ಜಿ.ಪಂ.,ತಾ.ಪಂ. ಮೀಸಲಾತಿ ಬದಲಾವಣೆ? ಹೊಸ ಕ್ಷೇತ್ರ ಪುನರ್ವಿಂಗಡನೆ!

ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ

Basavaraj Bommai

ಬೆಂಗಳೂರು: ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ವಿಧೇಯಕ ಮಂಡನೆ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ವಿಧೇಯಕ ಮೂಲಕ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಪುನರ್ವಿಂಗಡನೆ ಮಾಡಲಾಗುತ್ತದೆ. 

ಈ ತಿದ್ದುಪಡಿ ಮಸೂದೆ ಜಾರಿಗೆ ಬಂದ ತಕ್ಷಣ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಎಲ್ಲಾ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆ ರದ್ದಾಗಲಿದೆ. ಕ್ಷೇತ್ರ ಪುನರ್ವಿಂಗಡನೆ ಆಧಾರದಲ್ಲಿ ಜಾರಿಯಲ್ಲಿರುವ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಮೀಸಲಿರಿಸುವ ಎಲ್ಲಾ ಅಧಿಸೂಚನೆಗಳು ರದ್ದಾಗಲಿದೆ. 

ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಬೂಟು ನೆಕ್ಕುವ ಕೆಲಸ ಮಾಡಲಿಲ್ಲ: ಬೊಮ್ಮಾಯಿಗೆ ಸ್ವಾಮಿ ಟಾಂಗ್!

ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

Subramanian swamy

ನವದೆಹಲಿ: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ.  ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ  ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿ ಅಧ್ಯಕ್ಷನಾಗಿದ್ದ ಸಂದರ್ಭ(1989-2013)  ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ. 

ಬೆಲೆ ಏರಿಕೆ ಚರ್ಚೆ ವೇಳೆ ವಿಧಾನಸಭೆಯಲ್ಲಿ  ವಿಪಕ್ಷ ನಾಯಕ ಸಿದ್ದರಾಮಯ್ಯ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಗಳನ್ನು ಉಲ್ಲೇಖ ಮಾಡಿದ್ದರು. ನಿಮ್ಮ ಪಕ್ಷದವರೇ ಹೀಗೆ ಹೇಳುತ್ತಿದ್ದಾರಲ್ಲ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದರು, ಇದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸುವ ವೇಳೆ,  ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು.

(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *