ಹೊಲ,ಗದ್ದೆ-ತೋಟಗಳ ದುರಸ್ಥಿಗೆ ಉದ್ಯೋಗಖಾತ್ರಿಯಲ್ಲಿ ಅವಕಾಶ

ಸಿದ್ದಾಪುರ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬಹಳಷ್ಟು ಹಾನಿಯಾಗಿದೆ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ 998600 ರೂ ಗಳನ್ನು ನೀಡಲಾಗಿದೆ. ತಾಲೂಕಿನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ 400% ಜಾಸ್ತಿಯಾಗಿದ್ದರಿಂದ ವಿಪರೀತ ಹಾನಿ ಸಂಭವಿಸಿದೆ. ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಮಂಗಳವಾರ ಮಿನಿವಿಧಾನಸೌಧದ ಸಭಾ ಭವನದಲ್ಲಿ ಕೋವಿಡ್ – 19 ಹಾಗೂ ಪ್ರವಾಹದಿಂದ ಹಾನಿಗೊಳಗಾದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಹಾಗೂ ಸುದ್ದಿಗೋಷ್ಠಿ ನಡೆಸಿ ತಾಲೂಕಿನಲ್ಲಿ 11 ಮನೆಗಳು ಸಂಪೂರ್ಣ ಹಾನಿಯಾಗಿರುತ್ತದೆ. ಇದರಲ್ಲಿ ಎಂಟು ಅಧಿಕೃತ ಮನೆಗಳಿಗೆ 95100 ಎಂಟು ರೂಪಾಯಿಗಳನ್ನು ನೀಡಲಾಗಿದೆ. ಮನೆಗೆ ನೀರು ಹೋಗಿ ಹಾನಿ ಸಂಭವಿಸಿದ ಮನೆಗಳಿಗೆ 3800 ರೂಪಾಯಿಗಳನ್ನು ನೀಡಲಾಗಿದೆ. ಗಾಳಿ-ಮಳೆಯಿಂದಾಗಿ 225 ವಿದ್ಯುತ್ ಕಂಬಗಳು ಹಾಗೂ 4 ಟ್ರಾನ್ಸ್ಮಿಟರ್ ಗಳು ಹಾನಿಯಾಗಿದ್ದು ಅವುಗಳನ್ನು ತಕ್ಷಣದಲ್ಲಿ ಸರಿಪಡಿಸಿ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯತ್ 167 ಕಿಲೋಮೀಟರ್ 80 ರಸ್ತೆಗಳು ಹಾಗೂ 12 ಬ್ರಿಜ್ ಗಳು ಎರಡು ಶಾಲೆ ಹಾಗೂ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಹಾನಿ ಉಂಟಾಗಿದೆ. ಪಿಡಬ್ಲ್ಯೂಡಿ 150 ಕಿಲೋಮೀಟರ್ ರಸ್ತೆ ಹಾಗೂ 24 ಬ್ರಿಜ್ ಗಳಿಗೆ ಹಾನಿಯಾಗಿರುತ್ತದೆ. ಬಾಳೂರ್, ಶಿರಗೋಡ್ಬೈಲ್, ಗೋರನಮನೆ ಬ್ರಿಜ್ ಗಳು ಸಂಪೂರ್ಣ ಹಾನಿಯಾಗಿದೆ. ತಾಲೂಕಿನಲ್ಲಿ 12 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು 784 ಜನ ಅಶ್ರಯ ಪಡೆದಿದ್ದರು. ಹಾಲಿ 6 ಕಾಳಜಿ ಕೇಂದ್ರಗಳಲ್ಲಿ 136 ಜನರು ಆಶ್ರಯ ಪಡೆದಿದ್ದಾರೆ. ಪ್ರಕೃತಿ ವಿಕೋಪ ದಿಂದ ಒಂದು ಸಾವು ಸಂಭವಿಸಿದ್ದು 24 ಗಂಟೆಯ ಒಳಗೆ ಪರಿಹಾರ ವಿತರಿಸಲಾಗಿದೆ.
ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದಾಗ ಜಿಲ್ಲೆಗೆ 200 ಕೋಟಿರೂ. ನೀಡುವ ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಇವೆಲ್ಲವನ್ನು ಆದ್ಯತೆಯ ಮೇಲೆ ಸರಿಪಡಿಸಲಾಗುವುದು.
ಕೊವಿಡ್ ೩ನೇ ಅಲೆ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಈಗಾಗಲೇ ನಾವು, ತಾಲೂಕಾಡಳಿತ ಸಿದ್ಧವಾಗಿದ್ದೇವೆ. ಕೋವಿಡ್ ಚಿಕಿತ್ಸೆ ಬೇಕಾಗುವ ಅಗತ್ಯತೆ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವಂತೆ ತಹಸೀಲ್ದಾರರಿಗೆ ಹಾಗೂ ತಾಪಂ ಮುಖ್ಯಾಧಿಕಾರಿಗೆ ಸೂಚಿಸಿದ್ದೇನೆ ಎಂದರು.
ಅತಿಹೆಚ್ಚು ಮಳೆಯಾದ ಕಾರಣ ಜನರಿಗೆ ಸಾಕಷ್ಟು ತೊಂದರೆಯಾಯಿತು ಆದರೆ ಸ್ಥಳೀಯ ಆಡಳಿತ, ಸಂಘ-ಸಂಸ್ಥೆಗಳ ಸಹಾಯದಿಂದ ಸಮರ್ಥವಾಗಿ ಎದುರಿಸಿದ್ದೇವೆ.
ಅತಿಕ್ರಮಣದಲ್ಲಿದ್ದ ಮನೆಗಳಿಗೆ ಹಾನಿಯಾದರೆ ಪರಿಹಾರ ನೀಡುವ ಬಗ್ಗೆ ಹಾಗೂ ಮನೆಗೆ ನೀರು ನುಗ್ಗಿದ್ದಕ್ಕೆ ಹತ್ತುಸಾವಿರರೂ.ನೀಡುವ ಸರಕಾರದ ಆದೇಶದ ನಿರೀಕ್ಷೆಯಲ್ಲಿದ್ದೇವೆ.

25 ಹೆಕ್ಟೇರ್ ಭತ್ತದ ಪ್ರದೇಶ ಕೊಚ್ಚಿಕೊಂಡು ಹೋಗಿದ್ದರೆ 112 ಹೆ.ಪ್ರದೇಶ ಹಾನಿಯಾಗಿದೆ. 60 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿಯಾಗಿದೆ ಇನ್ನೂ ಸಮೀಕ್ಷೆ ನಡೆಯುತ್ತಿದೆ
ಈಗಾಗಲೇ ಉದ್ಯೋಗ ಖಾತ್ರಿ ಯೋಜನೆಯ ಕ್ರಿಯಾ ಯೋಜನೆ ಮುಗಿದಿದ್ದು ಹೊಲ-ಗದ್ದೆ, ತೋಟಗಳ ದುರಸ್ತಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸ ಕ್ರೀಯಾಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಸರಕಾರದಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ವ್ಯಾಕ್ಸಿನೇಷನ್ ಕೊರತೆ ಇದೆ. ಬೇಡಿಕೆ ಹೆಚ್ಚಿರುವುದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
ಅತಿಕ್ರಮಣ ದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದು ಮನೆ ಕರ ಕಟ್ಟುತ್ತಿರುವ ಹಾಗೂ ಮನೆ ನಂಬರ್ ಹೊಂದಿರುವ ಹೊಂದಿರುವವರಿಗೆ ಮನೆ ನಿರ್ಮಿಸಲು ಸರ್ಕಾರದಿಂದ ಆದೇಶವಾಗಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ತಹಶಿಲ್ದಾರ ಪ್ರಸಾದ್ ಎಸ್.ಎ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಸಿಪಿಐ ಕುಮಾರ ಕೆ, ಪಿಡಬ್ಲ್ಯೂಡಿ , ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *