independent-75-ಎಷ್ಟೂರು ಕೊಟ್ಟರೂ ಈಸೂರು ಕೊಡೆವು!

‘ಎಷ್ಟೂರು ಕೊಟ್ಟರೂ ಈಸೂರು ಕೊಡೆವು’: ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಕ್ತ ತೇಯ್ದ ಗ್ರಾಮಕ್ಕೆ ಸ್ಮಾರಕ ಕೊಟ್ಟಿಲ್ಲ ಎಂಬ ಕೊರಗು!

ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ ಹಿರಿದು. ಈ ಗ್ರಾಮದ ನೂರಾರು ಮಂದಿ ಯುವಕ ಯುವತಿಯರು ದಾಸ್ಯದ ವಿರುದ್ಧ ಹೋರಾಡಿ ಜೈಲು ಸೇರಿದ್ದರು.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ ಹಿರಿದು. ಈ ಗ್ರಾಮದ ನೂರಾರು ಮಂದಿ ಯುವಕ ಯುವತಿಯರು ದಾಸ್ಯದ ವಿರುದ್ಧ ಹೋರಾಡಿ ಜೈಲು ಸೇರಿದ್ದರು. ಅಷ್ಟೇ ಏಕೆ ಈ ಗ್ರಾಮದ ಐವರು ಸ್ವಾತಂತ್ರ್ಯ ಹೋರಾಟಗಾರರನ್ನು 1942ರಲ್ಲಿ ಬ್ರಿಟಿಷರು ನೇಣಿಗೇರಿಸಿದ್ದರು.

ಒಂದು ಕಾಲದಲ್ಲಿ ಈ ಗ್ರಾಮ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾಗಿತ್ತು. ಅದಕ್ಕೆ ಕಾರಣ ಏನು ಗೊತ್ತಾ? ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ದೊರೆಯುವುದಕ್ಕೂ ಮುನ್ನವೇ ಈ ಗ್ರಾಮ ತನ್ನನ್ನು ತಾನು ಬ್ರಿಟಿಷರಿಂದ ಮುಕ್ತವಾದ ಗ್ರಾಮ ಎಂದು ಘೋಷಿಸಿಕೊಂಡಿತ್ತು. ಗ್ರಾಮಸ್ಥರು ಬ್ರಿಟಿಷ್ ಅಧಿಕಾರಿಗಳು ಮಾತ್ರವಲ್ಲದೆ ಅವರಡಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸರು ಗ್ರಾಮಕ್ಕೆ ಪ್ರವೇಶಿಸುವುದನ್ನು ತಡೆಯುತ್ತಿದ್ದರು. 

ಗ್ರಾಮಸ್ಥರು ಮತ್ತು ಬ್ರಿಟಿಷರ ನಡುವಿನ ಸಂಘರ್ಷದ ಸಮಯದಲ್ಲಿ ಹುಟ್ಟಿಕೊಂಡ ಘೋಷಣೆ ಪ್ರಸಿದ್ಧಿಗೊಂಡಿತ್ತು. ‘ಎಷ್ಟೂರು ಕೊಟ್ಟರೂ ಈಸೂರು ಕೊಡೆವು’ ಎಂಬುದೇ ಆ ಘೋಷಣೆ. ಆದರೆ ಬ್ರಿಟಿಷರ ವಿರೋಧ ಕಟ್ಟಿಕೊಂಡ ಗ್ರಾಮಸ್ಥರ ಬದುಕು ಹೂವಿನ ಹಾಸಿಗೆಯಂತೂ ಆಗಿರಲಿಲ್ಲ. ಬ್ರಿಟಿಷರ ವಿರುದ್ಧ ಸಮರ ಸಾರಿದ ಗ್ರಾಮಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡಲು ಬ್ರಿಟಿಷ್ ಅಧಿಕಾರಿಗಳು ಟೊಂಕ ಕಟ್ಟಿ ನಿಂತಿದ್ದರು. 

ಗ್ರಾಮಸ್ಥರ ಮನೆಗಳ ಲೂಟಿ, ಗ್ರಾಮಸ್ಥರ ಮೇಲೆ ದಾಳಿ ಸೇರಿದಂತೆ ಹಲವು ಬಗೆಯ ದೌರ್ಜನ್ಯ ನಡೆಸಲಾಯಿತು. ಬ್ರಿಟಿಷರ ಕಿರುಕುಳ ತಾಳಲಾರದೆ ಹಲವು ಮಂದಿ ಹತ್ತಿರದ ಕಾಡಿಗೆ ಪಲಾಯನ ಮಾಡಿದ್ದಾಗಿ ಈಗಲೂ ಗ್ರಾಮದ ಹಿರಿಯರು ನೆನಪಿಸಿಕೊಳ್ಳುತ್ತಾರೆ. 

ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗ್ರಾಮದ ಪಾತ್ರವನ್ನು ಸದಾ ಕಾಲ ನೆನಪಿನಲ್ಲುಳಿಯುವಂತೆ ಮಾಡಬಲ್ಲ ಶಿವಪುರ ಮಾದರಿಯ ಸ್ಮಾರಕವೊಂದನ್ನು ಗ್ರಾಮದಲ್ಲಿ ಕಟ್ತಬೇಕೆಂಬುದು ಗ್ರಾಮಸ್ಥರ ಬಹುದಿನಗಳ ಕನಸು. ಅದಕ್ಕಾಗಿ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಆ ಕೆಲಸವಾಗಿಲ್ಲ ಎನ್ನುವ ಕೊರಗು ಉಳಿದಿದೆ. 

ಕೆಲ ವರ್ಷಗಳ ಹಿಂದೆ ಸರ್ಕಾರ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆಂದು 12 ಕೋಟಿ ರೂ. ಬಿಡುಗಡೆಗೊಳಿಸಿತ್ತು. ಆದರೆ ಸ್ಮಾರಕ ನಿರ್ಮಾಣದ ಕುರಿತು ಇದುವರೆಗೂ ಮಾತು ನಡೆದಿಲ್ಲ. ಅದಕ್ಕಾಗಿ ಗ್ರಾಮಸ್ಥರ ಕಾಯುವಿಕೆ ಮುಂದುವರಿದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *