ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ?

ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿ ಸಿರುವ ಕೆ.ಪಿ.ಸಿ.ಸಿ. ವಕ್ತಾರ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ರಾಜ್ಯದ ಜನತೆ ಮಳೆ-ಪ್ರವಾಹದಿಂದ ಬಳಲಿದ್ದಾರೆ.ಕಳೆದ ವರ್ಷದ ಪ್ರವಾಹ ಪೀಡಿತರಿಗೇ ಸರ್ಕಾರ ಪರಿಹಾರ ನೀಡಿಲ್ಲ. ಅಡ್ಡದಾರಿಯಿಂದ ಅಧಿಕಾರಕ್ಕೆ ಬಂದ ಬಿ.ಜೆ.ಪಿ. ಜನರ ತೊಂದರೆಗಳಿಗೆ ಸ್ಫಂದಿಸದೆ ಮುಖ್ಯಮಂತ್ರಿ ಬದಲಿಸುವುದು, ಜನರ ಸಂಕಷ್ಟದ ಕಾಲದಲ್ಲಿ ಜನಾಶೀರ್ವಾದ ಯಾತ್ರೆ ಮಾಡುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರೀಯೆ ನೀಡಿದ ಅವರು ಕರಾವಳಿ ಮಲೆನಾಡಿನಲ್ಲಿ ಪರೇಶ್ ಮೇಸ್ತ ಘಟನೆ ಬಂಡವಾಳ ಮಾಡಿಕೊಂಡು ಜನಪ್ರತಿನಿಧಿಗಳಾದ ಬಿ.ಜೆ.ಪಿ. ನಾಯಕರಿಗೆ ಪರೇಶ್ ಮೇಸ್ತ ಹೆಸರು ನೆನಪಿದೆಯೆ? ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡುವ ಅನಂತಕುಮಾರ ಹೆಗಡೆ ಎಲ್ಲಿದ್ದಾರೆ?

ಬಹುತೇಕ ಕಡೆ ಜನಪ್ರತಿನಿಧಿಗಳಿದ್ದೂ ಇಲ್ಲದ ಸ್ಥಿತಿ, ಜನಸಾಮಾನ್ಯರ ತೊಂದರೆಗಳಿಗೆ ಸ್ಫಂದಿಸಬೇಕಾದ ಸರ್ಕಾರದ ದುಸ್ಥಿತಿ. ಈ ವರ್ತಮಾನದಲ್ಲಿ ಜನಾಶೀರ್ವಾದ ಯಾತ್ರೆ ಮೂಲಕ ಜನರ ದಿಕ್ಕು ತಪ್ಪಿಸುವ ಬದಲು ಜನಪರವಾಗಿ ಕೆಲಸ ಮಾಡಬೇಕು. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ದಿನವೇ ಬಿಜೆಪಿ ಅವನತಿ ಪ್ರಾರಂಭವಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬಿ.ಜೆ.ಪಿ. ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ಧವಾಗುತ್ತಿದೆ.

ಜನರ ಬವಣೆ ಕೇಳದ ಸರ್ಕಾರ ಹೆಚ್ಚುದಿನ ಉಳಿಯುವುದೂ ಇಲ್ಲ. ಇಂಥ ಸರ್ಕಾರ, ಜನಪ್ರತಿನಿಧಿಗಳನ್ನು ಜನ ಒಪ್ಪುವುದೂ ಇಲ್ಲ ಎಂದರು. 90 ವರ್ಷದ ಕಾಗೋಡು ತಿಮ್ಮಪ್ಪ ಈಗಲೂ ಚಟುವಟಿಕೆಯಿಂದ ಇದ್ದಾರೆ. ಅವರ ಮಾರ್ಗದರ್ಶನದಲ್ಲೇ ನಾವೆಲ್ಲಾ ಕೆಲಸಮಾಡುತ್ತೇವೆ ಎಂದು ತಿಳಿಸಿದ ಬೇಳೂರು ಶಿವಮೊಗ್ಗದಲ್ಲಿ ಈಗ ಒಬ್ಬರು ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ.ಯ ಒಬ್ಬ ಶಾಸಕರೂ ಇಲ್ಲದಂತೆ ಕಾಂಗ್ರೆಸ್ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

https://www.facebook.com/348696862377218/posts/934016853845213/

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *