ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ?

ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿ ಸಿರುವ ಕೆ.ಪಿ.ಸಿ.ಸಿ. ವಕ್ತಾರ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ರಾಜ್ಯದ ಜನತೆ ಮಳೆ-ಪ್ರವಾಹದಿಂದ ಬಳಲಿದ್ದಾರೆ.ಕಳೆದ ವರ್ಷದ ಪ್ರವಾಹ ಪೀಡಿತರಿಗೇ ಸರ್ಕಾರ ಪರಿಹಾರ ನೀಡಿಲ್ಲ. ಅಡ್ಡದಾರಿಯಿಂದ ಅಧಿಕಾರಕ್ಕೆ ಬಂದ ಬಿ.ಜೆ.ಪಿ. ಜನರ ತೊಂದರೆಗಳಿಗೆ ಸ್ಫಂದಿಸದೆ ಮುಖ್ಯಮಂತ್ರಿ ಬದಲಿಸುವುದು, ಜನರ ಸಂಕಷ್ಟದ ಕಾಲದಲ್ಲಿ ಜನಾಶೀರ್ವಾದ ಯಾತ್ರೆ ಮಾಡುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರೀಯೆ ನೀಡಿದ ಅವರು ಕರಾವಳಿ ಮಲೆನಾಡಿನಲ್ಲಿ ಪರೇಶ್ ಮೇಸ್ತ ಘಟನೆ ಬಂಡವಾಳ ಮಾಡಿಕೊಂಡು ಜನಪ್ರತಿನಿಧಿಗಳಾದ ಬಿ.ಜೆ.ಪಿ. ನಾಯಕರಿಗೆ ಪರೇಶ್ ಮೇಸ್ತ ಹೆಸರು ನೆನಪಿದೆಯೆ? ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡುವ ಅನಂತಕುಮಾರ ಹೆಗಡೆ ಎಲ್ಲಿದ್ದಾರೆ?

ಬಹುತೇಕ ಕಡೆ ಜನಪ್ರತಿನಿಧಿಗಳಿದ್ದೂ ಇಲ್ಲದ ಸ್ಥಿತಿ, ಜನಸಾಮಾನ್ಯರ ತೊಂದರೆಗಳಿಗೆ ಸ್ಫಂದಿಸಬೇಕಾದ ಸರ್ಕಾರದ ದುಸ್ಥಿತಿ. ಈ ವರ್ತಮಾನದಲ್ಲಿ ಜನಾಶೀರ್ವಾದ ಯಾತ್ರೆ ಮೂಲಕ ಜನರ ದಿಕ್ಕು ತಪ್ಪಿಸುವ ಬದಲು ಜನಪರವಾಗಿ ಕೆಲಸ ಮಾಡಬೇಕು. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ದಿನವೇ ಬಿಜೆಪಿ ಅವನತಿ ಪ್ರಾರಂಭವಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬಿ.ಜೆ.ಪಿ. ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ಧವಾಗುತ್ತಿದೆ.

ಜನರ ಬವಣೆ ಕೇಳದ ಸರ್ಕಾರ ಹೆಚ್ಚುದಿನ ಉಳಿಯುವುದೂ ಇಲ್ಲ. ಇಂಥ ಸರ್ಕಾರ, ಜನಪ್ರತಿನಿಧಿಗಳನ್ನು ಜನ ಒಪ್ಪುವುದೂ ಇಲ್ಲ ಎಂದರು. 90 ವರ್ಷದ ಕಾಗೋಡು ತಿಮ್ಮಪ್ಪ ಈಗಲೂ ಚಟುವಟಿಕೆಯಿಂದ ಇದ್ದಾರೆ. ಅವರ ಮಾರ್ಗದರ್ಶನದಲ್ಲೇ ನಾವೆಲ್ಲಾ ಕೆಲಸಮಾಡುತ್ತೇವೆ ಎಂದು ತಿಳಿಸಿದ ಬೇಳೂರು ಶಿವಮೊಗ್ಗದಲ್ಲಿ ಈಗ ಒಬ್ಬರು ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ.ಯ ಒಬ್ಬ ಶಾಸಕರೂ ಇಲ್ಲದಂತೆ ಕಾಂಗ್ರೆಸ್ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

https://www.facebook.com/348696862377218/posts/934016853845213/

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *