id-75-2- ಉತ್ತಮ ಕೆಲಸದ ಮೂಲಕ ಸ್ವಾತಂತ್ರ್ಯ ಗೌರವಿಸಲು ತಹಸಿಲ್ದಾರ್ ಪ್ರಸಾದ್ ಕರೆ

ಹಲವರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಲಭಿಸಿರುವ ಸ್ವಾತಂತ್ರ್ಯ ಗೌರವಿಸುವುದೆಂದರೆ ಉತ್ತಮ ಕೆಲಸದಿಂದ ಸಾರ್ವಜನಿಕರನ್ನು ಗೌರವಿಸುವುದು ಎಂದು ತಹಸಿಲ್ಧಾರ್ ಪ್ರಸಾದ್ ಎಸ್.ಎ. ಹೇಳಿದರು. ಸಿದ್ಧಾಪುರದ ನೂತನ ತಹಸಿಲ್ಧಾರ್ ಕಛೇರಿಯಲ್ಲಿ ನಡೆದ ಮೊದಲ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಅವರು ಪರತಂತ್ರದ ನೋವು, ಹಿಂಸೆ ನಮಗಿಲ್ಲ, ನಾವೂ ಸಾರ್ವಜನಿಕರಿಗೆ ಹಿಂಸಿಸಿದರೆ ಪ್ರಜಾಪ್ರಭುತ್ವಕ್ಕೆ, ಸ್ವಾತಂತ್ರ್ಯಕ್ಕೆ ಗೌರವ ಬರುವುದಿಲ್ಲ ಉತ್ತಮ ಕೆಲಸದ ಮೂಲಕ ಸ್ವಾತಂತ್ರ್ಯ, ಸ್ವಾತಂತ್ರ್ಯಕ್ಕಾಗಿ ದುಡಿದ, ಮಡಿದ ಧೀರರಿಗೆ ಗೌರವ ಸಲ್ಲಿಸಬೇಕು ಎಂದರು.

ನಂತರ ನೆಹರೂ ಮೈದಾನದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾರತ ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿ ಪಾತ್ರ ಮಹತ್ವದ್ದು, ಮಹಾತ್ಮ ಗಾಂಧಿಯವರೊಂದಿಗೆ ಲಕ್ಷಾಂತರ ಜನ ಸ್ವಾತಂತ್ರ್ಯ ಹೋರಾಟಮಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿದ್ದಾರೆ ಅಂಥವರ ಸ್ಮರಣೆ ಮಾಡುತ್ತಾ ಅಭಿವೃದ್ಧಿಯೊಂದಿಗೆ ದೇಶ ಮುನ್ನಡೆಸಲು ಸಹಕರಿಸುವುದೇ ಪ್ರತಿಯೊಬ್ಬ ನಾಗರಿಕ ದೇಶದ ಸ್ವಾತಂತ್ರ್ಯ, ಸ್ವಾತಂತ್ರ್ಯ ಹೋರಾಟಕ್ಕೆ ನೀಡುವ ಕೊಡುಗೆ ಎಂದರು. ಇದೇ ಸಮಯದಲ್ಲಿ ತಾಲೂಕಿನಲ್ಲಿ ಪಿ.ಯು.ಸಿ. ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಗೌರವಿಸಿ, ಅಭಿನಂದಿಸಲಾಯಿತು.

75ನೇ ಸ್ವಾತಂತ್ರ್ಯ ದಿನಾಚರಣೆ: ಜನತೆಗೆ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

CM Basavaraj bommai

ಬೆಂಗಳೂರು: ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಭಾರತೀಯರಿಗೆ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವದ ಹಾರ್ದಿಕ ಶುಭಾಶಯಗಳು. ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ ಎಂದು ಹೇಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *