independent-75- ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲಾದ ಪಾತ್ರ

ಸ್ವಾತಂತ್ರ್ಯ ಸಂಗ್ರಾಮ: ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲಾದ ಪಾತ್ರ

ಏಪ್ರಿಲ್ 13, 1930, ಕಾಂಗ್ರೆಸ್ ನಾಯಕ ಎಂಪಿ ನಾಡಕರ್ಣಿ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರ ಯಾತ್ರೆ ಅಂಕೋಲ ಹತ್ತಿರ ಸಮುದ್ರ ತೀರಕ್ಕೆ ಸಾಗಿತ್ತು. ಸಮುದ್ರ ನೀರನ್ನು ಮಡಕೆಯಲ್ಲಿ ತುಂಬಿ, ಉಪ್ಪು ಮಿಶ್ರಿತ ಮರಳನ್ನು ತುಂಬಿಕೊಂಡು ಅಂಕೋಲಕ್ಕೆ ಬಂದರು.

Pujegere, 1.5km from Ankola, was selected as the venue for the Ankola Salt Satyagraha

ಅಂಕೋಲ: ಏಪ್ರಿಲ್ 13, 1930, ಕಾಂಗ್ರೆಸ್ ನಾಯಕ ಎಂಪಿ ನಾಡಕರ್ಣಿ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರ ಯಾತ್ರೆ ಅಂಕೋಲ ಹತ್ತಿರ ಸಮುದ್ರ ತೀರಕ್ಕೆ ಸಾಗಿತ್ತು. ಸಮುದ್ರ ನೀರನ್ನು ಮಡಕೆಯಲ್ಲಿ ತುಂಬಿ, ಉಪ್ಪು ಮಿಶ್ರಿತ ಮರಳನ್ನು ತುಂಬಿಕೊಂಡು ಅಂಕೋಲಕ್ಕೆ ಬಂದರು.

ಅವರು ಮೂರು ಕಲ್ಲುಗಳಿಂದ ತಾತ್ಕಾಲಿಕ ಒಲೆಯನ್ನು ನಿರ್ಮಿಸಿದರು. ನೀರನ್ನು ಕಲ್ಲಿನ ಉಪ್ಪು ಆಗುವವರೆಗೆ ಬಿಸಿ ಮಾಡಿದರು. ಉಪ್ಪಿನ ಮೊದಲ ಚೀಲವನ್ನು ಹರಾಜು ಹಾಕಲಾಯಿತು, ಸ್ಥಳೀಯರಾದ ಹೊನ್ನಪ್ಪ ದೇವಿ ನಾಯಕ್ ಇದನ್ನು 30ರೂಪಾಯಿಗೆ ಖರೀದಿಸಿದರು. ಈ ರೀತಿ ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹವು ಆರಂಭವಾಯಿತು. ನಂತರ ದಕ್ಷಿಣದಲ್ಲಿ ಅತಿದೊಡ್ಡ ಸ್ವಾತಂತ್ರ್ಯ ಚಳವಳಿಯಾಗಿ ರೂಪುಗೊಂಡಿತು.

ಮಹಾತ್ಮ ಗಾಂಧಿಯವರ ಮಾರ್ಚ್ 1930 ರ ದಂಡಿ ಸತ್ಯಾಗ್ರಹ ರಾಜ್ಯದ ಸ್ವಾತಂತ್ರ್ಯ ಹೋರಾಟ ನಾಯಕರಿಗೆ ಹುಬ್ಬಳ್ಳಿಯಲ್ಲಿ ಪ್ರೇರಣೆ ನೀಡಿತು, ಇಲ್ಲಿಯೂ ಇದೇ ರೀತಿಯ ಸಾಧನೆ ಮಾಡಲಾಯಿತು. ಅಂಕೋಲಾದ ಕಾಂಗ್ರೆಸಿಗರು, ನಾಡವರ್ ಸಮುದಾಯಕ್ಕೆ ಸೇರಿದವರು, ಅವರಿಗೆ ಉತ್ತಮ ಶೈಕ್ಷಣಿಕ ಹಿನ್ನೆಲೆಯಾಗಲಿ ಅಥವಾ ಹಣಕಾಸಿನ ಬೆಂಬಲವಾಗಲಿ ಇರಲಿಲ್ಲ. ಸತ್ಯಾಗ್ರಹವನ್ನು ತಮ್ಮ ಕರಾವಳಿ ಗ್ರಾಮದಲ್ಲಿ ನಡೆಸಬೇಕು ಎಂದು ಅವರು ಒತ್ತಾಯಿಸಿದರು. 1929 ರಲ್ಲಿ ಸತ್ಯಾಗ್ರಹಕ್ಕೆ ಅಂಕೋಲಾ ಅತ್ಯಂತ ಸೂಕ್ತ ಸ್ಥಳವಾಗಿದೆ ಎಂದು ಕಾಂಗ್ರೆಸ್ ನಾಯಕ ಹನುಮಂತ ರಾವ್ ಕೌಜಲಗಿ ವರದಿ ಮಾಡಿದಾಗ ಉಪ್ಪಿನ ಸತ್ಯಾಗ್ರಹವನ್ನು ಮೊದಲೇ ನಿರ್ಧರಿಸಲಾಯಿತು.

ಸ್ಥಳೀಯ ನಾಯಕರು ಅಂಕೋಲಾದಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿರುವ ಪೂಜೆಗೆರೆಯನ್ನು ಸ್ಥಳವಾಗಿ ಆಯ್ಕೆ ಮಾಡಿದರು. ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ವಾರ್ಷಿಕೋತ್ಸವವಾದ ಏಪ್ರಿಲ್ 13 ರಂದು ಈ ಚಳುವಳಿಯನ್ನು ಆಯೋಜಿಸಲಾಗಿತ್ತು. “ಇದು ಕೇವಲ ಉಪ್ಪು ಸತ್ಯಾಗ್ರಹಕ್ಕೆ ಸೀಮಿತವಾಗಿರದೆ ‘ತೆರಿಗೆ ಇಲ್ಲ’ ನೀತಿಗೆ ವಿಸ್ತರಿಸಿದೆ. ಕಾಂಗ್ರೆಸ್ ನ ನಾಯಕರಾದ ಹಮ್ಮಣ್ಣ ಗೋವಿಂದ ನಾಯಕ್ ವಂದಿಗೆ, ಬೊಮ್ಮಯ್ಯ ರಾಕು ಗಾಂವ್ಕರ್ ಬಾಸ್ಗೋಡ್, ವೀರಣ್ಣ ಬೊಮ್ಮಯ್ಯ ನಾಯಕ್ ಕಣಗಿಲ್ ಮತ್ತು ಅಂಕೋಲಾದ ಬಾಸ್ಗೊಡ್ ರಾಮ ನಾಯಕ ರಿಗೆ ಇದರ ಶ್ರೇಯಸ್ಸು ಸಲ್ಲುತ್ತದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *