ನಗರಾಭಿವೃದ್ಧಿಗೆ ಮೂರು ಕೋಟಿ ವಿಶೇಷ ಅನುದಾನ

ಸಿದ್ಧಾಪುರ ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ಕಾಮಗಾರಿಗಳಿಗೆ 3 ಕೋಟಿ ಅನುದಾನ ಮಂಜೂರಿಯಾಗಿದ್ದು ಇದೇ ವರ್ಷ ಕ್ಷೇತ್ರಕ್ಕೆ ನೂರು ಕೋಟಿಗೂ ಹೆಚ್ಚು ಅನುದಾನ ಬರಲಿದೆ ಎಂದು ಪಟ್ಟಣ ಪಂಚಾಯತ್ ಸದಸ್ಯ ಮಾರುತಿ ನಾಯ್ಕ ಹೊಸೂರು ತಿಳಿಸಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಚಟುವಟಿಕೆ ನಡೆಯುತಿದ್ದು ಇದರ ಹಿಂದಿನ ಶಕ್ತಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಂದರು.

ಸಿದ್ಧಾಪುರದಲ್ಲಿ 10 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಪ್ರಾರಂಭವಾಗಿದೆ. ನಗರದ ಅತಿ ಅವಶ್ಯ ಕೆಲಸಗಳಾದ ಮುಂಡ್ಗೆಹಳ್ಳದ ಗಟಾರ, ವಿದ್ಯಾರಣ್ಯಗಲ್ಲಿ ಮತ್ತು ಸಾಯಿನಗರದ ರಸ್ತೆ ಕಾಂಕ್ರೀಟಿಕರಣ, ಕನ್ನಳ್ಳಿ ರಸ್ತೆ ಕಾಮಗಾರಿ ಸೇರಿದಂತೆ 8 ವಾರ್ಡ್ಗಳ 11 ಕಾಮಗಾರಿಗಳಿಗೆ ಮೂರು ಕೋಟಿ ಮಂಜೂರಿಯಾಗಿದೆ. ಇನ್ನುಳಿದ 7 ವಾರ್ಡ್ ಗಳಿಗೆ ಅನುದಾನ ಬರಲಿದೆ. ಇದರ ಮಧ್ಯೆ ನಗರದ ಶಾಶ್ವತ ಕುಡಿಯುವ ನೀರಿನ ಯೋಜನೆ, ಕೆರೆಗಳ ಅಭಿವೃದ್ಧಿಗೆ ಕ್ರೀಯಾಯೋಜನೆ ಮಾಡಿ ಅವುಮಂಜೂರಿ ಹಂತದಲ್ಲಿದೆ. ಇವುಗಳ ವಿವರವನ್ನು ಶಾಸಕರು ಘೋಶಿಸಲಿದ್ದಾರೆ ಎಂದರು.

https://fb.watch/7BVh1txkzV/

ಪ್ರವೇಶ ಪ್ರಕಟಣೆ- 2021-22 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ ಹಾಗೂ ಬಿಬಿಎ ಕೋರ್ಸ್‍ಗಳ ಪ್ರವೇಶ ಪ್ರಾರಂಭ
ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2021-22 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ ಹಾಗೂ ಬಿಬಿಎ ಕೋರ್ಸ್‍ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದೆ. ದಿ.25/08/2021 ರಿಂದ ಕಾಲೇಜಿನ ಕಛೇರಿಯಲ್ಲಿ ಪ್ರವೇಶ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುವುದು. ಪಿಯುಸಿ ಪಾಸಾದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪ್ರವೇಶ ಅರ್ಜಿಯನ್ನು ತುಂಬಿ ಜೂತೆಗೆ ಅಗತ್ಯ ದಾಖಲಾತಿಗಳೊಂದಿಗೆ ದಿ. 04-09-2021 ರೊಳಗೆ ಪ್ರವೇಶ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಛೇರಿಯನ್ನು ಸಂಪರ್ಕಿಸಿರಿ. ದೂ: 08389-298027

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *