ಬಿ.ಜೆ.ಪಿ.ಗೆ ಬೆಲ್ಲದ್,ಕಾಂಗ್ರೆಸ್ ಗೆ ಇಬ್ರಾಹಿಂ ಗುಡ್ಬೈ!?

ಕಾಂಗ್ರೆಸ್ ಸೇರ್ಪಡೆ ವದಂತಿ: ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ

ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ‌ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆದಿದೆ‌ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

ಕಾಂಗ್ರೆಸ್ ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಗುಡ್ ಬೈ?

ಜೆಡಿಎಸ್ ನ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಇಲ್ಲವೇ ಕಾಂಗ್ರೆಸ್ ಗೆ ವಲಸೆ ಹೋಗಲು ಮಾನಸಿಕವಾಗಿ ಸಿದ್ದವಾಗಿರುವಾಗ ಇದಕ್ಕೆ ವಿರೋಧಾಭಾಸವಾಗಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ…

CM Ibrahim

ಬೆಂಗಳೂರು: ಜೆಡಿಎಸ್ ನ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಇಲ್ಲವೇ ಕಾಂಗ್ರೆಸ್ ಗೆ ವಲಸೆ ಹೋಗಲು ಮಾನಸಿಕವಾಗಿ ಸಿದ್ದವಾಗಿರುವಾಗ ಇದಕ್ಕೆ  ವಿರುದ್ಧ ವಾಗಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ, ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ತೀರ್ಮಾನಿಸಿದ್ದಾರೆ.

ಮೈಸೂರು ಭಾಗದಲ್ಲಿ ಆಪರೇಷನ್ ಜೆಡಿಎಸ್ ಗೆ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಹಲವು ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.

ಕುಮಾರಸ್ವಾಮಿ ಭೇಟಿ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಸೇರ್ಪಡೆ ಕುರಿತು ಬಹಳ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

ನವೆಂಬರ್ ಬಳಿಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನಂತರ ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು  ಕೇಳಿ ಬರುತ್ತಿವೆ.

ಈ ಹಿಂದೆ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‌ ಸೇರಲಿದ್ದಾರೆ ಎಂಬ ಬಗ್ಗೆ ಮಾಹಿತಿ ಅರಿತಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಬ್ರಾಹಿಂ ಅವರನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸಿದ್ದರು. ಆದರೆ, ಇಬ್ರಾಹಿಂ ಅವರು ನಿನ್ನೆ ಬಿಡದಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆ ಕುರಿತು ಮಾತುಕತೆ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. (kpc)

ಧಾರವಾಡ: ನಾಯಕತ್ವ ಬದಲಾವಣೆ ಹಾಗೂ ಮುಖ್ಯಮಂತ್ರಿ ರೇಸ್​​ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ್​​ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹರಿದಾಡುತ್ತಿದೆ‌. ಈ ವದಂತಿ ಹಬ್ಬಿದ ಹಿನ್ನೆಲೆ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.https://3ed2797b98def2c453953177b7352a49.safeframe.googlesyndication.com/safeframe/1-0-38/html/container.html

mla arvind bellad

ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ

ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿದ್ದು, ಈ ಬಗ್ಗೆ ಶಾಸಕ ಬೆಲ್ಲದ​​ ಲಿಖಿತವಾಗಿ ಸ್ಪಷ್ಟನೆ ನೀಡಿದ್ದಾರೆ. ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ‌ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ ಎಂದು ಹೇಳಿದ್ದಾರೆ.

mla arvind bellad

ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ

ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಆರ್.ಎಸ್.ಎಸ್. ಸೇರಿದ ನಂತರ ಸಂಘ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ. ಬಿಜೆಪಿ ತೊರೆಯುವ ವಿಚಾರ ಕಾಯಾ, ವಾಚಾ ಮನಸಾ ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಬೆಲ್ಲದ ಎಚ್ಚರಿಕೆ ನೀಡಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *