ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ’ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗ್ಡೆ ಸಾಧನೆ!

ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ ಗೆ ಆಯ್ಕೆ ಯಾದ ಹಳ್ಳಿ ಹುಡುಗ ದಿನೇಶ್

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗ್ಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. 

Dinesh_Vasanth_Hegde1

ಕಾರವಾರ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗ್ಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. 

ಸಿದ್ಧಾಪುರ ತಾಲೂಕಿನ ಸಣ್ಣ ಹಳ್ಳಿ ಸಸಿಗುಳಿ ಗ್ರಾಮದ ದಿನೇಶ್, ಹಂಟ್ಸ್‌ವಿಲ್ಲೆಯಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಬಾಹ್ಯಾಕಾಶ ವಿಜ್ಞಾನದ ಸಹಾಯಕ ಸಂಶೋಧಕರಾಗಿದ್ದು, ನಾಸಾದಿಂದ ತನ್ನ ಅಧ್ಯಯನವನ್ನು ಮುಂದುವರಿಸಲು 1.35 ಲಕ್ಷ ಡಾಲರ್‌ಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧನೆಯಿಂದ ಆತನ ಹುಟ್ಟೂರಿನ ಜನರು ಸಂತಸದಲ್ಲಿದ್ದಾರೆ. ನಾವೆಲ್ಲರೂ ಆತನ ಬಗ್ಗೆ ತುಂಬಾ ಹೆಮ್ಮೆ ಪಡುತ್ತೇವೆ. ಸಣ್ಣ ಹಳ್ಳಿಯಿಂದ ಬಂದು ಅಧ್ಯಯನಕ್ಕಾಗಿ ಅಮೆರಿಕಕ್ಕೆ ಹೋದವರು ಇದೀಗ ನಾಸಾದಿಂದ ಸ್ಕಾಲರ್ ಶಿಪ್ ಪಡೆದಿದ್ದಾರೆ ಎಂದು ಅವರ ಸಂಬಂಧಿ ಗಿರೀಶ್ ಹೆಗ್ಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಿಂದ ಬಂದ ದಿನೇಶ್ ಸಾಧನೆ ಊಹಿಸಲಿಕ್ಕೂ ಅಸಾಧ್ಯವಾಗಿದೆ. ಈ ಸ್ಕಾಲರ್ ಶಿಪ್ ಪಡೆದ ಮೊದಲ ಭಾರತೀಯನಾಗಿರಬಹುದು ಎಂದು ಗಿರೀಶ್ ಹೇಳಿದರು.

ಹಂಟ್ಸ್ ವಿಲ್ಲೆಯ ಅಲಬಾಮಾ ವಿವಿಯ ಬಾಹ್ಯಾಕಾಶ ಇಲಾಖೆಯಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹೆಗ್ಡೆ ಅವರಿಗೆ ದೊರೆತಿರುವ ನಾಸಾ ಅನುದಾನದಿಂದ  ಅವರು ಬಾಹ್ಯಾಕಾಶ ಹವಾಮಾನದಲ್ಲಿ ಸಂಶೋಧನೆ ಮುಂದುವರೆಯಲು ನೆರವಾಗಿದೆ. ಹೆಗ್ಡೆ ಅವರು ಬಾಹ್ಯಾಕಾಶ ಹವಾಗುಣ ವಿಜ್ಞಾನಿ ಡಾ. ನಿಕೊಲಾಯ್ ಪೊಗೊರೆಲೋವ್ ಅವರ ಮಾರ್ಗದರ್ಶನದಲ್ಲಿ ” ಪರಿಮಾಣಾತ್ಮಕ ಅನಿಶ್ಚಿತತೆಗಳೊಂದಿಗೆ ಬಾಹ್ಯಾಕಾಶ ಹವಾಮಾನವನ್ನು ರೂಪಿಸುವಿಕೆ” ಸಂಶೋಧನಾ ಶೀರ್ಷಿಕೆಯನ್ನು ಹೆಗ್ಡೆ ಪ್ರಸ್ತಾಪಿಸಿದ್ದಾರೆ.

ನಾಸಾದದಿಂದ ಸ್ಕಾಲರ್ ಶಿಪ್ ಬಗ್ಗೆ ಹೆಗ್ಡೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಯತ್ನಕ್ಕೆ ಈ ಆಫರ್ ಲೇಟರ್ ದೊಡ್ಡ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅಧಿಸೂಚನೆಯ ಗಡುವು ಈಗಾಗಲೇ ಮುಗಿದಿರುವುದರಿಂದ ನನ್ನ ಪ್ರಾಜೆಕ್ಟ್ ಆಯ್ಕೆಯಾಗಿಲ್ಲ ಅಂದುಕೊಂಡಿದ್ದೆ. ಆಫರ್ ಲೇಟರ್ ಬಗ್ಗೆ ಎರಡೆರಡು ಬಾರಿ ಪರಿಶೀಲಿಸಿ ಆಯ್ಕೆಯನ್ನು ಖಚಿತಪಡಿಸಿಕೊಂಡ ನಂತರ ತನ್ನ ತಂಗಿಯೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾಗಿ ಹೆಗ್ಡೆ ಹೇಳಿದರು.

ನನ್ನ ಸಹೋದರನ ಬಗ್ಗೆ ತುಂಬಾ ಸಂತೋಷವಾಗುತ್ತಿದೆ. ಈಗ ಆತನ ಪಿಹೆಚ್ ಡಿ ಮಾಡುತ್ತಿದ್ದಾನೆ. ಈ ಸ್ಕಾಲರ್ ಶಿಪ್ ಇದೀಗ ದೊಡ್ಡ ಸುದ್ದಿಯಾಗಿದೆ. ಆತನ ಶಿಕ್ಷಕರು, ಶಾಲೆಯವರು ಎಲ್ಲರೂ ಕೂಡಾ ಸಂಭ್ರಮಿಸುತ್ತಿದ್ದಾರೆ ಎಂದು ಮೈಸೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ದಿನೇಶ್ ತಂಗಿ  ದಿವ್ಯಾ ವಸಂತ್ ಹೆಗ್ಡೆ ಹೇಳಿದರು. 

ದಿನೇಶ್ ಹೆಗ್ಡೆ ಅವರು ವಿನಮ್ರ ಹಿನ್ನೆಲೆಯವರು, ಇವರ ಇಡೀ ಶಾಲಾವಧಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದಲ್ಲಿ ನಡೆದಿದೆ. ವಾಜಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಹಾರ್ಷಿಕಟ್ಟಾದಲ್ಲಿನ ಅಶೋಕ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದಿದ್ದಾರೆ. ಮೈಸೂರು ವಿವಿಯಿಂದ ಎಂಎಸ್ ಸಿ ಪದವಿ ಪೂರೈಸಿದ್ದಾರೆ. ಅವರ ತಂದೆ ವಸಂತ ಹೆಗ್ಡೆ ಮೂರು ತಿಂಗಳ ಹಿಂದಷ್ಟೇ ಕೋವಿಡ್ -19 ನಿಂದ ಮೃತಪಟ್ಟಿದ್ದು, ತಾಯಿ ಗಂಗಾ ಹೆಗ್ಡೆ ಗೃಹಿಣಿಯಾಗಿದ್ದು, ಸಸಿಗುಳಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.  

ಹಂಟ್ಸ್‌ವಿಲ್ ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ (UAH) ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು​ ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ  NASA ಫ್ಯೂಚರ್​ ಇನ್​ವೆಸ್ಟಿಗೇಟರ್​ ಪ್ರಶಸ್ತಿಗೆ  ಆಯ್ಕೆ ಮಾಡಿದೆ.

ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆಯವರಿಗೆ ತಲಾ 135000 ಅಮೇರಿಕನ್​ ಡಾಲರ್ ಅನ್ನು ​ ಸ್ಟೈಫಂಡ್ , ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು ಸಮ್ಮೇಳನಗಳಿಗೆ ಹಾಜರಾಗಲು ಮತ್ತು ಸಂಶೋಧನೆಯನ್ನು ಮುಂದುವರೆಸಲು ನೀಡಲಾಗುವುದು ಎಂದು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್​ಸೈಟ್​ ತನ್ನ ನ್ಯೂಸ್​​ ಲೆಟರ್​ನಲ್ಲಿ ತಿಳಿಸಿದೆ.

ಎರಡನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿರುವ ಹೆಗಡೆ, ಬಾಹ್ಯಾಕಾಶ ವಿಜ್ಞಾನ ವಿಭಾಗದಲ್ಲಿ ಮತ್ತು ಯುಎಎಚ್ ಸೆಂಟರ್ ಫಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್‌ನಲ್ಲಿ ಪದವಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ, ಬಾಹ್ಯಾಕಾಶ ಹವಾಮಾನದ ಕುರಿತು ತಮ್ಮ ಸಂಶೋಧನೆಯನ್ನು ಮುಂದುವರಿಸಲು ಈ ಅನುದಾನವನ್ನು ನೀಡಲಾಗಿದೆ. ಹೆಗಡೆಯವರ ಸಂಶೋಧನಾ ಪ್ರಸ್ತಾವನೆ, “ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ “, ಎಂದಾಗಿರುತ್ತದೆ . ಬಾಹ್ಯಾಕಾಶ ಹವಾಮಾನ ವಿಜ್ಞಾನಿ ಮತ್ತು ಬಾಹ್ಯಾಕಾಶ ವಿಜ್ಞಾನದ ವಿಶೇಷ ಪ್ರಾಧ್ಯಾಪಕರಾದ ಡಾ.ನಿಕೊಲಾಯ್ ಪೊಗೊರೆಲೋವ್ ಇವರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ, ಸಶಿಗುಳಿ ಗ್ರಾಮದ ದಿನೇಶ್ ವಸಂತ ಹೆಗಡೆ, ನಾಸಾ ಗುರುತಿಸಿರುವ ಅಪ್ಪಟ ಕನ್ನಡ ಮಣ್ಣಿನ ಪ್ರತಿಭೆ. ಇವರು
ಕ್ರಮವಾಗಿ ವಾಜಗದ್ದೆ ಮತ್ತು ಹಾರ್ಸಿಕಟ್ಟಾ ದಲ್ಲಿ ಕನ್ನಡ ಮಾಧ್ಯಮದಲ್ಲಿ ತಮ್ಮ ಪ್ರಾಥಮಿಕ ಹಾಗು ಪ್ರೌಢಶಾಲಾ ಅಧ್ಯಯನ ಮಾಡಿರುತ್ತಾರೆ.
ಮೈಸೂರಿನ ಯುವರಾಜ ಕಾಲೇಜಿನಲ್ಲಿ ತನ್ನ ಬಿಎಸ್ಸಿ ಪದವಿ ಮುಗಿಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದ ಭೌತ್ತಶಾಸ್ತ್ರ ಎಂಎಸ್ಸಿ ಪದವಿ ಗಳಿಸಿ, ಹೆಚ್ಚಿನ ಅಧ್ಯಯನಕ್ಕೆ ಅಮೇರಿಕಾಕ್ಕೆ ಹಾರಿದ ದಿನೇಶ್​ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಪತಾಕೆ ಹಾರಿಸಿದ್ದಾರೆ.

ಕಾಲೇಜು ದಿನಗಳಲ್ಲೇ ವಿಜ್ಞಾನದ ಜೊತೆಗೆ ಸಾಂಸ್ಕೃತಿಕವಾಗಿಯೂ ಭಾಗವಹಿಸುತ್ತಿದ್ದ ದಿನೇಶ್​ ಮೈಸೂರಿನ ನಿರಂತರ ರಂಗ ತಂಡದಲ್ಲಿ ನಟನಾಗಿ ಗುರುತಿಸಿಕೊಂಡಿದ್ದರು, ಅಲ್ಲದೇ ಅನೇಕ ಕಾಲೇಜು ನಾಟಕೋತ್ಸವಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಇವರದು.

ಭೂ ವಿಜ್ಞಾನ, ಹೆಲಿಯೊಫಿಸಿಕ್ಸ್, ಗ್ರಹ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ವಿಷಯಗಳನ್ನು ಅಧ್ಯಯನ ಮಾಡುತ್ತಿರುವ, ನಾಸಾ ವಿಜ್ಞಾನದ ಮಿಷನ್ ನಿರ್ದೇಶನಾಲಯದೊಂದಿಗೆ ಈ ಕೆಳಗಿನ ಒಂದು ಅಥವಾ ಹೆಚ್ಚಿನ ಕ್ಷೇತ್ರಗಳಲ್ಲಿ ಹೊಂದಿಕೊಂಡಂತೆ ಸಂಶೋಧನೆಯನ್ನು ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿಗಳಿಗೆ ನಾಸಾ ಈ ಅತ್ಯುತ್ತಮ ಪ್ರಶಸ್ತಿ ನೀಡುತ್ತದೆ.

ತಾನು ಆಯ್ಕೆ ಆಗಿಲ್ಲ ಎಂದು ಆರಂಭದಲ್ಲಿ ಭಾವಿಸಿದ್ದೆ, ನಂತರ ಬಂದ ಆಫರ್ ಲೆಟರ್ ನನ್ನ ಆತ್ಮ ವಿಶ್ವಾಸ, ಸಂತೋಷ, ಭವಿಷ್ಯದ ಗುರಿ, ಕನಸು ಎಲ್ಲವನ್ನು ಇಮ್ಮಡಿಗೊಳಿಸಿತು ಎಂದು ಹೆಗಡೆ ಹೇಳಿದ್ದಾರೆ.

“ನಾನು ಆಯ್ಕೆಯಾಗಿದ್ದೇನೆ ಎಂದು ತಿಳಿದಾಗ ನನಗೆ ತುಂಬಾ ಸಂತೋಷವಾಯಿತು ಮತ್ತು ಆಶ್ಚರ್ಯವಾಯಿತು”, “ಸಂಶೋಧನಾ ಪ್ರಸ್ತಾವನೆಯ ಫಲಿತಾಂಶ ಪ್ರಕಟಣೆಯ ಅಧಿಸೂಚನೆಯ ಗಡುವು ಈಗಾಗಲೇ ಮುಗಿದಿರುವುದರಿಂದ, ನಮ್ಮ ಈ ಯೋಜನೆಯನ್ನು ಆಯ್ಕೆ ಮಾಡಲಾಗುವುದಿಲ್ಲ ಎಂದು ನಾನು ಭಾವಿಸಿದ್ದೆ. ಆಯ್ಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಆಫರ್ ಲೆಟರ್ ಅನ್ನು ಎರಡು ಬಾರಿ ಪರಿಶೀಲಿಸಿದೆ “, “ಸ್ವಲ್ಪ ಸಮಯದ ನಂತರ, ನನ್ನ ಮೇಲ್ವಿಚಾರಕರಿಂದ ನನಗೆ ಇಮೇಲ್ ಬಂದು ಈ ಸಂತೋಷದ ವಿಷಯ ಧೃಡಪಟ್ಟಿತು. ತಕ್ಷಣವೇ ನಾನು ಭಾರತದಲ್ಲಿರುವ ನನ್ನ ಅಕ್ಕನಿಗೆ ಈ ಶುಭ ಸುದ್ದಿಯನ್ನು ಹಂಚಿಕೊಳ್ಳಲು ಕರೆ ಮಾಡಿದೆ ಎಂದರು ದಿನೇಶ್​ ಹೆಗಡೆ.

ಸೌರ ಮಾರುತದ ಗುಣಲಕ್ಷಣಗಳನ್ನು ಅಧ್ಯಯನ ಮಾಡುತ್ತಿರುವ ದಿನೇಶ್​, ಪ್ಲಾಸ್ಮಾ ಸ್ಥಿತಿಯಲ್ಲಿ ಮುಖ್ಯವಾಗಿ ಪ್ರೋಟಾನ್‌ಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಒಳಗೊಂಡಿರುವ ನಿರಂತರ ಹರಿವು ಸೂರ್ಯನಿಂದ ಹೊರಕ್ಕೆ ಹೇಗೆ ಹರಿಯುತ್ತದೆ ಮತ್ತು ತನ್ನ ಒಳಗೆ ಹುದುಗಿರುವ ಸೌರ ಕಾಂತೀಯ ಕ್ಷೇತ್ರವನ್ನು ಅದರೊಂದಿಗೆ ಹೇಗೆ ಒಯ್ಯುತ್ತದೆ ಎನ್ನುವ ವಿಚಾರದ ಕುರಿತು ಅಧ್ಯಯನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *