ಏನನ್ನೂ ಅಪೇಕ್ಷಿಸದ ಸ್ವಾತಂತ್ರ್ಯ ಸೇನಾನಿಗೆ ಅಭಿಮಾನದ ಸನ್ಮಾನ

ನಾಳೆ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ. ಭಾ ರತ ಮಾತೆಯನ್ನು ಬ್ರಿಟೀಷರ ಸಂಕೋಲೆಯಿಂದ ಬಿಡಿಸಲು ಹೋರಾಡಿದ ಜನರು ಲಕ್ಷಾಂತರ ಅವರಲ್ಲಿ ಬಹುತೇಕರು ಬ್ರಿಟೀಷರ ದಬ್ಬಾಳಿಕೆ, ಹಿಂಸೆಗೆ ಎದೆಯೊಡ್ಡಿ ಅಮರರಾದರೆ ಕೆಲವರು ಸ್ವಾತಂತ್ರ್ಯಾ ನಂತರ ಸ್ವಾತಂತ್ರ್ಯದ ಸೊಬಗನ್ನು ಕಂಡವರು. ಈ ಸ್ವಾತಂತ್ರ್ಯ ಸೇನಾನಿಗಳಲ್ಲಿ ಈಗಲೂ ಕೆಲವರು ಜೀವಂತವಿರುವುದು ವಿಶೇಶ.
ಸಾವಿರಾರು ಜನರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿಯ  ಅಂಕೋಲಾ ಮತ್ತು ಮಲೆನಾಡಿನ ಸಿದ್ಧಾಪುರ ಮುಂಚೂಣಿಯಲ್ಲಿದ್ದವು.ಅಂಕೋಲಾದಲ್ಲಿ ಉಪ್ಪಿನ ಸತ್ಯಾಗ್ರಹ ಚಲೇಜಾವ್ ಚಳುವಳಿ ಬಿರುಸಾಗಿ ನಡೆದಿದ್ದರೆ ಸಿದ್ಧಾಪುರದಲ್ಲಿ ಕರನಿರಾಕರಣೆ ಚಳುವಳಿ ಪ್ರಖರವಾಗಿ ನಡೆದಿತ್ತು. ಈ ಚಳವಳಿಗಳ ಕತೆ ಹೇಳುವ ಜನರು, ಸ್ವಾ ತಂತ್ರ್ಯ ಸೇನಾನಿಗಳು ಈಗಿಲ್ಲ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಲೂ ಮೂರು ಜನ ಸ್ವಾತಂತ್ರ್ಯ ಹೋರಾಟಗಾರರು ಬುಕಿರುವುದು ವಿಶೇಶ. ಇವರಲ್ಲಿ ಸಿದ್ಧಾಪುರದ ಮನಮನೆಯ ಗಡದ್ ಬಂಗಾರಪ್ಪ ಒಬ್ಬರು.


ಹರೆಯದಲ್ಲಿ ಸ್ವಾತಂತ್ರ್ಯ ಹೋರಾಟದ ಅಂಗವಾಗಿ ಸೇತುವೆ ಮುರಿಯುವುದು, ತಂತಿ ತುಂಡರಿಸುವುದು ಮಾಡಿದ ಈ ಗಡದ್ ಬಂಗಾರಪ್ಪ ಬ್ರಟೀಷರ ವಿರುದ್ಧ ಹೋರಾಟ ಮಾಡಿದ ತಂಡದ ಒಬ್ಬ ಯುವಕ. ಅಧೀಕೃತ ದಾಖಲೆಗಳಿಲ್ಲದ ಬಂಗಾರಪ್ಪ ತಮಗೆ ಈಗ ನೂರು ವರ್ಷ ದಾಟಿದೆ ಎಂದರೂ ನೂರರ ಆಸುಪಾಸಿನಲ್ಲಿರುವ ಬಂಗಾರಪ್ಪ ಕಳೆದ ಕೆಲವು ವರ್ಷಗಳ ಹಿಂದಿನವರೆಗೂ ಸ್ಥಳಿಯ ಗ್ರಾಮ ಪಂಚಾಯತ್, ಪ್ರಾಥಮಿಕ ಶಾಲೆಗಳಿಗೆ ತೆರಳಿ ಸ್ವಾತಂತ್ರ್ಯದ ಸಂಬ್ರಮದಲ್ಲಿ ಪಾಲ್ಗೊಳ್ಳುತಿದ್ದರು.


ಈಗ ವಯೋಸಹಜ ಆಯಾಸ, ಮರೆವಿನಿಂದಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳಿಗೆ ತೆರಳುತಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ನೆಲದ ಈ ಹೋರಾಟಗಾರನನ್ನು ಕಂಡು ಸನ್ಮಾನಿಸಲು ಈಗಲೂ ಸರ್ಕಾರದ ಅಧಿಕಾರಿಗಳು, ಸಾರ್ವಜನಿಕರು ಬರುತ್ತಾರೆ. ಈ ವಯಸ್ಸಿನಲ್ಲಿ ಕೂಡಾ ತಮ್ಮ ಹೋರಾಟದ ಘಟನೆಗಳ ಸ್ಮರಣೆ, ಆಗ ಸಂಘಟನೆಗೆ ಬಳಸುತಿದ್ದ ಹಾಡುಗಳನ್ನು ಹಾಡುವ ಈ ಅಜ್ಜ ಏನನ್ನೋ ಮರೆತಂತೆ ಏನನ್ನೋ ಕಳೆದುಕೊಂಡಂತೆ ಭಾವುಕರಾಗುತ್ತಾರೆ.
ಹವ್ಯಾಸಗಳಿಲ್ಲದ ಸರಳ, ಸಹಜ ಬದುಕನ್ನು ಬಾಳುತ್ತಿರುವ ಮನ್ಮನೆ ಬಂಗಾರಪ್ಪ ಸ್ವಾತಂತ್ರ್ಯ ಹೋರಾಟದ ನಂತರ ಸಾಗರ ಕಾಗೋಡಿನಲ್ಲಿ ನಡೆದ ಕಾಗೋಡು ರೈತ ಜನಾಂದೋಲನದಲ್ಲಿ ಪಾಲ್ಗೊಂಡವರು.

ಮಕ್ಕಳು ಮೊಮ್ಮ ಕ್ಕಳ ತುಂಬು ಕುಟುಂಬದ ಈ ಸ್ವಾತಂತ್ರ್ಯ ಸೇನಾನಿ ಈಗ ನಡೆಯುತ್ತಿರುವ ಅಮೃತಮಹೋತ್ಸವದ ವಿಷಯ ತನಗೆ ತಿಳಿದಿಲ್ಲ ಈಗ ಎ ನು ನಡೆಯುತ್ತಿದೆ ಅದೂ ತಿಳಿಯುತ್ತಿಲ್ಲ ಎನ್ನುತ್ತಾರೆ. ಕಳೆದ ಎಪ್ಪತೈದು ವರ್ಷಗಳಲ್ಲಿ ಸ್ವಾತಂತ್ರ್ಯ ಸೇನಾನಿಗಳೇ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡು ತಮ್ಮ ನೆನಪುಗಳನ್ನು ಹಂಚಿಕೊಳ್ಳುವ ಸಂಬ್ರಮವನ್ನು ನಾಡು ನೋಡಿದೆ. ಮುಂದಿನ ದಿನಗಳಲ್ಲಿ ಸ್ವಾತಂತ್ರ್ಯ ಸೇನಾನಿಗಳನ್ನು ಕಾಣಲೂ ಸಿಗದ ಸ್ಥಿತಿಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಲಿವೆ. ದೇಶದ ಸ್ವಾತಂತ್ರ್ಯದ ಅಮೃತಮಹೋತ್ಸವದಲ್ಲಿ ಜೀವಂತವಿರುವ ಸ್ವಾತಂತ್ರ್ಯ ಹೋರಾಟಗಾರರು ಈಗ ಆಕರ್ಷಣೆಯ ಕೇಂದ್ರಬಿಂದುವಾಗಿರುವುದು ಆಶ್ಚರ್ಯವೇನಲ್ಲ.

ಈ ಸ್ವಾತಂತ್ರ್ಯ ಸೇನಾನಿ ಗಡದ್ ಬಂಗಾರಪ್ಪನವರನ್ನು ಕಾಂಗ್ರೆಸ್ ಪಕ್ಷ, ಜಿಲ್ಲಾಡಳಿತ, ಸಿದ್ಧಾಪುರ ತಾಲೂಕಾ ಆಡಳಿತಗಳು ಪ್ರತ್ಯೇಕವಾಗಿ ಸನ್ಮಾನಿಸಿ ಅಭಿನಂದಿಸಿದ್ದು ವಿಶೇಶ.

ಸಿದ್ಧಾಪುರ, ಇಲ್ಲಿಯ ಬೇಡ್ಕಣಿ ಸ್ವ ಸಹಾಯ ಸಂಘಗಳ ಸಂಜೀವಿನಿ ಒಕ್ಕೂಟ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸ್ವಚ್ಚತಾ ಕಾರ್ಯ ಕ್ರಮ , ವನಮಹೋತ್ಸವ ಮತ್ತು ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಬೇಡ್ಕಣಿ ಗ್ರಾಮ ಪಂಚಾಯತ್ ಆವಾರದಲ್ಲಿ ಶನಿವಾರ ನಡೆಸಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಾಸಂತಿ ಹಸ್ಲರ್, ಉಪಾಧ್ಯಕ್ಷೆ ರೇಣುಕಾ ನಾಯ್ಕ, ಸದಸ್ಯರಾದ ಪದ್ಮಪ್ರಿಯಾ ನಾಯ್ಕ, ಒಕ್ಕೂಟ ದ ಅಧ್ಯಕ್ಷ ರಾದ ನಾಗವೇಣಿ ನಾಯ್ಕ, ಒಕ್ಕೂಟ ದ ಮಾಲತಿ ನಾಯ್ಕ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಪಾಲ್ಗೊಂಡಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *