ಕಾಡುಹಂದಿ ಭೇಟೆಗೆ ಅನುಮತಿ ನೀಡಲು ಮತ್ತು ವಿದ್ಯುತ್ ತಂತಿ ತೆಗೆಯಲು ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡುಪ್ರಾಣಿಗಳ ಹಾವಳಿಯಿಂದ ರೈತ ತೊಂದರೆಗೆ ಒಳಗಾಗುತಿದ್ದಾನೆ. ಈ ರಗಳೆ,ಹಾನಿಯಿಂದ ಪಾರಾಗಲು ಯಾವುದೇ ಪರಿಹಾರೋಪಾಯಗಳಿಲ್ಲ. ಕಾಡುಪ್ರಾಣಿಗಳು ಮಾಡುವ ಬೆಳೆ ನಾಶಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡುತ್ತದೆಯಾದರೂ ಅದು ಅತ್ಯಲ್ಫ ಇಂಥ ಕಾಡುಪ್ರಾಣಿ ಹಾವಳಿ ತಡೆ ಮತ್ತು ರೈತರ ಹಿತರಕ್ಷಣೆ ಹಿನ್ನೆಲೆಯಲ್ಲಿ ಅನೇಕ ಪ್ರತಿಭಟನೆ, ಜನಸಂಘಟನೆಗಳಾಗಿವೆ. ಈ ಕಾಡು ಪ್ರಾಣಿಗಳಲ್ಲಿ ರೈತರ ಬೆಳೆಗೆ ಕಂಟಕವಾಗಿರುವುದು ಕಾಡು ಹಂದಿ ಪಡೆ. ಒಂಟಿಗ ಕಾಡುಹಂದಿ ಹಾಗೂ ಕಾಡುಹಂದಿ ಗುಂಪುಗಳು ಅಡಿಕೆ, ತೆಂಗು, ಬಾಳೆ ಸೇರಿದಂತೆ ಎಲ್ಲಾ ಕೃಷಿ ಉತ್ಫನ್ನಗಳನ್ನು ತಿಂದು,ಹಾಳುಮಾಡಿ ಹಾನಿಮಾಡುತ್ತವೆ. ಈ ಕಾಡುಹಂದಿ ಹಾವಳಿ ತಡೆಯಲು ಅವುಗಳನ್ನು ಭೇಟೆಯಾಡುವುದೊಂದೇ ಪರಿಹಾರ ಸೂತ್ರ ಎನ್ನುವ ಅಭಿಪ್ರಾಯ ಸಾರ್ವತ್ರಿಕವಾಗಿದೆ. ನೆರೆಯ ಗೋವಾ-ಕೇರಳ ರಾಜ್ಯಗಳಲ್ಲಿ ಕಾಡುಹಂದಿಗಳನ್ನು ಭೇಟೆಯಾಡಲು ಸರ್ಕಾರ ಅನುಮತಿ ನೀಡಿದೆ ಆದರೆ ಕರ್ನಾಟಕದಲ್ಲಿ ಕಾಡುಹಂದಿ ಭೇಟೆ ನಿಷೇಧಿಸಲ್ಪಟ್ಟಿದ್ದು ಕಾಡು ಹಂದಿ ಬೇಟೆ ಮಾಡಿ ಬೆಳೆ ರಕ್ಷಿಸಿಕೊಳ್ಳುವ ರೈತರಿಗೆ ತೊಂದರೆಯಾಗುವಂಥ ಕಾನೂನು ಕಟ್ಟಳೆ ಗಳು ಕರ್ನಾಟಕದಲ್ಲಿ ಜಾರಿಯಲ್ಲಿವೆ. ಈ ಕಾನೂನು ಕಟ್ಟುಪಾಡುಗಳನ್ನು ಸಡಿಲಿಸಿ ಕಾಡುಹಂದಿ ಭೇಟೆಗೆ ಅವಕಾಶ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

ಈ ಬಗ್ಗೆ ತಮ್ಮ ಅನುಭವದ ಅನಿಸಿಕೆ ಹಂಚಿಕೊಂಡಿರುವ ಪ್ರಗತಿಪರ ಕೃಷಿಕ ಡಿ.ಕೆ.ನಾಯ್ಕ ತೆಂಗಿನಮನೆ ನೆರೆಯ ಗೋವಾ, ಕೇರಳಗಳಲ್ಲಿ ಕರ್ನಾಟಕದಷ್ಟು ದೊಡ್ಡ ಪ್ರಮಾಣದಲ್ಲಿ ಕೃಷಿ ಭೂಮಿಯಿಲ್ಲ ಆದರೆ ಅಲ್ಲಿಯ ಸರ್ಕಾರಗಳು, ಜನಪ್ರತಿನಿಧಿಗಳು ಆ ರಾಜ್ಯಗಳಲ್ಲಿ ಕಾಡುಹಂದಿ ಬೇಟೆಗೆ ಅವಕಾಶಕಲ್ಫಿಸುವಂತೆ ಸರ್ಕಾರಗಳಿಗೆ ಮನವರಿಕೆ ಮಾಡಿ ಕಾನೂನು ಸಡಿಲಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಡುಹಂದಿ ಮತ್ತು ಕಾಡುಪ್ರಾಣಿಳಿಂದ ಆಗುತ್ತಿರುವ ಅನಾಹುತ, ಬೆಳೆನಾಶಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಿಲ್ಲ. ಈ ಬಗ್ಗೆ ವಿಸ್ತ್ರತ ಚರ್ಚೆಯಾಗಿ ರೈತರಿಗೆ ಕಂಟಕವಾಗಿರುವ ಕಾಡುಹಂದಿ ಭೇಟೆಗೆ ಅವಕಾಶ ಕಲ್ಫಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ರೈತಸಂಘ ಮತ್ತು ಇತರ ಪಕ್ಷ, ಸಂಘಟನೆಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ವಿದ್ಯುತ್ ತಂತಿ ಸಮಸ್ಯೆ-

ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಗಮ ವಿದ್ಯುತ್ ಸಂಪರ್ಕ ವಿತರಣೆಗಾಗಿ ರಾಜ್ಯದಾದ್ಯಂತ ವಿದ್ಯುತ್ ತಂತಿ,ಲೈನ್ ಗಳನ್ನು ಅಳವಡಿಸಿದೆ. ಹೀಗೆ ಬಹುಹಿಂದೆ ಅಳವಡಿಸಿದ ವಿದ್ಯುತ್ ಸರಬರಾಜು ತಂತಿ ಮಾರ್ಗ ರೈತರ ಭೂಮಿ ಜಮೀನುಗಳ ಮೂಲಕ ಹಾಯ್ದು ಹೋಗಿದೆ. ಇಂಥ ವಿದ್ಯುತ್ ಮಾರ್ಗ, ತಂತಿಗಳಿಂದ ರೈತರ ಜನ-ಜಾನುವಾರುಗಳಿಗೆ ಕಂಟಕವಾಗುತ್ತಿದೆ. ಈ ತಂತಿ ವ್ಯವಸ್ಥೆಯನ್ನು ಸರ್ಕಾರ, ನಿಗಮ ಬದಲಿಸುವುದಿಲ್ಲ, ರೈತರು ಬದಲಿಸಲು ಕೋರಿದರೆ ರೈತರಿಗೆ ಖರ್ಚು ವಿಧಿಸಲಾಗುತ್ತದೆ. ರೈತರನ್ನು ಕೇಳದೆ ನಿಗಮ ವಿದ್ಯುತ್ ಸಂಪರ್ಕ ತಂತಿ ಅಳವಡಿಸಿದ ಲೈನ್ ಗಳಿಂದ ಅಪಾಯವಾದರೆ ರೈತರ ಪರ ನಿಲ್ಲುವವರು ಯಾರು? ಈ ಕಾರಣಗಳಿಂದ ವಿದ್ಯತ್ ಲೈನ್ ಸ್ಥಳಾಂತರಕ್ಕೆ ರೈತರಿಗೆ ಹೊರೆಮಾಡದೆ ಸರ್ಕಾರ ಈ ವಿದ್ಯುತ್ ಲೈನ್ ಸ್ಥಳಾಂತರ ಮಾಡಬೇಕೆಂದು ರೈತರು ಸರ್ಕಾರವನ್ನು ಕೋರಿದ್ದಾರೆ.

ಈ ಬಗ್ಗೆ ಸಚಿವ ಸುನಿಲ್ ಕುಮಾರರಿಗೆ ಮನವಿ ನೀಡುವ ಸುಳಿವು ನೀಡಿರುವ ಯುವ ರೈತರಾದ ಸಂತೋಷ ಕಲಕರಡಿ, ಪಾಂಡುರಂಗ ನಾಯ್ಕ, ಸುದರ್ಶನ ನಾಯ್ಕ, ರಾಮಚಂದ್ರನಾಯ್ಕ ಸೇರಿದ ರೈತರು ಇದಕ್ಕೆ ರೈತಸಂಘ, ಇತರ ಸಂಘಟನೆಗಳ ಬೆಂಬಲ ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *