ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. 

https://imasdk.googleapis.com/js/core/bridge3.473.0_en.html#goog_15694410

ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ, ಸುನೀಲ್ ಕುಮಾರ್  – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ.

ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ‌ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. 

13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ, ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *