ಸದಾ ಕಾಡುವ ಅವ್ವ…

ನಮ್ಮನ್ನು ಮತ್ತೆ ಮತ್ತೆ ಕಾಡುವ ಲಂಕೇಶ್ ರ

” ಅವ್ವ”
ಕವಿತೆ —
———-🌷——–🌷———🌷——-‘

ನನ್ನವ್ವ ಫಲವತ್ತಾದ ಕಪ್ಪು ನೆಲ
ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;
ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು
ಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;
ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ.

ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳ ಬಂದಿಯ ಗೆದ್ದು,
ಹೆಂಟೆಗೊಂಡು ಮೊಗೆ ನೀರು ಹಿಗ್ಗಿ;
ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,
ಹೂವಲ್ಲಿ ಹೂವಾಗಿ, ಕಾಯಲ್ಲಿ ಕಾಯಾಗಿ
ಹಸುರು ಗದ್ದೆಯ ನೋಡಿಕೊಂಡು,
ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು.

ಸತ್ತಳು ಈಕೆ:
ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ?
ಎಷ್ಟುಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ?
ಎಷ್ಟು ಸಲ ಈ ಮುದುಕಿ ಅತ್ತಳು
ಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;
ಎಷ್ಟು ಸಲ ಹುಡುಕುತ್ತ ಊರೂರು ಅಲೆದಳು
ತಪ್ಪಿಸಿಕೊಂಡ ಮುದಿಯ ಎಮ್ಮೆಗೆ?

ಸತಿಸಾವಿತ್ರಿ, ಜಾನಕಿ, ಊರ್ಮಿಳೆಯಲ್ಲ;
ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ;
ಗಾಂಧೀಜಿ, ರಾಮಕೃಷ್ಣರ ಸತಿಯರಂತಲ್ಲ;
ದೇವರ ಪೂಜಿಸಲಿಲ್ಲ; ಹರಿಕತೆ ಕೇಳಲಿಲ್ಲ;
ಮುತ್ತೈದೆಯಾಗಿ ಕುಂಕುಮ ಕೂಡ ಇಡಲಿಲ್ಲ.

ಬನದ ಕರಡಿಯ ಹಾಗೆ
ಚಿಕ್ಕಮಕ್ಕಳ ಹೊತ್ತು
ಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳು
ನೊಂದ ನಾಯಿಯ ಹಾಗೆ ಬೈದು, ಗೊಣಗಿ, ಗುದ್ದಾಡಿದಳು;

ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ;
ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.
ಈಕೆ ಉರಿದೆದ್ದಾಳು
ಮಗ ಕೆಟ್ಟರೆ, ಗಂಡ ಬೇರೆ ಕಡೆ ಹೋದಾಗ ಮಾತ್ರ.

ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ;
ನನ್ನವ್ವ ಬದುಕಿದ್ದು
ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;
ಮೇಲೊಂದು ಸೂರು, ಅನ್ನ, ರೊಟ್ಟಿ, ಹಚಡಕ್ಕೆ;
ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ.

ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು;
ಹೆತ್ತದ್ದಕ್ಕೆ, ಸಾಕಿದ್ದಕ್ಕೆ; ಮಣ್ಣಲ್ಲಿ ಬದುಕಿ,
ಮನೆಯಿಂದ ಹೊಲಕ್ಕೆ ಹೋದಂತೆ
ತಣ್ಣಗೆ ಮಾತಾಡುತ್ತಲೇ ಹೊರಟು ಹೋದುದಕ್ಕೆ. (-ಪಿ. ಲಂಕೇಶ್)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *