ಮೋದಿ ಭಾರತದ ಕಿಂಗ್ ಅಲ್ಲ……. ಯೋಗಿ ಆದಿತ್ಯನಾಥ್ ವಿರುದ್ಧ ಅಮಿತಾಬ್ ಸ್ಫರ್ಧೆ….!

ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಈ ಮಾಜಿ ಐಪಿಎಸ್ ಅಧಿಕಾರಿ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ. 

UP_CM1

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ. 

ಚುನಾವಣೆ ಸನಿಹವಾಗುತ್ತಿರುವಂತೆಯೇ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲು ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಉತ್ಸುಕರಾಗಿದ್ದಾರೆ. 

https://imasdk.googleapis.com/js/core/bridge3.474.0_en.html#goog_596088374

https://imasdk.googleapis.com/js/core/bridge3.474.0_en.html#goog_596088377

2020 ರ ಮಾರ್ಚ್ ನಲ್ಲಿ ಅವಧಿಗೂ ಮುನ್ನವೇ ಸೇವೆಗೆ ರಾಜೀನಾಮೆ ನೀಡಿದ್ದ ಅಮಿತಾಬ್ ಠಾಕೂರ್ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿಯ ಪತ್ನಿ ನೂತನ್ ಠಾಕೂರ್ ಈ ಸ್ಪರ್ಧೆ ತನ್ನ ಪತಿಯ ತತ್ವ-ಸಿದ್ಧಾಂತಗಳಿಗಾಗಿ ಎಂದು ಹೇಳಿದ್ದಾರೆ. 

“ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ, ಅನುಚಿತ, ದಮನಕಾರಿ, ಕಿರುಕುಳ ಮತ್ತು ತಾರತಮ್ಯದಿಂದ ಕೂಡಿದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಆದ್ದರಿಂದ ಅಮಿತಾಬ್ ಅವರು ಆದಿತ್ಯನಾಥ್ ಸ್ಪರ್ಧಿಸುವ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ನೂತನ್ ಠಾಕೂರ್ ಹೇಳಿದ್ದಾರೆ. 

“ಇದು ತತ್ವ-ಸಿದ್ಧಾಂತಗಳಿಗಾಗಿನ ಸ್ಪರ್ಧೆಯಾಗಿದ್ದು ಯೋಗಿ ಆದಿತ್ಯನಾಥ್ ಅವರ ತಪ್ಪು ನಿರ್ಣಯಗಳನ್ನು ಪ್ರತಿಭಟನೆ ನಡೆಸಲಿದ್ದೇವೆ” ಎಂದು ಹೇಳಿದ್ದಾರೆ. 2028 ರಲ್ಲಿ ನಿವೃತ್ತರಾಗಬೇಕಿದ್ದ ಅಮಿತಾಬ್ ಠಾಕೂರ್ ಗೆ 2021 ರ  ಮಾರ್ಚ್ 23 ನಲ್ಲಿ ಕಡ್ಡಾಯ ನಿವೃತ್ತಿ ನೀಡಲಾಗಿತ್ತು.  (kpc)

ಮೋದಿ ಭಾರತದ ಕಿಂಗ್ ಅಲ್ಲ’: ಪ್ರಧಾನಿಯ ಆರ್ಥಿಕ, ವಿದೇಶಿ ನೀತಿಗಳಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ

ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ.

Subramanian swamy

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ.

ತಮ್ಮ ಆಯ್ಕೆಯ ಸಚಿವ ಸ್ಥಾನ ನೀಡದಿರುವುದು ನಿಮ್ಮ ಅಸಮಾಧಾನಕ್ಕೆ ಕಾರಣ ಎಂದು ವಾದಿಸಿದ ಟ್ವಿಟರ್ 
ಬಳಕೆದಾರರೊಬ್ಬರಿಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ನಾನು ಬೇರೆ ಕಾರಣಕ್ಕಾಗಿ “ಮೋದಿ ವಿರೋಧಿ” ಎಂದು ಹೇಳಿದ್ದಾರೆ.

“ನಾನು ಆರ್ಥಿಕತೆ ಮತ್ತು ವಿದೇಶಾಂಗ ನೀತಿಗಾಗಿ ಮೋದಿ ವಿರೋಧಿ ಮತ್ತು ಅದರ ಬಗ್ಗೆ ಯಾವುದೇ ಜವಾಬ್ದಾರಿಯುತರೊಂದಿಗೆ ಚರ್ಚಿಸಲು ನಾನು ಸಿದ್ಧ. ಪ್ರಜಾಪ್ರಭುತ್ವದ ಬಗ್ಗೆ ನೀವು ಕೇಳಿದ್ದೀರಾ? ಮೋದಿ ಭಾರತದ ರಾಜ ಅಲ್ಲ” ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ನಾನು ಸಮರ್ಥ ಮತ್ತು ಜವಾಬ್ದಾರಿಯುತವಾದ ಯಾರೊಂದಿಗೆ ಬೇಕಾದರೂ “ಚರ್ಚೆಗೆ” ಸಿದ್ಧ ಎಂದು ಸ್ವಾಮಿ ಹೇಳಿದ್ದಾರೆ.

ಭಾರತದ ವಿದೇಶಾಂಗ ನೀತಿಗಳ ಪರಿಣಾಮಕಾರಿತ್ವವನ್ನು ಸ್ವಾಮಿ ಪ್ರಶ್ನಿಸಿದ್ದು, ಇದು ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿರ್ಧಾರಗಳಿಂದಾಗಿ “ಅವ್ಯವಸ್ಥೆ” ಯಾಗಿದೆ ಎಂದಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *