id-75-3- ಭೂಮಿಹಕ್ಕು ವಂಚಿತರಿಗೆಲ್ಲಿ 47 ರ ಸ್ವಾತಂತ್ರ್ಯ..? ಶಿರಸಿಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ವಿಶೇಶ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ ಹೋರಾಟ ನಡೆದುಕೊಂಡು ಬಂದಿದೆ.


ರಾಮಕೃಷ್ಣ ಹೆಗಡೆಯವರ ರಾಜಕೀಯದ ದಿನಗಳಲ್ಲಿ ಸಂಸದ ದಿ. ದಿನಕರ ದೇಸಾಯಿ ಈ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಯನ್ನು ಕೇಂದ್ರದ ವರೆಗೆ ಪರಿಚಯಿಸಿ, ಪರಿಹಾರ ಕೇಳಿದ್ದರು. ಅವರ ನಂತರ ಈ ಅರಣ್ಯ ಅತಿಕ್ರಮಣದಾರರ ಪರವಾಗಿ ನೂರಾರು ಜನರ ನೇತೃತ್ವದಲ್ಲಿ ಸಾವಿರಾರು ಬಾರಿ ಚಳವಳಿ, ಹೋರಾಟಗಳಾಗಿವೆ. ಕಳೆದ ಮೂವತ್ತು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ಹೋರಾಟ ಮಾಡುತ್ತಿರುವ ಜಿಲ್ಲಾ ಅರಣ್ಯ ಹಕ್ಕು ಹೋರಾಟ ಸಮೀತಿ ಇಂದು ಶಿರಸಿಯಲ್ಲಿ ವಿಭಿನ್ನವಾಗಿ 75 ನೇ ಸ್ವಾತಂ ತ್ರ್ಯೋತ್ಸವ ಆಚರಿಸಿತು.


ಜಿಲ್ಲಾ ಅರಣ್ಯ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ರವೀಂದ್ರನಾಯ್ಕ ನೇತೃತ್ವದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನಡೆಸಿ,ಮೆರವಣಿಗೆ ಮಾಡಲಾಯಿತು. ಈ ಸಮಾರಂಭ,  ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಅರಣ್ಯ ಅತಿಕ್ರಮಣದಾರರು ಅವರ ಮುಖಂಡರು ಭೂಮಿಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ  ಎಂದು ಸಂವಿಧಾನಾತ್ಮಕವಾಗಿ ಪ್ರಶ್ನಿಸಿದರು.


ಶಿರಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ತಮಗೆ ಅರಣ್ಯ ಇಲಾಖೆ, ಸರ್ಕಾರಿ ವ್ಯವಸ್ಥೆಯಿಂದ ಆಗುತ್ತಿರುವ ತೊಂದರೆ ಅನಾವರಣ ಮಾಡಿದರು. ಸರ್ಕಾರ, ನ್ಯಾಯಾಲಯದ ಆದೇಶಗಳಿಂದ ತಮ್ಮನ್ನ ಒಕ್ಕಲೆಬ್ಬಸಿದರೆ ತಮ್ಮ ಮುಂದಿನ ಪೀಳಿಗೆಯ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ಸ್ವಾತಂತ್ರ್ಯ ಹೋರಾಟದ ತವರು ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಾರು ಜನರು ಭೂಮಿಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ ಎಂದು ಪ್ರಶ್ನಿಸಿದ್ದು, ಇದೇ ಸಂದರ್ಭದಲ್ಲಿ ಯೋಧರನ್ನು ಸನ್ಮಾನಿಸಿ ಗೌರವಿಸಿದ್ದು ಈ ದಿನದ 75 ನೇ ಸ್ವಾತಂತ್ರ್ಯೋತ್ಸವದ ವಿಶೇಶವಾಗಿತ್ತು.

ಪ್ರಧಾನಿ ಹೇಳುವುದೊಂದು, ಮಾಡುವುದೊಂದು; 7 ವರ್ಷದಿಂದ ಹೇಳಿದ್ದನ್ನೇ ಹೇಳುತ್ತಿದ್ದಾರೆ: ಕಾಂಗ್ರೆಸ್ ಆಕ್ರೋಶ

ಕಳೆದ 7 ವರ್ಷಗಳಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದನ್ನೇ ಮತ್ತೆ, ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ವಿನಃ ಯಾವುದನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.

Mallikarjun Kharge

ನವದೆಹಲಿ: ಕಳೆದ 7 ವರ್ಷಗಳಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದನ್ನೇ ಮತ್ತೆ, ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ವಿನಃ ಯಾವುದನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.

ಸ್ವಾಂತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ  ಹಿರಿಯ ಕಾಂಗ್ರೆಸ್ ಮುಖಂಡ, ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಹೇಳುವುದು ಒಂದು ಮಾಡುವುದು ಮತ್ತೊಂದು ಎಂಬ ಹಾದಿಯಲ್ಲಿ ಸಾಗಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

ರೈತರ ಭವಿಷ್ಯಕ್ಕೆ ಹಾನಿಯಾಗುವ  ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್  ಪಡೆಯಬೇಕೆಂದು ಒತ್ತಾಯ ಮಾಡಿ ದೇಶದ ರೈತರು ಒಂದು ವರ್ಷಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದರೂ  ಸರ್ಕಾರ ಸ್ಪಂದಿಸುತ್ತಿಲ್ಲ, ರೈತ ನಾಯಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಬರಿ ಘೋಷಣೆಯಿಂದ ಜನರನ್ನು ಮರಳು  ಮಾಡುವುದೇ ಸರ್ಕಾರದ ಪ್ರಮುಖ ನೀತಿ, ಗುರಿಯಾಗಿದೆ  ಎಂದು  ಟೀಕಿಸಿದರು.

ಕಳೆದ 7 ವರ್ಷಗಳಿಂದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹಿಂದೆ ಹೇಳಿದ ವಿಷಯಗಳನ್ನು ಮತ್ತೆ, ಮತ್ತೆ ಪ್ರಸ್ತಾಪ ಮಾಡುತ್ತಿದ್ದಾರೆ. ದುರ್ಬಲ ವರ್ಗಗಳಿಗೆ ಮತ್ತು ಸಣ್ಣ ರೈತ ಕುಟುಂಬಗಳಿಗೆ ಅನುಕೂಲವಾಗುವಂತಹ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *