ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ ಪೊಲೀಸರು

ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ ನಾಲ್ಕು ಪ್ರಕರಣಗಳ ಪತ್ತೆ : ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ;

ಉತ್ತರ-ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ಮುಂಡಗೋಡ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಆದ ಸುಲಿಗೆ ಪ್ರಕರಣ, ಬೆಡಸಗಾಂವ ಹಾಗೂ ಕಲಕೊಪ್ಪ ಗ್ರಾಮದಲ್ಲಾದ ಮನೆಕಳ್ಳತನ ಮತ್ತು ಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನವನ್ನು ಕಳ್ಳತನ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಮೇಲಿಂದ ಮೇಲೆ ಆದ ಕಳ್ಳತನ ಹಾಗೂ ಸುಲಿಗೆ ಮಾಡಿದ ಆರೋಪಿತರನ್ನು ಪತ್ತೆ ಹಚ್ಚುವದು ಪೊಲೀಸ್ ಇಲಾಖೆಗೆ ಒಂದು ಸವಾಲಾಗಿತ್ತು. ಈ ಪ್ರಕರಣಗಳನ್ನು ಭೇದಿಸಲು ಶ್ರೀ ಪ್ರಭುಗೌಡ ಡಿ.ಕೆ ಪೊಲೀಸ್ ನಿರೀಕ್ಷಕರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಮುಂಡಗೋಡ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಕಳ್ಳತನ ಮಾಡಿರುವ ಆರೋಪಿತರ ಪತ್ತೆ ಕಾರ್ಯ ಕೈಗೊಂಡು ಆರೋಪಿತರಾದ….01].ಅಬ್ದುಲ್ ಸತ್ತಾರ @ ಮಲ್ಲಿಕ ತಂದೆ ಮೆಹಬೂಬ ಷರೀಪ್ ಶೇಖ್ ಪ್ರಾಯ-24 ವರ್ಷ ಸಾ||ಶೃಂಗೇರಿ ತಾ||ಹಾನಗಲ್ ಜಿ||ಹಾವೇರಿ 02].ಶ್ರೀಧರ @ ಸಿರಿ ತಂದೆ ಯಲ್ಲಪ್ಪ ಬಂಡಿವಡ್ಡರ ಪ್ರಾಯ-22 ವರ್ಷ ಸಾ||ಶೃಂಗೇರಿ ತಾ||ಹಾನಗಲ್ ಜಿ||ಹಾವೇರಿ ಇವರನ್ನು ಬಂಧಿಸಿ, ಆರೋಪಿತರರಿಂದ ರೂ. 01 ಲಕ್ಷಕ್ಕೂ ಅಧಿಕ ಮೌಲ್ಯದ 30 ಗ್ರಾಂ ಬಂಗಾರದ ಆಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಕಳ್ಳತನದಲ್ಲಿ ಭಾಗಿಯಾಗಿರುವ 3ನೇ ಅರೋಪಿತನು ತಲೆಮರೆಸಿಕೊಂಡಿದ್ದು, ಆತನ ಪತ್ತೆಯ ಕುರಿತು ಪತ್ತೆ ಕಾರ್ಯ ಮುಂದುವರೆದಿರುತ್ತದೆ. ಈ ಪ್ರಕರಣಗಳನ್ನು ಭೇದಿಸಲು ಶಿರಸಿ ಪೊಲಿಸ್ ಉಪಾಧೀಕ್ಷಕರಾದ ಶ್ರೀ ರವಿ ನಾಯ್ಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ. ಪ್ರಭುಗೌಡ ಡಿ.ಕೆ., ಪಿಎಸ್ಐ ಶ್ರೀ ಬಸವರಾಜ ಮಬನೂರ, ಪಿ.ಎಸ್.ಐ ಶ್ರೀ ನಿಂಗಪ್ಪ ಜಕ್ಕಣ್ಣವರ ಹಾಗೂ ಪೊಲೀಸ್ ಸಿಬ್ಬಂದಿಯವರಾದ ಧರ್ಮರಾಜ, ಗಣಪತಿ, ವಿನಾಯಕ, ತಿರುಪತಿ, ವಿನೋದಕುಮಾರ, ಅರುಣಕುಮಾರ, ಅಣ್ಣಪ್ಪ ಹಾಗೂ ಶರತಕುಮಾರ ರವರು ಭಾಗವಹಿಸಿ, ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಮುಂಡಗೋಡ ಪೊಲೀಸ್ ರವರ ಈ ಪತ್ತೆ ಕಾರ್ಯವನ್ನು ಈ ಮೂಲಕ ಪ್ರಶಂಸಿಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *