ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ

ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. 

Basavaraj Bommai

ಬೆಂಗಳೂರು: ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. 

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ, ಕೋವಿಡ್ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿ ವಿಸ್ತೃತವಾಗಿ ಚರ್ಚಿಸಿದರು. 

ಸಭೆಯಲ್ಲಿ ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು  ಪ್ರಾರಂಭಿಸಲು ಹಾಗೂ ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ತಜ್ಞ ವೈದ್ಯರಾದ ಡಾ. ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಲಾಕ್ ಡೌನ್

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು…

Basavaraj bommai

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಲಾಗಿದೆ. ಇಂದಿನಿಂದ ರಾತ್ರಿ 10 ಗಂಟೆ ಬದಲು ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದರು.

ಇನ್ನು ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದಲೇ ಶನಿವಾರ ಮತ್ತು ಭಾನುವಾರ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು.

ಕೇರಳ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ ನಲ್ಲಿ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *