ಸತತ ಅಧ್ಯಯನ ಶ್ರಮದಿಂದ ವ್ಯಕ್ತಿತ್ವ ಸಾಧ್ಯ.

ಸಿದ್ದಾಪುರ
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೀಡಿದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೇವಾಸ ಸಕಿಪ್ರಾ ಶಾಲಾ ಶಿಕ್ಷಕ ದತ್ತಾತ್ರಯ ಎಲ್.ಭಾಗವತ್ ಅವರನ್ನು ಶಾಲಾ ಎಸ್‍ಡಿಎಂ ಹಾಗೂ ಪಾಲಕ-ಪೋಷಕರು ಸೋಮವಾರ ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ದತ್ತಾತ್ರಯ ಭಾಗವತ ಪ್ರಶಸ್ತಿ ದೊರಕಿರುವುದು ನನಗಾದರೂ ಅದು ಈ ಶಾಲೆಗೆ ನೀಡಿದ ಗೌರವ . ಎಲ್ಲರ ಸಹಕಾರದಿಂದ ಶಾಲೆಯ ಅಭಿವೃದ್ಧಿಯ ಜೊತೆಗೆ ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಪ್ರಾಮಾಣಿಕ ಪ್ರಯತ್ನಮಾಡಿದ್ದರಿಂದ ಪ್ರಶಸ್ತಿ ಬಂದಿದೆ ಎಂದು ಹೇಳಿದರು.
ಎಸ್‍ಡಿಎಂಸಿ ಅಧ್ಯಕ್ಷ ರಾಘವೇಂದ್ರ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ದೇವಾಸ, ಎಂ.ಡಿ.ನಾಯ್ಕ ತೆಂಗಿನಮನೆ, ಹಳೆ ವಿದ್ಯಾರ್ಥಿ ರವಿ ನಾಯ್ಕ ಮಾತನಾಡಿದರು.
ಎಸ್‍ಡಿಎಂಸಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು. ಜಯಂತ ನಾಯ್ಕ ತೆಂಗಿನಮನೆ ನಿರ್ವಹಿಸಿದರು.


ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿ-ಡಾ|| ರವಿ ಹೆಗಡೆ
ಸಿದ್ದಾಪುರ- : ಶಿಕ್ಷಕ ವೃತ್ತಿ ಅತ್ಯಂತ ಮಹತ್ವದ್ದು. ತಮ್ಮ ನಡೆನುಡಿಗಳಿಂದ ವಿದ್ಯಾರ್ಥಿಗಳಿಗೆ ಮಾದರಿಯಾಗಲು ಸಾಧ್ಯ. ಉತ್ತಮ ಶಿಕ್ಷಕ ಅನೇಕ ವಿದ್ಯಾರ್ಥಿಗಳನ್ನು ಪ್ರಭಾವಗೊಳಿಸಬಲ್ಲ. ಅವರ ಜೀವನವನ್ನು ರೂಪಿಸಬಲ್ಲ ಎಂದು ಲಯನ್ಸ ಅಂತರಾಷ್ಟ್ರೀಯ ಸಂಸ್ಥೆ 317ಬಿ ಜಿಲ್ಲೆಯ ಮಾಜಿ ಜಿಲ್ಲಾ ಗವರ್ನರ್ ಡಾ|| ರವಿ ಹೆಗಡೆ ಹೂವಿನಮನೆ ಹೇಳಿದರು.
ಅವರು ಸಿದ್ದಾಪುರ ಲಯನ್ಸ ಕ್ಲಬ್‍ದಿಂದ ಬಾಲಭವನದಲ್ಲಿ ಏರ್ಪಡಿಸಲಾಗಿದ್ದ ಇಬ್ಬರು ರಾಷ್ಟ್ರಪ್ರಶಸ್ತಿ ಪುರಸ್ಕೃ ತ ನಿವೃತ್ತ ಮುಖ್ಯ ಶಿಕ್ಷಕರನ್ನು ಗೌರವಿಸುವುದರ ಮೂಲಕ ಶಿಕ್ಷಕ ದಿನಾಚರಣೆ ಆಚರಿಸಲಾಯಿತು.
ನಿವೃತ್ತ ಮುಖ್ಯಶಿಕ್ಷಕರು ಸಾಹಿತಿಗಳು ಆದ ತಮ್ಮಣ್ಣ ಬೀಗಾರರವರು ಗೌರವಕ್ಕೆ ಕೃತಜ್ಞತೆ ಹೇಳಿ ಪ್ರತಿಯೊಬ್ಬ ಶಿಕ್ಷಕನೂ ತನ್ನ ವೃತ್ತಿಯನ್ನು ಬಹುವಾಗಿ ಪ್ರೀತಿಸಿದಾಗ, ಕೆಲಸದಲ್ಲಿ ಆಸಕ್ತಿ ಹೆಚ್ಚುತ್ತದೆ. ಅದು ಮಕ್ಕಳ ಭವಿಷ್ಯಕ್ಕೆ ಪೂರಕ ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಬರಹಗಾರ ಜಿ.ಜಿ ಹೆಗಡೆ ಬಾಳಗೋಡ ಮಾತನಾಡಿ. ಶಿಕ್ಷಕರು ತಮ್ಮ ಬೋಧನೆಯ ಜೊತೆ ಮಾನವೀಯ ಮೌಲ್ಯಗಳನ್ನು ಸಹ ಅಳವಡಿಸಿಕೊಳ್ಳಲು ಕಲಿಸಬೇಕು ಎಂದರು.

ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ವಿಶೇಷ ಆಹ್ವಾನಿತರಾಗಿದ್ದರು.
ನಿಕಟಪೂರ್ವ ಅಧ್ಯಕ್ಷ ಸಿ.ಎಸ್.ಗೌಡರ್ ಹೆಗ್ಗೋಡ್ಮನೆ ಆರ್.ಎಂ. ಪಾಟೀಲ, ನಾಗರಾಜ ದೋಶೆಟ್ಟಿ ಮಾತನಾಡಿದರು.
ಮಾಜಿ ಅಧ್ಯಕ್ಷರು ಸತೀಶ ಗೌಡರ್ ಹೆಗ್ಗೋಡ್ಮನೆ, ನಾಗರಾಜ ಪಾಟೀಲ ಎಂ. ಆರ್. ಪಾಟೀಲ ವೀಣಾ ಶೇಟ, ಆನಂದ ಶೇಟ್, ಕುಮಾರ ಗೌಡರ್ ಹೊಸೂರು ಮುಂತಾದವರು ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ಯಾಮಲಾ ಹೆಗಡೆ ಹೂವಿನ್ಮನೆ ವಹಿಸಿ ಮಾತನಾಡಿ. ಶಿಕ್ಷಕವೃತ್ತಿ ಅತ್ಯಂತ ಪವಿತ್ರವಾದುದು. ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಶಿಕ್ಷಕರು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಕಾರ್ಯದರ್ಶಿ ರಾಘವೇಂದ್ರ ಭಟ್ಟ ಸ್ವಸ್ತಿಕ್ ಸ್ವಾಗತಿಸಿದರು. ಕೋಶಧ್ಯಕ್ಷ ಪ್ರಶಾಂತ ಡಿ. ಶೇಟ್ ಹಾಳದಕಟ್ಟಾ ವಂದಿಸಿದರು.


ಸತತ ಅಧ್ಯಯನ ಶ್ರಮದಿಂದ ವ್ಯಕ್ತಿತ್ವ ಸಾಧ್ಯ.
ಸಿದ್ದಾಪುರ-: ಸತತ ಅಧ್ಯಯನದ ಹಾಗೂ ವಿಶೇಷ ಶ್ರಮದ ಮೂಲಕ ಉತ್ತಮ ವ್ಯಕ್ತಿತ್ವವನ್ನು ಪಡೆಯಲು ಸಾಧ್ಯ. ರಾಷ್ಟ್ರಮಟ್ಟದ ಪ್ರತಿಭಾ ಪರೀಕ್ಷೆಗಳನ್ನು ಎದುರಿಸಿ. ಭಾರತೀಯ ಆಡಳಿತಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಉತ್ತೀರ್ಣರಾದರೆ ಉನ್ನತ ಸ್ಥಾನವನ್ನು ಹೊಂದಲು ಅವಕಾಶವಿದೆ. ವಿದ್ಯಾರ್ಥಿ ಸಮುದಾಯ ಇದರ ಸದುಪಯೋಗ ಪಡೆಯಬೇಕೆಂದು ಗುಜರಾತ್ ರಾಜ್ಯದ ಆರಕ್ಷಣ ಇಲಾಖೆಯ ಅಪರ ಮಹಾನಿರ್ದೇಶಕ ನರಸಿಂಹ ಕೋಮಾರ ಬೀಗಾರ ಐ.ಪಿ.ಎಸ್. ಹೇಳಿದರು.
ಅವರು ಸಿದ್ದಾಪುರಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಮನ್ವಯ ಪ್ರಕಾಶನದ ಪರವಾಗಿ ಜಿ.ಜಿ. ಹೆಗಡೆ ಬಾಳಗೋಡ ಅವರು ಪುಸ್ತಕಗಳನ್ನು ನೀಡಿ ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಾಹಿತಿ ತಮ್ಮಣ್ಣ ಬೀಗಾರ, ಸವಿತಾ ಶಾನಭಾಗ, ಸ್ವರ್ಣಲತಾ ಶಾನಭಾಗ ಮುಂತಾದವರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *