ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ: ಭಗವತಿ



ಯಲ್ಲಾಪುರ: ‘ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಬಿಟ್ಟುಕೊಡುವ ಕೆಲಸವನ್ನು ಪಾಲಕರು ಮಾಡಬೇಕು. ಮಕ್ಕಳನ್ನು ಅಂಕಗಳ ಹಿಂದೆ ಓಡಿಸುವುದನ್ನು ಬಿಡಬೇಕು. ಇಲ್ಲದೆ ಹೋದರೆ ಮಕ್ಕಳು ಸೃಜನಶೀಲತೆಯನ್ನು ಕಳೆದುಕೊಂಡು ಪೇಲವವಾಗುತ್ತಾರೆ’ ಎಂದು ಮಕ್ಕಳ ಸಾಹಿತಿ ವೈ.ಜಿ. ಭಗವತಿ ಹೇಳಿದರು.
ಅವರು ಇಂದು ತಾಲೂಕಿನ ಆನಗೋಡ ಹಿ.ಪ್ರಾ. ಶಾಲೆಯಲ್ಲಿ ಬೆಂಗಳೂರಿನ ಇಂಡಿಯಾ ಫೌಂಡೇಷನ್ ಫಾರ್ ದಿ ಆರ್ಟ್ಸ ಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ‘ಹಕ್ಕಿಗಳು ಹಾರುತಿವೆ ನೋಡಿದಿರಾ…’ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಶಾಲೆಯ ಮಕ್ಕಳು ಬರೆದ ಲೇಖನಗಳ ಪುಸ್ತಕ ‘ಹಕ್ಕಿಪುಕ್ಕ’ವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

‘ಇಂದು ಪಾಲಕರು ಮಕ್ಕಳು ಅಂಕಗಳ ಬೆನ್ನು ಹತ್ತುವಂತೆ ಮಾಡಿದ್ದಾರೆ. ಮಕ್ಕಳೆಲ್ಲ ಪಠ್ಯಪುಸ್ತಕದ ಕೀಟವಾಗಿದ್ದಾರೆ. ಮಕ್ಕಳಲ್ಲಿ ಅನೇಕ ಶೃಜನಶೀಲ ಕಲೆಗಳು ಅಡಗಿರುತ್ತವೆ. ಅವು ಹೊರಬರಬೇಕಾದರೆ ಪಾಲಕರು, ಶಿಕ್ಷಕರ ಸಹಕಾರ ಅವಶ್ಯವಾಗಿದೆ. ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ಅವಕಾಶ ನೀಡಬೇಕು. ಆ ಮೂಲಕ ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅರಳಲು ಅವಕಾಶ ಮಾಡಿಕೊಡಬೇಕು’ ಎಂದರು.


ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಗೋಳಿಗದ್ದೆ ಕಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್. ಎನ್ ಹೆಗಡೆಯವರು, ‘ಇಂದು ಪರಿಸರ ವಿನಾಶದಿಂದ ಭೂಮಿಯ ಕಾವು ಹೆಚ್ಚುತ್ತಿದೆ ಮತ್ತು ಅದರಿಂದ ಹವಾಮಾನದಲ್ಲಿ ವೈಪರಿತ್ಯ ಪರಿಣಾಮಗಳುಂಟಾಗುತ್ತಿವೆ ಎಂದು ಹೇಳಲಾಗುತ್ತಿದೆ. ಇಂಥ ಸಂದರ್ಭದಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕಾಗಿದೆ. ನಾಳಿನ ನಾಗರಿಕರಾದ ಮಕ್ಕಳಿಗೆ ಪ್ರಾಣಿ ಪಕ್ಷಿ ಪರಿಸರದ ಬಗ್ಗೆ ತಿಳಿವಳಿಕೆ ಮೂಡುವಂಥ ಕಾರ್ಯಕ್ರಮ ಮಾಡಬೇಕು. ಈ ನಿಟ್ಟಿನಲ್ಲಿ ಹಕ್ಕಿಗಳು ಹಾರುತಿವೆ ನೋಡಿದಿರಾ ಕಾರ್ಯಕ್ರಮ ಯಶಸ್ವಿಯಾಗಿದೆ’ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಂಚನಳ್ಳಿ ಪದೋನ್ನತಿ ಮುಖ್ಯೋಪಾಧ್ಯಾ ಯ ಸುಧಾಕರ ನಾಯಕ ಅವರು ‘ಮಕ್ಕಳು ಬರೆದ ಹಕ್ಕಿ ಚಿತ್ರಗಳ ಪ್ರದರ್ಶನ’ವನ್ನು ಉದ್ಘಾಟಿಸಿ ಮಾತನಾಡಿದರು. ‘ಮಗು ನಿಸರ್ಗದಲ್ಲಿ ಬೆರೆತು ಅನುಭವದ ಮೂಲಕ ಬೆಳೆಯಬೇಕು. ತನ್ನಲ್ಲಿರುವ ಸೃಜನಶೀಲತೆಯನ್ನು ಬೆಳೆಸಿಕೊಳ್ಳಲು ಶಿಕ್ಷಕರು ಅವಕಾಶ ಒದಗಿಸಿಕೊಡಬೇಕು. ಹಕ್ಕಿಗಳು ಹಾರುತಿವೆ ನೋಡಿದಿರಾ ಯೋಜನೆಯಲ್ಲಿ ಮಕ್ಕಳು ತಮ್ಮ ಅನುಭವದ ಚಿಕ್ಕ ಚಿಕ್ಕ ಕಥೆಗಳನ್ನು ಬರೆಯುವುದು, ಚಿತ್ರ ಬಿಡಿಸುವುದು, ಪಕ್ಷಿಗಳನ್ನು ವೀಕ್ಷಿಸಿ ಗುರುತಿಸುವುದು ಮುಂತಾದ ಚಟುವಟಿಕೆಗಳಲ್ಲಿ ತೊಡಗಿಕೊಂಡರು. ಇಂಥ ಚಟುವಟಿಕೆಗಳು ಮಕ್ಕಳು ಮೊಬೈಲ್ ಗೀಳಿನಿಂದ ಹೊರಬರಲು ಸಹಾಯ ಮಾಡುತ್ತವೆ’ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರ ಭಟ್ ವಹಿಸಿದ್ದರು. ವಿದ್ಯಾರ್ಥಿನಿ ಶ್ರೀಯಾ ಹಾಗೂ ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಶಾಲೆಯ ಮುಖ್ಯಾಧ್ಯಾಪಕಿ ಕುಸುಮಾ ನಾಯಕ ಸ್ವಾಗತಿಸಿದರು. ಐಎಫ್‌ಎ ಸಂಸ್ಥೆಯ ಗ್ರಾö್ಯಂಟಿ ಗಣೇಶ ನಾಡೋರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪ್ರತಿಭಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಶಿಕ್ಷಕಿ ಸವಿತಾ ಹೆಗಡೆ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *