

ಬೇರೆಬೇರೆ ಪ್ರದೇಶದ ಜನ ವಿಭಿನ್ನವಾಗಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರತಿವರ್ಷ ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ ಆಚರಿಸುವ ಸಿದ್ಧಾಪುರದ ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘ ಈ ವರ್ಷ ಇಲ್ಲಿಯ ಶಿರಳಗಿ ಗ್ರಾಮ ಪಂಚಾಯತಿಯ ಮುಗದೂರಿನ ಪ್ರಚಲಿತ ಆಶ್ರಯಧಾಮದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿತು.

ಆಶ್ರಯಧಾಮಕ್ಕೆ ಅವಶ್ಯವಿದ್ದ ಹೆಂಚು ಮತ್ತು ಪ್ಲಾಸ್ಟಿಕ್ ಕುರ್ಚಿಗಳನ್ನು ನೀಡಿ ಸಂಘದಿಂದ 50 ಸಾವಿರ ರೂಪಾಯಿ ವ್ಯ ಯಿಸಿತು. ಇದೇ ಸಂದರ್ಭದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ಈ ಸಂಘದ ಜಿಲ್ಲಾ ಮಾಜಿ ಉಪಾಧ್ಯಕ್ಷ ಸಿದ್ಧಲಿಂಗಪ್ಪ ಕಮಡೊಳ್ಳಿ ಹುಬ್ಬಳ್ಳಿ ಈ ಆಶ್ರಮವಾಸಿಗಳೊಂದಿಗೆ ಸಮಯ ಕಳೆದು ಆಶ್ರಮಕ್ಕೆ ಹತ್ತು ಸಾವಿರ ರೂಪಾಯಿ (ದೇಣಿಗೆ) ಮೌಲ್ಯದ ದಿನಸಿ ನೀಡಿದರು. ಈ ಸಂದರ್ಭದಲ್ಲಿ ಸುದರ್ಶನ್ ಪಿಳ್ಳೆ, ಆರ್.ಜಿ.ಹೆಗಡೆ, ಸುಬ್ರಾಯ ನಾಯ್ಕ, ವಿನಾಯಕ ನಾಯ್ಕ,ನಾರಾಯಣ ನಾಯ್ಕ, ದೇವೇಂ ದ್ರ ನಾಯ್ಕ, ಮೋಹನ ಮಡಿವಾಳ ಸೇರಿದಂತೆ ಸಂಘದ ಸದಸ್ಯರು, ಗುತ್ತಿಗೆದಾರರು ಹಾಜರಿದ್ದರು.





_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
