ಕರಾವಳಿ-ಮಲೆನಾಡುಗಳಲ್ಲಿ ಮತ್ತೆ ಜಲಕ್ರೀಡೆ!

water sports

ಉತ್ತರಕನ್ನಡ: ಬಂದ್​ ಆಗಿದ್ದ ಜಲ ಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತದ ಗ್ರೀನ್ ಸಿಗ್ನಲ್

ಕೊರೊನಾ ಸೋಂಕಿನ ಹಿನ್ನೆಲೆ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಸಾರ್ವಜನಿಕ ಚಟುವಟಿಕೆಗಳ ಮೇಲಿನ ನಿರ್ಬಂಧ ತೆರವು ಮಾಡಲಾಗಿದ್ದು, ಜಲಸಾಹಸ ಕ್ರೀಡೆ ಆರಂಭಿಸಲು ಅನುಮತಿ ನೀಡಲಾಗಿದೆ.

ಕಾರವಾರ: ಜಿಲ್ಲೆಯ ಪ್ರವಾಸಿ ಸ್ಥಳಗಳು ಮತ್ತೆ ತೆರೆದುಕೊಳ್ಳುತ್ತಿದ್ದು, ಕಾರವಾರ ಕಡಲತೀರ ಸೇರಿದಂತೆ ಜಲಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ಕೋವಿಡ್​ ಅನ್‌ಲಾಕ್ ಬಳಿಕ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ತೆರೆದುಕೊಂಡಿದ್ದರೂ ಜಲಸಾಹಸ ಕ್ರೀಡೆಯಂತಹ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ಜಿಲ್ಲಾಡಳಿತ ಪ್ರವಾಸಿತಾಣಗಳಲ್ಲಿ ಜಲ ಕ್ರೀಡೆ ನಡೆಸಲು ಅನುಮತಿ ನೀಡಿದ್ದು, ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತೆ ಕಳೆ ಬಂದಂತಾಗಿದೆ.

ರಾಜ್ಯದಲ್ಲೇ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಜಿಲ್ಲೆಗಳಲ್ಲಿ ಉತ್ತರಕನ್ನಡ ಸಹ ಒಂದು. ಪ್ರವಾಸಿಗರ ಫೇವರೇಟ್​ ಆಗಿರುವ ಜಿಲ್ಲೆಯ ಕಡಲ ತೀರಕ್ಕೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ.

ಆದರೆ, ಕೋವಿಡ್​ ಅನ್‌ಲಾಕ್ ಬಳಿಕ ಸಹ ಯಾವುದೇ ರೀತಿಯ ಜಲಸಾಹಸ ಕ್ರೀಡೆಗಳಿಗೆ ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರವಾಸಿಗರು ಬಾರದೇ ಪ್ರವಾಸೋದ್ಯಮ ಮಂಕಾಗಿತ್ತು. ಆದರೆ ಇದೀಗ ಜಿಲ್ಲಾಡಳಿತ ಇಂದಿನಿಂದ ನದಿ ಹಾಗೂ ಸಮುದ್ರ ತೀರಗಳಲ್ಲಿ ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ವಾಟರ್ ಸ್ಪೋರ್ಟ್ಸ್ ನಡೆಸಲು ಅವಕಾಶ ನೀಡಿದೆ.ಜಲ ಸಾಹಸ ಕ್ರೀಡೆ ಆರಂಭಿಸಲು ಅನುಮತಿ ನೀಡಿದೆ.

ಜಿಲ್ಲೆಯಲ್ಲಿ ಕಾರವಾರ, ಗೋಕರ್ಣ, ಹೊನ್ನಾವರ ಹಾಗೂ ಮುರುಡೇಶ್ವರ ಸೇರಿದಂತೆ ಹತ್ತಾರು ಕಡಲ ತೀರಗಳಿವೆ. ಇಲ್ಲಿನ ಬೀಚ್‌ಗಳಲ್ಲಿ ಎಂಜಾಯ್ ಮಾಡೋದಕ್ಕೆ ಅಂತಾನೇ ರಾಜ್ಯ, ಹೊರರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲದೇ ಬೋಟ್ ರೈಡ್, ಜೆಟ್ ಸ್ಕೀ ಸೇರಿದಂತೆ ದಾಂಡೇಲಿ, ಜೋಯಿಡಾ ಭಾಗಗಳಿಗೆ ಕಾಳಿ ನದಿಯಲ್ಲಿ ವಿವಿಧ ಜಲಸಾಹಸ ಕ್ರೀಡೆಗಳನ್ನ ಆಯೋಜಿಸಲಾಗುತ್ತದೆ.

ಜೊತೆಗೆ ಕಾರವಾರ ರವೀಂದ್ರನಾಥ ಠಾಗೋರ್ ಕಡಲತೀರ, ಗೋಕರ್ಣದ ಓಂ ಬೀಚ್, ಕುಡ್ಲೇ ಬೀಚ್ ಹಾಗೂ ಮುರುಡೇಶ್ವರ ಕಡಲತೀರಗಳಲ್ಲಿ ಹಿಂದಿನಿಂದಲೂ ಜಲಸಾಹಸ ಕ್ರೀಡೆಗಳನ್ನ ನಡೆಸಲಾಗುತ್ತಿತ್ತು. ಇದೀಗ ಮತ್ತೆ ಜಲ ಕ್ರೀಡೆಗೆ ಅನುಮತಿ ನೀಡಿರುವುದಕ್ಕೆ ಆಯೋಜಕರು ಸಂತಸಗೊಂಡಿದ್ದು, ಈಗಾಗಲೇ ಕ್ರೀಡೆಗಳನ್ನು ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *