ರಾಮಕೃಷ್ಣ ಹೆಗಡೆ ಅವರ ಜೀವನ, ಕೊಡುಗೆ ನಮಗೆ ಸದಾ ಆದರ್ಶಪ್ರಾಯ

ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ
ಸಿದ್ದಾಪುರ
ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀಧರ ಕೊಂಡ್ಲಿ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ೯೬ ಜನ್ಮ ದಿನವನ್ನು ಆಚರಿಸಲಾಯಿತು.
ಅಲಂಕೃತಗೊಂಡ ರಾಮಕೃಷ್ಣ ಹೆಗಡೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಸಿಹಿ ಹಂಚಿ ಅವರನ್ನು ನೆನಪಿಸಿಕೊಳ್ಳಲಾಯಿತು. ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ, ಶ್ರೀಧರ ಕೊಂಡ್ಲಿ, ವಿನಾಯಕ ಜಿ.ಕೊಂಡ್ಲಿ, ಲೋಕೇಶ ಕೆ.ನಾಯ್ಕ ಬಾಲಿಕೊಪ್ಪ, ವಾಸುದೇವ ಕೊಂಡ್ಲಿ, ಬರ‍್ಯಾ ಕೊಪ್ಪ, ತೇಜು ಎಸ್.ನಾಯ್ಕ, ಯಶೋಧರ ಎಚ್.ನಾಯ್ಕ, ಶ್ರೇಯಸ್ ಕೊಂಡ್ಲಿ ಮುಂತಾದವರು ಪಾಲ್ಗೊಂಡಿದ್ದರು.

ರಾಮಕೃಷ್ಣ ಹೆಗಡೆ ಅವರ ಜೀವನ, ಕೊಡುಗೆ ನಮಗೆ ಸದಾ ಆದರ್ಶಪ್ರಾಯ: ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ.

edh

“ಕರ್ನಾಟಕದಲ್ಲಿ ದೀರ್ಘಕಾಲದ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿ ಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳಾದ ದಿವಂಗತ ರಾಮಕೃಷ್ಣ ಹೆಗಡೆಯವರು ರಾಜ್ಯದಲ್ಲಷ್ಟೇ ಅಲ್ಲ ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದರು. ಕೇಂದ್ರದಲ್ಲಿ ವಿಪಿ ಸಿಂಗ್ ನೇತ್ರತ್ವದ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು” ಎಂದು ಬೊಮ್ಮಾಯಿ ಹೆಗಡೆಯವರ ನಾಯಕತ್ವವನ್ನು ಬಣ್ಣಿಸಿದ್ದಾರೆ

“ಹೆಗಡೆಯವರ ಜೊತೆ ನನ್ನ ತಂದೆ ಎಸ್. ಆರ್. ಬೊಮ್ಮಾಯಿ ಅವರ ಸ್ನೇಹ ಸಂಬಂಧ ಅವರ ಜೀವನದ ಅಂತ್ಯದ ವರೆಗೂ ಇತ್ತು. ಹೆಗಡೆಯವರ ಸಂಪುಟದಲ್ಲಿ ಸಚಿವರಾಗಿ ಜನತಾದಳವನ್ನು ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಹೆಗಡೆಯವರು ಮತ್ತು ಬೊಮ್ಮಾಯಿಯವರು ಅವಿಶ್ರಾಂತವಾಗಿ ಶ್ರಮಿಸಿದ್ದರು.”
 
“ಹೆಗಡೆಯವರು ರಾಜ್ಯ ಕಂಡ ಮುತ್ಸದ್ದಿ ನಾಯಕರು. ಮೌಲ್ಯಾಧಾರಿತ ರಾಜಕೀಯದ ಪ್ರವರ್ತಕರು. ದಕ್ಷ ಆಡಳಿತಕ್ಕೆ, ಪ್ರಾಮಾಣಿಕತೆಗೆ ಅವರು ಮಾದರಿ. ಹೆಗಡೆಯವರ ಕೊಡುಗೆ ರಾಜ್ಯಕ್ಕೆ ಅಪಾರ.  ಮುಖ್ಯವಾಗಿ ಆಡಳಿತ ವಿಕೇಂದ್ರೀಕರಣಕ್ಕೆ ಅವರು ಮಾಡಿದ ಪಂಚಾಯತ್ ರಾಜ್ ವ್ಯವಸ್ಥೆ ದೇಶದಲ್ಲಿ ಅನುಕರಣೀಯ ವೆಂದು ಪ್ರಶಂಸೆಗೆ ಪಾತ್ರವಾಗಿದೆ. ನನ್ನ ತಂದೆಯವರೊಂದಿಗೆ ಹೆಗಡೆಯವರ ಸಂಬಂಧ ಅವಿಸ್ಮರಣೀಯ. ಅತ್ಯಂತ ಧನ್ಯತೆಯಿಂದ ಸ್ಮರಿಸಿ ಕೊಳ್ಳುತ್ತೇನೆ.” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.  (kpc)

.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *