ಪಂಚಮಸಾಲಿಗಳನ್ನು 2ಎ ಸೇರಿಸುವುದಕ್ಕೆ ವಿರೋಧ,bsndp ಸಂವಾದ ಸಭೆಯ ತೀರ್ಮಾನ

ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿ ಸುವ ಪ್ರಸ್ಥಾಪಕ್ಕೆ ಸರ್ಕಾರ ಸಮ್ಮತಿಸಬಾರದು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಪ್ರಯತ್ನದ ಬಗ್ಗೆ ಸ್ಪಷ್ಟತೆ ಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಸ್ಥೆ ಆಯೋಜಿಸಿದ್ದ ಸಂವಾದ ಸಭೆ ಸರ್ಕಾರವನ್ನು ಆಗ್ರಹಿಸಿದೆ. ಸಿದ್ಧಾಪುರದ ಬಾಲಭವನದಲ್ಲಿ ನಡೆದ ಚಿಂತನಾ (ಸಂವಾದಸಭೆ) ಸಭೆಯಲ್ಲಿಈ ಅಭಿಪ್ರಾಯ ವ್ಯಕ್ತಪಡಿಸಿದ ಚಿಂತಕರು ರಾಜಕೀಯ ಲಾಭಿಯ ಅಂಗವಾಗಿ ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿಸುವುದರಿಂದ ಹಿಂದುಳಿದವರಿಗೆ ಅನ್ಯಾಯವಾಗುವ ಬಗ್ಗೆ ಯಾಕೆ ಯಾರೂ ಯೋಚಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ಸಂವಾದ ಸಭೆಯನ್ನು ಉದ್ಘಾಟಿಸಿದ ಬಿ.ಎಸ್.ಎನ್.ಡಿ.ಪಿ. ರಾಜ್ಯ ಸಂಚಾಲಕ ಲೋಹಿತ್ ನಾಯ್ಕ ಮೀಸಲಾತಿ ಮತ್ತು ಅಂಬೇಡ್ಕರ್ ವಿಚಾರಗಳ ಬಗ್ಗೆ ಸ್ಪಷ್ಟತೆ ಬೇಕು. ಯಾರೋ ಬೇಡಿಕೆ ವ್ಯಕ್ತಪಡಿಸಿದ ಮಾತ್ರಕ್ಕೆ ಸರ್ಕಾರ ಎಲ್ಲರಿಗೂ ಮೀಸಲಾತಿ ಕೊಡುತ್ತಾ ಹೋದರೆ ಮೀಸಲಾತಿಯ ಮಹತ್ವವೇ ಕಡಿಮೆಯಾಗುತ್ತದೆ.ಈಗ ಇಂಥ ಪ್ರಯತ್ನಗಳು ನಡೆಯುತ್ತಿರುವುದರಿಂದ ಸಾಮಾಜಿಕ ನ್ಯಾಯದ ಸವಾಲು ಎದುರಾಗಿದೆ ಎಂದು ಪೀಠಿಕೆ ಹಾಕಿದರು.

ಸಂವಾದ ಸಭೆಯಲ್ಲಿ ಉಪನ್ಯಾಸ ನೀಡಿದ ಲಕ್ಷಣ ನಾಯ್ಕ ನಾಯ್ಕ ಕಾನಗೋಡು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಬೇಡಿಕೆ ಪ್ರಸ್ಥಾಪಿಸಿ ಇದರಿಂದ ಈಡಿಗ ಉಪಪಂಗಡಗಳಿಗೆ ಅನ್ಯಾಯವಾಗುತ್ತದೆ ಎಂದರು.

ಇದಕ್ಕೆ ಪ್ರತಿಕ್ರೀಯಿಸಿದ ಪತ್ರಕರ್ತ ಕನ್ನೇಶ್ ನಾಯ್ಕ ಕೋಲಶಿರ್ಸಿ,ಮತ್ತು ಬಿ.ಆರ್. ನಾಯ್ಕ ಹೆಗ್ಗಾರಕೈ ಈಡಿಗ ಉಪಪಂಗಡಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಪ್ರಸ್ಥಾಪ ಹಳೆಯದು 2ಎ ವರ್ಗದಲ್ಲಿ ಹೆಚ್ಚಿನ ಸಂಖ್ಯೆಯೊಂದಿಗೆ ಸ್ಫರ್ಧಿಸಬೇಕಾಗುತ್ತದೆ. ಪ್ರವರ್ಗ 1 ಕ್ಕೆ ಸೇರಿಸುವ ವಿಚಾರ ಚರ್ಚೆಯಾಗಿ ನಿರ್ಣಯಕ್ಕೆ ಬರಬೇಕು. ಆದರೆ ಪ್ರವರ್ಗ1 ಅಥವಾ ಅನೂಚಿತ ವರ್ಗಕ್ಕೆ ಸೇರ್ಪಡೆ ಆಗುವುದರಿಂದ ಈಡಿಗ ಉಪಪಂಗಡಗಳಿಗೆ ಅನ್ಯಾಯವಾಗುತ್ತದೆ ಎನ್ನುವುದಕ್ಕೆ ಸಾಕ್ಷ ಅಥವಾ ಸ್ಫಷ್ಟತೆ ಇಲ್ಲ ಎಂದರು.

ಬಿ.ಎಸ್.ಎನ್.ಡಿ.ಪಿ ತಾಲೂಕಾಧ್ಯಕ್ಷ ವಿನಾಯಕ ನಾಯ್ಕ ಸ್ವಾಗತಿಸಿದರು.ಅಣ್ಣಪ್ಪ ನಾಯ್ಕ ನಿರೂಪಿಸಿದರು. ಹಿತೇಂದ್ರ ನಾಯ್ಕ, ದಿವಾಕರ ನಾಯ್ಕ, ಕೆ.ಆರ್. ವಿನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *