independent-75 75ನೇ ಸ್ವಾತಂತ್ರ್ಯೋತ್ಸವ ಆಚರಿಸಲು ಸಜ್ಜಾಗಿದೆ ಬ್ರಿಟಿಷರ ಬಾವುಟ ಕೆಳಗಿಳಿಸಿ, ತ್ರಿವರ್ಣ ದ್ವಜ ಹಾರಿಸಿದ ಮೊಟ್ಟ ಮೊದಲ ಗ್ರಾಮ!

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ನಡೆಯು ತ್ತಿದೆ. ತ್ರಿವರ್ಣ ಧ್ವಜವನ್ನು ಮೊದಲ ಬಾರಿಗೆ ಏರಿಸಿದ ಕೀರ್ತಿ ಈ ಗ್ರಾಮಕ್ಕೆ ಸಲ್ಲುತ್ತದೆ.

The British Treasury in Bellare village of Sullia taluk is being spruced up

ಮಂಗಳೂರು: ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿದೆ. ತ್ರಿವರ್ಣ ಧ್ವಜವನ್ನು ಮೊದಲ ಬಾರಿಗೆ ಏರಿಸಿದ ಕೀರ್ತಿ ಈ ಗ್ರಾಮಕ್ಕೆ ಸಲ್ಲುತ್ತದೆ.

ಮಾರ್ಚ್ 30 1837 ರಲ್ಲಿ ಕೃಷಿ ಉತ್ಪನ್ನಗಳ ಮೇಲೆ ಬ್ರಿಟಿಷರು ಅಧಿಕ ಸುಂಕ ವಿಧಿಸಿದ್ದನ್ನು ವಿರೋಧಿಸಿ ಜನ ದಂಗೆ ಎದ್ದರು. ಬ್ರಿಟಿಷರ ಖಜಾನೆಯನ್ನು ಸೀಜ್ ಮಾಡಿ, ಆ ಸ್ಥಳದಲ್ಲಿದ್ದ ಬ್ರಿಟಿಷರ ಭಾವುಟವನ್ನು ಕೆಳಗಿ ಳಿಸಿದರು.

https://imasdk.googleapis.com/js/core/bridge3.473.0_en.html#goog_612521074

https://imasdk.googleapis.com/js/core/bridge3.473.0_en.html#goog_612521076

ದೀರ್ಘಕಾಲದವರೆಗೆ ನಿರ್ಲಕ್ಷ್ಯಕ್ಕೊಳಗಾಗಿದ್ದ ಐತಿಹಾಸಿಕ ಸ್ಥಳವು ಆಗಸ್ಟ್ 15 ಧ್ವಜಾರೋಹಣಕ್ಕೆ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆ ನಡೆಸಲು ಸಜ್ಜಾಗುತ್ತಿದೆ.  1804 ರಲ್ಲಿ  ಸಣ್ಣ ಹೆಂಚಿನ ಮೇಲ್ಛಾವಣಿ ನಿರ್ಮಿಸಲಾಗಿತ್ತು, ಇದರಲ್ಲಿ ಬ್ರಿಟಿಷ್ ಖಜಾನೆಯನ್ನು ಹೊಂದಿತ್ತು, ಈಗಲೂ ಹಳ್ಳಿಯ ಶಾಲೆಯ ಕಡೆಗಿರುವ ಸುಮಾರು ಒಂದು ಎಕರೆ ಭೂಮಿಯಲ್ಲಿದೆ.

ಐತಿಹಾಸಿಕ ಸ್ಥಳವನ್ನು ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಸಿದ್ಧಪಡಿಸುವ ಕೆಲಸವನ್ನು ಖಾಸಗಿ ಸಲಹೆಗಾರರಿಗೆ ವಹಿಸಲಾಗಿದೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ.

ಮೊಟ್ಟ ಮೊದಲು ದಕ್ಷಿಣ ಕೆನರಾ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹೊತ್ತಿಸಿತು. ಕೊಡಗಿನ ಅರಸನ ಆಳ್ವಿಕೆಯಲ್ಲಿದ್ದ ಸುಳ್ಯ ಮತ್ತು ಪುತ್ತೂರನ್ನು ಕೊಡಗಿನಿಂದ ಬೇರ್ಪಡಿಸಿ ಬ್ರಿಟಿಷರು ದಕ್ಷಿಣ ಕೆನರಾದ ಅಡಿಯಲ್ಲಿ ತಂದರು. ಬ್ರಿಟಿಷ್ ಆಳ್ವಿಕೆಯಲ್ಲಿ, ರೈತರು ತಮ್ಮ ಕೃಷಿ ಉತ್ಪನ್ನಗಳ ಆರನೆಯ ಒಂದು ಭಾಗವನ್ನು ತೆರಿಗೆಯಾಗಿ ಪಾವತಿಸಬೇಕಾಗಿತ್ತು ಆದರೆ ಅದು ರಾಜನ ಅಡಿಯಲ್ಲಿ ಕೇವಲ ಹತ್ತನೇ ಒಂದು ಭಾಗವಾಗಿತ್ತು. ಇದು ಅವರನ್ನು ದಂಗೆಗೆ ಕಾರಣವಾಗಿತ್ತು ನಿವೃತ್ತ ಅರ್ಥಶಾಸ್ತ್ರರ ಪ್ರಾಧ್ಯಾಪಕ ಡಾ. ಪ್ರಭಾಕರ ಶಿಶಿಲಾ ತಮ್ಮ ಕಾದಂಬರಿಯಲ್ಲಿ ಹೀಗೆ ಬರೆದಿದ್ದಾರೆ.

ಕೆದಂಬಳ್ಳಿ ರಾಮಗೌಡರ ನೇತೃತ್ವದಲ್ಲಿ ಸುಳ್ಯದ ಸುಮಾರು 1,200 ರೈತರು ಬೆಳ್ಳಾರೆಯಲ್ಲಿ ಬ್ರಿಟಿಷ್ ಖಜಾನೆಯನ್ನು ವಶಪಡಿಸಿಕೊಂಡರು ಮತ್ತು ಬ್ರಿಟಿಷ್ ಧ್ವಜವನ್ನು ಇಳಿಸಿದ ನಂತರ ಕೊಡಗು ರಾಜವಂಶದ ವಿಜಯ ಧ್ವಜವನ್ನು ಹಾರಿಸಿದರು. 

ನಂತರ ಮಂಗಳೂರಿಗೆ ತೆರಳಿದ ರೈತರು ಮತ್ತು ಬಾವುಟಗುಡ್ಡೆಯಲ್ಲಿ ಅದೇ ಕಾರ್ಯವನ್ನು ಪುನರಾವರ್ತಿಸಿದರು. ಅವರು ಮಂಗಳೂರಿಗೆ ತಲುಪುವ ಹೊತ್ತಿಗೆ 5,000 ಜನ ಸೇರಿದ್ದರು, ಇದರಿಂದಾಗಿ ಬ್ರಿಟಿಷರು ಜೀವ ಭಯದಿಂದ ತಪ್ಪಿಸಿಕೊಳ್ಳುವಂತೆ ಮಾಡಿದರು. ಆದಾಗ್ಯೂ, 13 ದಿನಗಳಲ್ಲಿ, ಬ್ರಿಟಿಷರು ತಲಚೇರಿ ಮತ್ತು ಮುಂಬೈನ ಸೈನ್ಯದೊಂದಿಗೆ  
ಮರಳಿ ಬಂದು ದಂಗೆಯನ್ನು ಹತ್ತಿಕ್ಕಿ, ನಂತರ ರೈತ ನಾಯಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಲಾಯಿತು ಎಂದು ಶಿಶಿಲಾ ಬರೆದಿದ್ದಾರೆ.

1998 ರಲ್ಲಿ ಅಂದರೆ ಭಾರತದ 50 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಹಲವಾರು ಸಂಘಟನೆಗಳು ಸುಳ್ಯದಿಂದ ಮಂಗಳೂರಿಗೆ ಪಾದಯಾತ್ರೆ ನಡೆಸಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿಪಡಿಸಲು ಸರ್ಕಾರದ ಗಮನವನ್ನು ಸೆಳೆದರೂ ಆದರೂ ಯಾವುದೇ ಪ್ರಯೋಜನವಾಗಲಿಲ್ಲ.


_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *