ಹಿಂದುತ್ವ ಹೇಳುವ ಅನಂತ ಕುಮಾರ ಎಲ್ಲಿದ್ದಾರೆ? ಬಿ.ಜೆ.ಪಿ. ಜನಪ್ರತಿನಿಧಿಗಳಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಾ…?

ಉತ್ತರ ಕನ್ನಡ ಜಿಲ್ಲೆಗೆ ಸಂಸದರು,ಸಚಿವರು, ಶಿರಸಿ ಕ್ಷೇತ್ರಕ್ಕೆ ಶಾಸಕರು ಇದ್ದಾರೆಯೆ? ಹೀಗೆಂದು ಪ್ರಶ್ನಿಸಿದವರು ಕೆ.ಪಿ.ಸಿ.ಸಿ. ವಕ್ತಾರ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು.

ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಫಂದಿಸದ ಸಂಸದ ಅನಂತಕುಮಾರ ಹೆಗಡೆ ಚುನಾವಣೆ ಸಮಯಕ್ಕೆ ಬಂದು ಹಿಂದುತ್ವ ಎನ್ನುತ್ತಾರೆ. ಯಾವ ಹಿಂದುಗಳಿಗೆ ಇವರಿಂದ ಅನುಕೂಲ ಆಗಿದೆ? ಪರೇಶ್ ಮೇಸ್ತ ಪ್ರಕರಣದಿಂದ ಕರಾವಳಿ, ಮಲೆನಾಡಿನಲ್ಲಿ ಯೋಗ್ಯತೆ ಇಲ್ಲದವರೆಲ್ಲಾ ಶಾಸಕರು, ಸಂಸದರು ಆದರಲ್ಲ ಅವರಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಿದೆಯೆ?

ಶಾಸಕರು, ವಿಧಾನಸಭಾ ಅಧ್ಯಕ್ಷರ ಬಗ್ಗೆ ನಾವು ಮಾತನಾಡಬಾರದು, ಅವರು ಪೀಠದ ಮೇಲೆ ಕುಳಿತಿರುವವರು ಇವರು ಇವರ ಪಕ್ಷದಿಂದ ಯಾರಿಗಾದರೂ ಅನುಕೂಲವಾಗಿದೆಯೆ? ಕ್ಷೇತ್ರ-ಜಿಲ್ಲೆಯಲ್ಲಿ ರಸ್ತೆ ಇಲ್ಲ, ಅಭಿವೃದ್ಧಿ ಕಾಮಗಾರಿ ಇಲ್ಲ, ಅತಿಕ್ರಮಣದಾರರು, ಪ್ರವಾಹ ಪೀಡಿತರನ್ನು ಕೇಳುವವರಿಲ್ಲ. ಯುವಕರಿಗೆ ಉದ್ಯೋಗ ಇಲ್ಲ, ಉದ್ಯಮ ಇಲ್ಲ ಈ ವ್ಯವಸ್ಥೆಯಲ್ಲಿ ಚುನಾವಣೆ ಬಂದಾಗಲೆಲ್ಲಾ ಇವರಿಗೆ ನೆನಪಾಗುವುದು ಹಿಂದುತ್ವ ಹಾಗಾಗಿ ಬಿ.ಕೆ. ಹರಿಪ್ರಸಾದ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಸಂಘಟನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಕೆಲಸಕ್ಕೆ ಬಾರದವರೆಲ್ಲಾ ಹಿಂದುತ್ವದ ಹೆಸರಲ್ಲಿ ಶಾಸಕರು, ಸಂಸದರಾಗುವುದನ್ನು ತಡೆಯುತ್ತೇವೆ ಎಂದು ವಿವರಿಸಿದ ಗೋಪಾಲಕೃಷ್ಣ ಬೇಳೂರು, ಹಿಂದುತ್ವವಾದಿಗಳು ಅನಂತಕುಮಾರ ಹೆಗಡೆ ಎಲ್ಲಿದ್ದಾರೆ? ಏನುಮಾಡುತಿದ್ದಾರೆ ಎಂದು ಹೇಳಬೇಕು.

ಯಡಿಯೂರಪ್ಪ ಕೆಲಸ ಮಾಡುವ ಮನುಷ್ಯ ಅವರನ್ನು ತೆಗೆದು ಬೊಮ್ಮಾಯಿಯಿಂದ ಅಭಿವೃದ್ಧಿ ಮಾಡಿಸುತ್ತಾರೆಯೆ? ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಬಿ.ಜೆ.ಪಿ. ಸರ್ವನಾಶವಾಗಲಿದೆ. ಕಾಂಗ್ರೆಸ್ ರಾಜ್ಯ ವಿಧಾನಸಭೆಯ 150 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ. ಹೈಕಮಾಂಡ್ ತೀರ್ಮಾನದಂತೆ ಮುಖ್ಯಮಂತ್ರಿಗಳ ಆಯ್ಕೆ ನಡೆಯಲಿದೆ. ಅಭಿವೃದ್ಧಿ ಮಾಡದ, ಜನರಿಗೆ ಸ್ಪಂದಿಸದ ಬಿ.ಜೆ.ಪಿ. ಸ್ವಯಂಕೃತ ಅಪರಾಧ ಕಾಂಗ್ರೆಸ್ ಗೆಲುವಿಗೆ ಪೂರಕ ಎಂದರು.

ಬಿಜೆಪಿ ಎಲ್ಲಿ ಅಧಿಕಾರದಲ್ಲಿದೆ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ. ಬಿ.ಜೆ.ಪಿ. ಗೆದ್ದ ಕ್ಷೇತ್ರಗಳಲ್ಲಿ ಅಭಿವೃದ್ಧಿ ಇಲ್ಲ, ಯಡಿಯೂರಪ್ಪ ಶಿಕಾರಿಪುರ ಅಭಿವೃದ್ಧಿ ಮಾಡಿದ್ದಾರೆ. ಸಾಗರದಲ್ಲಿ ಯಡಿಯೂರಪ್ಪನವರಿಂದ ಕೆಲವು ಕೆಲಸಗಳಾಗಿವೆ. ಮತ್ತೆಲ್ಲಿ ಅಭಿವೃದ್ಧಿ ಆಗಿದೆ? ಬಿ.ಜೆ.ಪಿ. ಆಡಳಿತದಲ್ಲಿ ಉತ್ತರ ಕನ್ನಡಕ್ಕೆ ಅನ್ಯಾಯವಾದಂತೆ ರಾಜ್ಯದ ಬಹುತೇಕ ಜಿಲ್ಲೆ, ಕ್ಷೇತ್ರಗಳಲ್ಲಾಗಿದೆ. ಇದೇ ಅವರ ಸೋಲಿಗೆ ಕಾರಣವಾಗಲಿದೆ ಎಂದರು.

ಹೀಗೆಲ್ಲಾ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಜೋಗ ಅಭಿವೃದ್ಧಿ ಸೇರಿದಂತೆ ರಾಜ್ಯದಲ್ಲಿ ಅನೇಕ ಕಾಮಗಾರಿಗಳನ್ನು ಆನ್ ಲೈನ್ ನಲ್ಲಿ ಶಂಕುಸ್ಥಾಪನೆ ಮಾಡಲಾಗಿದೆ. ಇವುಗಳ ಹಣೆಬರಹ ಕೂಡಾ ಕೆಲವೇ ತಿಂಗಳಲ್ಲಿ ತಿಳಿಯಲಿದೆ ಎಂದರು. ಸಿದ್ದಾಪುರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಜನಪರವಾಗಿ ಕೆಲಸಮಾಡುತ್ತಿರಬೇಕು, ಪ್ರತಿಭಟನೆ, ಜನಹೋರಾಟದ ಮೂಲಕ ಅವರನ್ನು ಹಿಮ್ಮೆಟ್ಟಿಸಬೇಕು. ಬಿ.ಜೆ.ಪಿ. ಉಪಯೋಗಕ್ಕೆ ಬಾರದ ಪಕ್ಷ, ದೇಶಕ್ಕೆ ಇದರಿಂದ ಯಾವ ಪ್ರಯೋಜನ ಇಲ್ಲ ಎನ್ನುವುದನ್ನು ಜನರಿಕೆ ಮನವರಿಕೆ ಮಾಡಿದರೆ ದೇಶಕ್ಕೆ ಒಳ್ಳೆಯದಾಗಲಿದೆ ಎಂದರು. ತಾಲಿಬಾನ್ ಆಡಳಿತ ವ್ಯವಸ್ಥೆ ವಿರೋಧಿಸುವವರು ಬಿ.ಜೆ.ಪಿ ವಿರೋಧಿಸಬೇಕೆಂದು ಕರೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *