ಪಂಚಮಸಾಲಿಗಳನ್ನು 2ಎ ಸೇರಿಸುವುದಕ್ಕೆ ವಿರೋಧ,bsndp ಸಂವಾದ ಸಭೆಯ ತೀರ್ಮಾನ

ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿ ಸುವ ಪ್ರಸ್ಥಾಪಕ್ಕೆ ಸರ್ಕಾರ ಸಮ್ಮತಿಸಬಾರದು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಪ್ರಯತ್ನದ ಬಗ್ಗೆ ಸ್ಪಷ್ಟತೆ ಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಸ್ಥೆ ಆಯೋಜಿಸಿದ್ದ ಸಂವಾದ ಸಭೆ ಸರ್ಕಾರವನ್ನು ಆಗ್ರಹಿಸಿದೆ. ಸಿದ್ಧಾಪುರದ ಬಾಲಭವನದಲ್ಲಿ ನಡೆದ ಚಿಂತನಾ (ಸಂವಾದಸಭೆ) ಸಭೆಯಲ್ಲಿಈ ಅಭಿಪ್ರಾಯ ವ್ಯಕ್ತಪಡಿಸಿದ ಚಿಂತಕರು ರಾಜಕೀಯ ಲಾಭಿಯ ಅಂಗವಾಗಿ ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿಸುವುದರಿಂದ ಹಿಂದುಳಿದವರಿಗೆ ಅನ್ಯಾಯವಾಗುವ ಬಗ್ಗೆ ಯಾಕೆ ಯಾರೂ ಯೋಚಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ಸಂವಾದ ಸಭೆಯನ್ನು ಉದ್ಘಾಟಿಸಿದ ಬಿ.ಎಸ್.ಎನ್.ಡಿ.ಪಿ. ರಾಜ್ಯ ಸಂಚಾಲಕ ಲೋಹಿತ್ ನಾಯ್ಕ ಮೀಸಲಾತಿ ಮತ್ತು ಅಂಬೇಡ್ಕರ್ ವಿಚಾರಗಳ ಬಗ್ಗೆ ಸ್ಪಷ್ಟತೆ ಬೇಕು. ಯಾರೋ ಬೇಡಿಕೆ ವ್ಯಕ್ತಪಡಿಸಿದ ಮಾತ್ರಕ್ಕೆ ಸರ್ಕಾರ ಎಲ್ಲರಿಗೂ ಮೀಸಲಾತಿ ಕೊಡುತ್ತಾ ಹೋದರೆ ಮೀಸಲಾತಿಯ ಮಹತ್ವವೇ ಕಡಿಮೆಯಾಗುತ್ತದೆ.ಈಗ ಇಂಥ ಪ್ರಯತ್ನಗಳು ನಡೆಯುತ್ತಿರುವುದರಿಂದ ಸಾಮಾಜಿಕ ನ್ಯಾಯದ ಸವಾಲು ಎದುರಾಗಿದೆ ಎಂದು ಪೀಠಿಕೆ ಹಾಕಿದರು.

ಸಂವಾದ ಸಭೆಯಲ್ಲಿ ಉಪನ್ಯಾಸ ನೀಡಿದ ಲಕ್ಷಣ ನಾಯ್ಕ ನಾಯ್ಕ ಕಾನಗೋಡು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಬೇಡಿಕೆ ಪ್ರಸ್ಥಾಪಿಸಿ ಇದರಿಂದ ಈಡಿಗ ಉಪಪಂಗಡಗಳಿಗೆ ಅನ್ಯಾಯವಾಗುತ್ತದೆ ಎಂದರು.

ಇದಕ್ಕೆ ಪ್ರತಿಕ್ರೀಯಿಸಿದ ಪತ್ರಕರ್ತ ಕನ್ನೇಶ್ ನಾಯ್ಕ ಕೋಲಶಿರ್ಸಿ,ಮತ್ತು ಬಿ.ಆರ್. ನಾಯ್ಕ ಹೆಗ್ಗಾರಕೈ ಈಡಿಗ ಉಪಪಂಗಡಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಪ್ರಸ್ಥಾಪ ಹಳೆಯದು 2ಎ ವರ್ಗದಲ್ಲಿ ಹೆಚ್ಚಿನ ಸಂಖ್ಯೆಯೊಂದಿಗೆ ಸ್ಫರ್ಧಿಸಬೇಕಾಗುತ್ತದೆ. ಪ್ರವರ್ಗ 1 ಕ್ಕೆ ಸೇರಿಸುವ ವಿಚಾರ ಚರ್ಚೆಯಾಗಿ ನಿರ್ಣಯಕ್ಕೆ ಬರಬೇಕು. ಆದರೆ ಪ್ರವರ್ಗ1 ಅಥವಾ ಅನೂಚಿತ ವರ್ಗಕ್ಕೆ ಸೇರ್ಪಡೆ ಆಗುವುದರಿಂದ ಈಡಿಗ ಉಪಪಂಗಡಗಳಿಗೆ ಅನ್ಯಾಯವಾಗುತ್ತದೆ ಎನ್ನುವುದಕ್ಕೆ ಸಾಕ್ಷ ಅಥವಾ ಸ್ಫಷ್ಟತೆ ಇಲ್ಲ ಎಂದರು.

ಬಿ.ಎಸ್.ಎನ್.ಡಿ.ಪಿ ತಾಲೂಕಾಧ್ಯಕ್ಷ ವಿನಾಯಕ ನಾಯ್ಕ ಸ್ವಾಗತಿಸಿದರು.ಅಣ್ಣಪ್ಪ ನಾಯ್ಕ ನಿರೂಪಿಸಿದರು. ಹಿತೇಂದ್ರ ನಾಯ್ಕ, ದಿವಾಕರ ನಾಯ್ಕ, ಕೆ.ಆರ್. ವಿನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *