ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ, ಮೋದಿ ಸರ್ಕಾರಕ್ಕೆ ವಿಪಕ್ಷಗಳಿಂದ ಬೆಂಬಲ!

ಯುಪಿ ಆಸೆಂಬ್ಲಿ ಚುನಾವಣೆ ಪರಿಗಣಿಸಿ ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ

ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Farmers_mainly_from_Punjab_Haryana_and_western_Uttar_Pradesh1

ಬಲ್ಲಿಯಾ: ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರೈತರ ಬೇಡಿಕೆ ಸರಿಯಾಗಿಯೇ ಇದೆ.  ರೈತರ ಆಕ್ರೋಶ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಮೋದಿ ಸರ್ಕಾರ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಉತ್ತರ ಪ್ರದೇಶ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಭಾನುವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು.

ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಿಂದಾಗಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡರು ಹಳ್ಳಿಗಳಿಗೆ ಪ್ರವೇಶ ನೀಡದಂತಾಗಿದೆ. ಭವಿಷ್ಯದಲ್ಲಿ ರೈತರು ಬಿಜೆಪಿ ಮುಖಂಡರಿಗೆ ಮುತ್ತಿಗೆ ಹಾಕಬಹುದು ಎಂದು ಅವರು ಹೇಳಿದರು. 

ಪೆಗಾಸಸ್ ಹಗರಣದಲ್ಲಿ ಸಂಸತ್ ಕಲಾಪಕ್ಕೆ ಅಡ್ಡಿ ಕುರಿತಂತೆ ಮಾತನಾಡಿದ ಸಿಂಗ್, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಪಕ್ಷಗಳ ಬೇಡಿಕೆಯನ್ನು ಪರಿಗಣಿಸಬೇಕು, ಒಂದು ವೇಳೆ ವಿಪಕ್ಷಗಳು ತನಿಖೆಗೆ ಬಯಸಿದರೆ, ಸರ್ಕಾರದ ಅದನ್ನು ಮಾಡಲು ಮುಂದಾಗಬೇಕು, ಸಂಸತ್ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

ಸಂವಿಧಾನದ ತಿದ್ದುಪಡಿ ಮಸೂದೆ: ಮೋದಿ ಸರ್ಕಾರಕ್ಕೆ ವಿಪಕ್ಷಗಳಿಂದ ಬೆಂಬಲ!

ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ. 

A view of Parliament building. (Photo | PTI)

ನವದೆಹಲಿ: ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ. 

ರಾಜ್ಯಸಭೆ-ಲೋಕಸಭೆಗಳಲ್ಲಿನ ವಿಪಕ್ಷ ನಾಯಕರ ಸಭೆಯ ನಂತರ ಮಾತನಾಡಿರುವ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನಕ್ಕೆ 127 ನೇ ತಿದ್ದುಪಡಿ ತರುವ ಮಸೂದೆಯನ್ನು ಎಲ್ಲಾ ವಿಪಕ್ಷಗಳೂ ಬೆಂಬಲಿಸಲಿವೆ ಎಂದು ತಿಳಿಸಿದ್ದಾರೆ. ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಇದಾಗಿದೆ. 

ವಿಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಈ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ತಿದ್ದುಪಡಿಯಿಂದ ರಾಜ್ಯಳಿಗೆ ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ಅಧಿಕಾರ ಮರಳಿ ಸಿಗಲಿದೆ. ಈ ಅಧಿಕಾರವನ್ನು ಕೇಂದ್ರಕ್ಕೆ ಮಾತ್ರ ಸೀಮಿತಗೊಳಿಸಿ 2021 ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 

“ದೇಶದಲ್ಲಿ ಅರ್ಧದಷ್ಟು ಜನಸಂಖ್ಯೆ ಹಿಂದುಳಿದ ವರ್ಗಕ್ಕೆ ಸೇರಿದ್ದಾಗಿದೆ. ಮಸೂದೆ ಮಂಡನೆ ಮಾಡಿದ ದಿನವೇ ಅಂಗೀಕರಿಸಲಾಗುತ್ತದೆ” ಎಂದು ಖರ್ಗೆ ಹೇಳಿದ್ದಾರೆ. ಸಂಸತ್ ನ ಮುಂಗಾರು ಅಧಿವೇಶನ ಕೊನೆಯ ವಾರಕ್ಕೆ ಬಂದಿದ್ದು, ಪೆಗಾಸಸ್ ಕುರಿತ ಚರ್ಚೆ ಹಾಗೂ ರೈತರ ಪ್ರತಿಭಟನೆಗಳ ವಿಷಯವಾಗಿ ಕೇಂದ್ರ ಸರ್ಕಾರವನ್ನು ಹಣಿಯುವುದಕ್ಕೆ ಕಾರ್ಯತಂತ್ರ ರೂಪಿಸಲು ವಿಪಕ್ಷಗಳು ಆ.09 ರಂದು ಸಭೆ ನಡೆಸಿದ್ದವು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಈ ಸಭೆಯಲ್ಲಿ ಭಾಗಿಯಾಗಿದ್ದರು. ಡಿಎಂಕೆ, ಟಿಎಂಸಿ, ಎನ್ ಸಿಪಿ, ಎಸ್ ಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಆರ್ ಜೆಡಿ, ಆಮ್ ಆದ್ಮಿ ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *