ನಡೆಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *