independent-75- ಹುಡ್ಲಿ..ಹುಡ್ಲಿ ಹೋಯ್… ಏನಿದು ಹುಡ್ಲಿ ಕತೆ..!? ಖೈದಿಗಳ ಜೀವನದಲ್ಲಿ ಒಂದು ದಿನ!

ಮಹಾತ್ಮಾ ಗಾಂಧೀಜಿ ತಂಗುವಿಕೆ ಪ್ರಭಾವ: ಬೆಳಗಾವಿಯ ಹುಡ್ಲಿ ಗ್ರಾಮದಲ್ಲಿ ಈಗಲೂ ಗಾಂಧಿ ತತ್ವ ಪಾಲನೆ!

1937ರಲ್ಲಿ ಬೆಳಗಾವಿ ಜಿಲ್ಲೆಯ ಹೂಡ್ಲಿಯಲ್ಲಿ ಮಹಾತ್ಮಾ ಗಾಂಧಿಯವರು ಒಂದು ವಾರ ತಂಗಿದ್ದ ಗ್ರಾಮವೀಗ ಬಹಳ ಬದಲಾವಣೆ ಕಂಡಿದೆ. ಕಳೆದೊಂದು ಶತಮಾನದಿಂದ ಇಲ್ಲಿ ಸಾಮಾಜಿಕ ಸುಧಾರಣೆಯಾಗಿದೆ.

Hudli villagers Khadi job

ಈ ಜೈಲಿಗೆ ಹೋಗಿ… ಒಂದು ದಿನ ವಾಸ್ತವ್ಯಕ್ಕೆ ಇಲ್ಲಿದೆ ಅವಕಾಶ!

ಜೈಲಿನೊಳಗೆ ಜೀವನ ಹೇಗಿರುತ್ತೆ. ಅಲ್ಲಿ ಕೈದಿಗಳು ಯಾವ ರೀತಿ ಇರ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಇರುತ್ತೆ. ಇದನ್ನ ತಿಳ್ಕೋಬೇಕು ಅನ್ನೋರಿಗೆ ಇಲ್ಲೊಂದು ಅವಕಾಶ ಸಿಗಲಿದೆ.

hindalaga jail

ಬೆಳಗಾವಿ: ಜೈಲಿನೊಳಗೆ ಜೀವನ ಹೇಗಿರುತ್ತೆ. ಅಲ್ಲಿ ಕೈದಿಗಳು ಯಾವ ರೀತಿ ಇರ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಇರುತ್ತೆ. ಇದನ್ನ ತಿಳ್ಕೋಬೇಕು ಅನ್ನೋರಿಗೆ ಇಲ್ಲೊಂದು ಅವಕಾಶ ಸಿಗಲಿದೆ.

ಬೆಳಗಾವಿ ಜಿಲ್ಲೆಯ ಹಿಂಡಲಗ ಕೇಂದ್ರೀಯ ಕಾರಾಗೃಹದ ಅಧಿಕಾರಿಗಳು, ‘ಖೈದಿಗಳ ಜೀವನದಲ್ಲಿ ಒಂದು ದಿನ’ ಎಂಬ ಹೊಸ ಪರಿಕಲ್ಪನೆಯೊಂದಿಗೆ ಯೋಜನೆಯನ್ನು ಆರಂಭಿಸಿದ್ದಾರೆ. ಈ ಹೊಸ ಯೋಜನೆಯಲ್ಲಿ 24 ಗಂಟೆಗಳ ಬಂಧನದ ಅನುಭವವನ್ನು ಪ್ರವಾಸಿಗರಿಗೆ ನೀಡಲಾಗುತ್ತದೆ. ಕಂಬಿ ಹಿಂದೆ ಕಳೆಯುವ ಅನುಭವವನ್ನು ಅಧಿಕಾರಿಗಳು ಜನರಿಗೆ ಕೊಡಲಿದ್ದಾರೆ. 

ಜೈಲು ಜೀವನದ ಅನುಭವ ಪಡೆಯಲಿಚ್ಛಿಸುವ ಜನರು ರೂ.500 ನೀಡಿ, ಜೈಲಿನಲ್ಲಿ ಒಂದು ದಿನ ಕಾಲ ಕಳೆಯಬಹುದಾಾಗಿದೆ. ಈಗಾಗಲೇ ಯೋಜನೆಗೆ ಸಿದ್ಧತೆ ನಡೆಸಿರುವ ಅಧಿಕಾರಿಗಳು ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾರಾಗೃಹದ ಅಧಿಕಾರಿಗಳು. ಕಾರಾಗೃಹಕ್ಕೆ ಬರುವ ಜನರನ್ನು ಖೈದಿಗಳಂತೆ ನೋಡಲಾಗುತ್ತದೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿಯವರೆಗೂ ಖೈದಿಗಳಂತೆ ಕಾಲ ಕಳೆಯುವಂತಹ ಅವಕಾಶ ನೀಡಲಾಗುತ್ತದೆ. ಜೈಲಿಗೆ ಬರುವ ಅತಿಥಿಗಳಿಗೆ ಖೈದಿಗಳ ಸಮವಸ್ತ್ರ, ಖೈದಿ ಸಂಖ್ಯೆ, ಕೊಠಡಿಗಳು, ಖೈದಿಗಳಿಗೆ ನೀಡಲಾಗುವ ಊಟ, ಖೈದಿಗಳು ಮಾಡುವ ಕೆಲಸಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ಜೈಲು ಸಿಬ್ಬಂದಿ ಬೆಳಿಗ್ಗೆ 5 ಗಂಟೆಗೆ ಅತಿಥಿಗಳನ್ನು ಎದ್ದೇಳಿಸುತ್ತಾರೆ. ಟೀ ನೀಡುವುದಕ್ಕೂ ಮುನ್ನ ಕೊಠಡಿಯನ್ನು ಸ್ವಚ್ಛಗೊಳಿಸುವ ಕೆಲಸವನ್ನು ನೀಡಲಾಗುತ್ತದೆ. ಇದಾದ 1 ಗಂಟೆ ಬಳಿಕ ಬೆಳಗಿನ ಉಪಾಹಾರ ನೀಡಲಾಗುತ್ತದೆ. 11 ಗಂಟೆಗೆ ಅನ್ನ ಮತ್ತು ಸಾಂಬಾರ್ ಊಟ ನೀಡಲಾಗುತ್ತದೆ. ಸಂಜೆ 7 ಗಂಟೆಗೆ ರಾತ್ರಿ ಊಟ ನೀಡಲಾಗುತ್ತದೆ. ವಾರದಲ್ಲಿ ಒಂದು ಅಥವಾ ಎರಡು ಬಾರಿ ಮಾಂಸಾಹಾರ ನೀಡಲಾಗುತ್ತದೆ. ವೀಕೆಂಡ್ ಸಮಯದಲ್ಲಿ ಕಾರಾಗೃಹಕ್ಕೆ ಭೇಟಿ ನೀಡಿದ್ದೇ ಆದರೆ, ಈ ಅವಕಾಶ ಅತಿಥಿಗಳಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ. 

ದಿನದ ಕೆಲಸಗಳೆಲ್ಲಾ ಮುಗಿದ ಬಳಿಕ ಅತಿಥಿಗಳು ಹಾಸಿಗೆಗಳನ್ನು ಪಡೆದುಕೊಂಡು ಇತರರೊಂದಿಗೆ ನೆಲದ ಮೇಲೆ ಮಲಗಬೇಕು. ಮತ್ತಷ್ಟು ನೈಜತೆಗಾಗಿ ಅತಿಥಿಗಳನ್ನು ಕಾರಾಗೃಹದಲ್ಲಿ ಲಾಕ್ ಮಾಡುವ ಕೆಲಸವನ್ನೂ ಮಾಡುವ ಸಾಧ್ಯತೆಗಲಳಿವೆ ಎಂದು ಮಾಹಿತಿ ನೀಡಿದ್ದಾರೆ. 

ಜೈಲಿಗೆ ಭೇಟಿ ನೀಡುವ ಅತಿಥಿಗಳು ಕೆಲವೊಮ್ಮೆ ಕ್ರಿಮಿನಲ್ ಗಳನ್ನು ಮುಖಾಮುಖಿ ನೋಡುವ ಸಾಧ್ಯತೆಗಳು ಎದುರಾಗಬಹುದು. ಜೈಲಿನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ 29 ಕೈದಿಗಳಿದ್ದಾರೆ, ಇದರಲ್ಲಿ ದಂಡುಪಾಳ್ಯ ಗ್ಯಾಂಗ್’ನ ಸದಸ್ಯರು, ಸರಣಿ ಅತ್ಯಾಚಾರ ಹಾಗೂ ಕೊಲೆಗಾರ ಉಮೇಶ್ ರೆಡ್ಡಿ ಕೂಡ ಇದ್ದಾರೆ. ಕೈದಿಗಳ ಜೀವನದ ಬಗ್ಗೆ ಜನರಿಗೆ ಅರಿವು ಮೂಡಿಸಿ, ಈ ಮೂಲಕ ಜನರು ಅಪರಾಧಗಳ ಎಸಗುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಹುಡ್ಲಿ: 1937ರಲ್ಲಿ ಬೆಳಗಾವಿ ಜಿಲ್ಲೆಯ ಹೂಡ್ಲಿಯಲ್ಲಿ ಮಹಾತ್ಮಾ ಗಾಂಧಿಯವರು ಒಂದು ವಾರ ತಂಗಿದ್ದ ಗ್ರಾಮವೀಗ ಬಹಳ ಬದಲಾವಣೆ ಕಂಡಿದೆ. ಕಳೆದೊಂದು ಶತಮಾನದಿಂದ ಇಲ್ಲಿ ಸಾಮಾಜಿಕ ಸುಧಾರಣೆಯಾಗಿದೆ.

ಇಲ್ಲಿನ ಜನರ ಪ್ರಮುಖ ಉದ್ಯೋಗ ಖಾದಿ ಬಟ್ಟೆ ನೇಯ್ಗೆಯಾದರೂ ಕೂಡ ಈಗ ಬದಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದಾರೆ. ದೇಶ ಸೇವೆಯ ಉದ್ದೇಶದಿಂದ ಹಲವು ಯುವಕರು ಇತ್ತೀಚಿನ ದಿನಗಳಲ್ಲಿ ಸೇನೆಗೆ ಸೇರುತ್ತಿದ್ದಾರೆ. ಅದರ ಜೊತೆ ಖಾದಿ ಉದ್ಯಮ ಮತ್ತು ಕೃಷಿಯನ್ನು ಮುಂದುವರಿಸುತ್ತಿದ್ದಾರೆ. ಇಲ್ಲಿನ ಪ್ರಮುಖ ಸಕ್ಕರೆ ಕಾರ್ಖಾನೆಯಾದ ಬೆಳಗಾವಿ ಸಕ್ಕರೆ ಕಾರ್ಖಾನೆ ಹೂಡ್ಲಿಯ ಕಬ್ಬು ಬೆಳೆಯನ್ನು ಅವಲಂಬಿಸಿದೆ.

ಹುಡ್ಲಿಯಲ್ಲಿ ಮದ್ಯದ ಅಂಗಡಿಗಳು ಇಲ್ಲ, ನಿವಾಸಿಗಳು ಯಾವುದೇ ರೀತಿಯ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಗ್ರಾಮಸ್ಥರು ಗಾಂಧಿಯವರ ಸಿದ್ಧಾಂತಗಳನ್ನು ದೃಢವಾಗಿ ನಂಬುತ್ತಾರೆ ಮತ್ತು ಮುಂಬರುವ ಪೀಳಿಗೆಗಳು ಸಂಪ್ರದಾಯವನ್ನು ಮುಂದುವರಿಸುತ್ತಾರೆ ಎಂದು ಆಶಿಸುತ್ತೇವೆ ಎನ್ನುತ್ತಾರೆ ಹುಡಲಿ ಖಾದಿ ಗ್ರಾಮೋದ್ಯೋಗ ಉತ್ಪಾದಕ ಸಂಘದ ಉತ್ಪಾದನಾ ವ್ಯವಸ್ಥಾಪಕ ಈಶ್ವರ್ ಕುಲ್ಗೋಡ್. 

ಗಾಂಧೀಜಿಯ ಸ್ವಾವಲಂಬನೆಯ ಸಿದ್ಧಾಂತಗಳಿಂದ ಪ್ರೇರಿತರಾಗಿ ಹುಡ್ಲಿಯ ನಿವಾಸಿಗಳು ಖಾದಿ ಉದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಗಂಗಾಧರ ರಾವ್ ದೇಶಪಾಂಡೆ — ಗಾಂಧಿಯನ್ನು ಹುಡ್ಲಿಗೆ ಕರೆತಂದವರು ಗ್ರಾಮವನ್ನು ಖಾದಿ ಗ್ರಾಮವಾಗಿ ಪರಿವರ್ತಿಸಿದರು ಮತ್ತು ಅಂದಿನಿಂದ ಇಲ್ಲಿಗೆ ಖಾದಿ ಉತ್ಪಾದನೆ ವೇಗ ಪಡೆದುಕೊಂಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *