ಸಿದ್ಧಾಪುರ ಹೊರವಲಯದಲ್ಲಿ ಚಾಕುಇರಿತ ಪ್ರಕರಣ ಗಾಯಾಳು ಶಿವಮೊಗ್ಗಕ್ಕೆ ರವಾನೆ

ಸಿದ್ಧಾಪುರ ನಗರದ ಹೊರವಲಯದಲ್ಲಿ ಯುವಕರಿಬ್ಬರು ಪರಸ್ಫರ ಕಾದಾಡಿ ಒಬ್ಬನಿಗೆತೀವೃ ಗಾಯಗಳಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಚಾಕುಇರಿತದಿಂದ ಗಾಯಾಳುವಾದ ಯುವಕನನ್ನು ಬಳ್ಳಟ್ಟೆಯ ಪವನ್ ಕುಮಾರ ಎಂದು ಗುರುತಿಸಲಾಗಿದ್ದು ಚಾಕುಇರಿದಾತನನ್ನು ಸುಮಂತ್ ಎಂದು ಪತ್ತೆಹಚ್ಚಲಾಗಿದೆ.

ಇಂದು ಮಧ್ಯಾಹ್ನದ ಸಮಯಕ್ಕೆ ಈ ಪ್ರಕರಣ ನಡೆದಿದ್ದು ಗಲಾಟೆಯ ಕಾರಣ, ಹಿನ್ನೆಲೆ ತಿಳಿದುಬಂದಿಲ್ಲ. ಘಟನೆಯ ನಂತರ ಪವನ್ ಕುಮಾರನನ್ನು ಸಿದ್ಧಾಪುರ ತಾಲೂಕು ಆಸ್ಫತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿದ ನಂತರ ರಕ್ತಸ್ರಾವ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ನಗರದ ಹೊರವಲಯ ತಾಂತ್ರಿಕ ಮಹಾವಿದ್ಯಾಲಯವಿರುವ ಅವರಗುಪ್ಪಾದ ಬಳಿ ಈ ಗಲಾಟೆ ನಡೆದಿದ್ದು ಚಾಕುಇರಿತ,ರಗಳೆಯ ಕಾರಣ ತಿಲಿದುಬಂದಿಲ್ಲ.ಈ ಪ್ರಕರಣದ ಪ್ರಮುಖ ಆರೋಪಿ ಸುಮಂತ್ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡನ ಬಂಧನ

ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ‌ನನ್ನು ಪೊಲೀಸರು ಬಂಧಿಸಿದ್ದಾರೆ.

Representational image

ಧಾರವಾಡ: ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ‌ನನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ಸತ್ತೂರಿನ ಮಹಿಳೆ ಮನೆಗೆ ತೆರಳಿದ್ದ ಶ್ರೀಕಾಂತ ಜಮುನಾಳ‌ ಈ ವೇಳೆ ಮಹಿಳೆಯ ಕೈಹಿಡಿದು ಎಳೆದಾಡಿರುವ ವಿಡಿಯೋ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಘಟನೆ ಬಳಿಕ ಆರೋಪಿ ಶ್ರೀಕಾಂತ ಜಮನಾಳ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದರು. ಸವದತ್ತಿ ತಾಲೂಕಿನ ಪೊಲೀಸರಿಗೆ ಶ್ರೀಕಾಂತ ಸೆರೆಸಿಕ್ಕಿದ್ದು, ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ವಿಚಾರಣೆ ಬಳಿಕವಷ್ಟೇ ಹೆಚ್ಚಿನ ಮಾಹಿತಿ ದೊರಕಲಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *