ಹನಿಮೂನ್ ಮೂಡ್ ನಿಂದ ಹೊರಬಂದು ಜನರಿಗೆ ಸ್ಪಂದಿಸಲು ಸರ್ಕಾರಕ್ಕೆ ಪಾಟೀಲ್ ಆಗ್ರಹ

ಮಳೆಹಾನಿ, ಪ್ರವಾಹ ಪೀಡಿತ ಜನರಿಗೆ ಸರ್ಕಾರ ಕೊಡಬೇಕಾದ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನೂ ನೀಡಿಲ್ಲ. ಪರಿಹಾರದ ವಿಚಾರದಲ್ಲಿ 2019 ರ ವರ್ತಮಾನ ಮತ್ತೆ ಮರುಕಳಿಸುತ್ತಿ ದೆ. ಕೋವಿಡ್ ಎರಡನೇ ಅವಧಿಯಲ್ಲಿ ಮುಂಜಾಗೃತೆ ವಹಿಸದೆ ಸರ್ಕಾರ ನಿರ್ಲಕ್ಷ ಮಾಡಿದ್ದಕ್ಕೆ ಪರಿಣಾಮ ಎದುರಿಸಿದ್ದೇವೆ ಈಗ ಮೂರನೇ ಅಲೆಯ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಸರ್ಕಾರ ಸಾರ್ವಜನಿಕರ  ವಿರೋಧಿ ಎಂದು ಹಣೆಪಟ್ಟಿಕಟ್ಟಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಎಚ್ಚರಿಸಿದರು.

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕಾಳಜಿ ಕೇಂದ್ರಗಳ ವಾಸ್ತವ ಅವಲೋಕನ ಮಾಡಿದ ನಂತರ samajamukhi.net ನೊಂದಿಗೆ ಮಾತನಾಡಿದ ಅವರು ಕಳೆದ ಎಪ್ಪತ್ತು ವರ್ಷಗಳಲ್ಲಿ ಬೀಳದ ಮಹಾಮಳೆಯಿಂದ ಅಪಾರ ಹಾನಿಯಾಗಿದೆ. ಸರ್ಕಾರ ಘೋಷಣೆ ಮಾಡಿದಂತೆ ನಡೆದುಕೊಂಡಿಲ್ಲ ಹತ್ತು ಸಾವಿರ ತುರ್ತು ಪರಿಹಾರ ನೀಡಬೇಕಾದ ಹಣ ನೀಡಿಲ್ಲ. ಮಳೆ-ಪ್ರವಾಹದ ಹಾನಿ ಸಮೀಕ್ಷೆ ನಡೆಸುವಲ್ಲಿ ವಿಫಲವಾಗಿದೆ. ಸರ್ಕಾರದ ಕಾರ್ಯವೈಖರಿ ಟೀಕಿಸಲು ಇದು ಸಮಯವಲ್ಲ ಆದರೆ ಹನಿಮೂನ್ ಮೂಡ್ ನಲ್ಲಿರುವ ಸರ್ಕಾರದಿಂದ ಪ್ರವಾಹ ಪೀಡಿತರು, ಕೋವಿಡ್ ಬಾಧಿತರಿಗೆ ತೊಂದರೆ ಆಗಬಾರದು ಎಂದರು.


ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಸಾವಿರ ಎಕರೆ ಬೆಳೆ ನಾಶವಾಗಿದೆ. ಅರಣ್ಯ ಪ್ರದೇಶದಲ್ಲಿ ಮನೆ ಕಟ್ಟಿಕೊಂಡವರ ಮನೆಗಳೂ ಕುಸಿದು ಬಿದ್ದಿವೆ. ಸಂತೃಸ್ತರಿಗೆ ಶೀಘ್ರ ನಿವೇಶನ ನೀಡಿ ಶಾಶ್ವತ ಮನೆ ನಿರ್ಮಿಸಿಕೊಡಬೇಕು. ಕೋವಿಡ್ ಎರಡನೆ ಅಲೆಯ ನಿರ್ಲಕ್ಷದಿಂದ ಪಾಠ ಕಲಿತಿದ್ದೇವೆ ಇದು ಮೂರನೇ ಅಲೆ ಮುಂಜಾಗ್ರತೆಗೆ ಸೂಚನೆ, ಪ್ರವಾಹದ ವಿಚಾರವಿರಲಿ ಕೋವಿಡ್ ವಿಷಯವಿರಲಿ ಸೂಕ್ತ ಕ್ರಮ ಜರುಗಿಸದಿದ್ದರೆ ನಾಗರಿಕ ಸರ್ಕಾರ ಕರ್ತವ್ಯ ಲೋಪ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದ  ಪಾಟೀಲ್ ಅಧಿಕಾರಿಗಳಿಗೂ ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಸೂಚಿಸಿದರು.

ಭೀಕರ ಅಪಘಾತ: ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ನಿಧನ, ಮೂವರಿಗೆ ಗಂಭೀರ ಗಾಯ 

ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.

Accident car

ಅಂಕೋಲ(ಉತ್ತರ ಕನ್ನಡ ಜಿಲ್ಲೆ):ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.

ನೆರೆ ಪರಿಸ್ಥಿತಿ ಹಾಗೂ ಕೋವಿಡ್ ಗೆ ಸಂಬಂಧಿಸಿದಂತೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ಕರೆಯಲಾಗಿತ್ತು, ಸಭೆಗೆ ಆಗಮಿಸುವ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅಂಕೋಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *