ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ಹೊರರಾಜ್ಯದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳಿಯರು

ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ವೃದ್ಧನ ಹತ್ಯೆ: ಒಡಿಶಾ ಮೂಲದ ಆರೋಪಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಕ್ಷುಲ್ಲಕ ಕಾರಣಕ್ಕೆ ವೃದ್ಧನೊಂದಿಗೆ ಜಗಳವಾಡಿದ ಒಡಿಶಾ ಮೂಲದ ಕೆಲಸಗಾರ ರಾಡ್​ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದಾಗ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾರವಾರ: ಕ್ಷುಲ್ಲಕ ಕಾರಣಕ್ಕೆ ವೃದ್ಧನೊಂದಿಗೆ ಜಗಳವಾಡಿದ ಒಡಿಶಾ ಮೂಲದ ಕೆಲಸಗಾರ ರಾಡ್​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ಗೋಕರ್ಣದ ತದಡಿಯಲ್ಲಿ ನಡೆದಿದೆ. ತದಡಿಯ ವಿವೇಕಾನಂದ ಶಾನಭಾಗ್(70) ಮೃತ ವ್ಯಕ್ತಿ .

ಕ್ಷುಲ್ಲ ಕ ಕಾರಣಕ್ಕೆ ಜಗಳ ಮಾಡಿ ವೃದ್ಧನ ಹತ್ಯೆ

ಇಂದು ಮನೆಯ ಮೇಲ್ಮಹಡಿಯಲ್ಲಿ ವೃದ್ಧ ಹಾಗೂ ಒಡಿಶಾ ಮೂಲದ ಕೆಲಸಗಾರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಈ ವೇಳೆ ಒಡಿಶಾ ಮೂಲದ ವ್ಯಕ್ತಿ ರಾಡ್​​ನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ನಂತರ ಗಂಭೀರ ಗಾಯಗೊಂಡವರನ್ನು ತಕ್ಷಣ 108ರ ಮೂಲಕ ಕುಮಟಾ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲು ಸಾಗಿಸಲಾಗಿತ್ತಾದರೂ ಅಷ್ಟರಲ್ಲಿಯೇ ಮೃತಪಟ್ಟಿದ್ದಾರೆ.

ಆರೋಪಿಯು ಸಮುದ್ರದಲ್ಲಿ ಈಜಾಡಿಕೊಂಡು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)

ತ್ರಿದಿನ ಯಕ್ಷೋತ್ಸ ವ-೨೦೨೧

ಯಕ್ಷಗಾನ ಹಾಗೂ ಇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಇಟಗಿಯ ಕಲಾಭಾಸ್ಕರ ಸಂಸ್ಥೆಯು “ತ್ರಿದಿನ ಯಕ್ಷೋತ್ಸ ವ-೨೦೨೧” ನ್ನು ಹಮ್ಮಿಕೊಂಡಿದೆ. ಇಟಗಿಯ ಶ್ರೀ ರಾಮೇಶ್ವರ ದೇವಾಯಲದ ಪ್ರಾಂಗಣದಲ್ಲಿ ಇರುವ ಸೀತಾರಾಮ ಹೆಗಡೆ ಹರಗಿ ಸಭಾಂಗಣದಲ್ಲಿ ದಿ; ೨೬-೦೯-೨೦೨೧ರ ಭಾನುವಾರದಿಂದ ೨೮-೦೯-೨೦೨೧ರ ಮಂಗಳವಾರದ ವರೆಗೆ ಮೂರುದಿನಗಳಕಾಲ ನಡೆಯುವ ಈ ಯಕ್ಷೋ ತ್ಸವವು ಯಕ್ಷಗಾನ ಕವಿ ಕಲಾವಿದ ವಿದ್ವಾಂಸ ಪ್ರೋ ಎಮ್.ಏ.ಹೆಗಡೆ ದಂಟಕಲ್ ರಿಗೆ ಸಮರ್ಪಣೆ. ಈ ಉತ್ಸವವನ್ನು ಟಿ.ಎಂ.ಎಸ್. ಅಧ್ಯಕ್ಷ ಆರ್. ಎಮ್.ಹೆಗಡೆ ಬಾಳೆಸರ ಉದ್ಘಾಟಿಸಲಿದ್ದಾರೆ.

ರಾಮೇಶ್ವರ ದೇವಾಲಯದ ಆಡಳಿತ ಮೊಕ್ತೆಸರರಾದ ಚಂದ್ರಶೇಖರ ಹೆಗಡೆ ಕೊಡ್ತಗಣಿಯವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಹಿರಿಯ ನ್ಯಾಯವಾದಿಗಳಾದ ಜೆ.ಪಿ.ಎನ್.ಹೆಗಡೆ ಹರಗಿಯವರು, ಕಲಾಪೋಷಕ ಶ್ರೀಕಾಂತ ಪೈ ಇಟಗಿಯವರು ಹಾಗೂ ಇಟಗಿ ಗ್ರಾಮ ಪಂಚಾಯತ ಸದಸ್ಯರಾದ ಮಹೇಶ ನಾಯ್ಕ ಐಗೋಡು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಂತರ ಇಟಗಿ ಮಹಾಬಲೇಶ್ವರ ವಿರಚಿತ “ಜಯದ್ರಥ ಗರ್ವಭಂಗ” ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಭಾಗವತರಾಗಿ ಶ್ರೀಪಾದ ಹೆಗಡೆ ಬಾಳೆಗದ್ದೆ ಹಾಗೂ ಚಂಡೆ ವಾದಕರಾಗಿ ಸಂಪ ಲಕ್ಷ್ಮೀ ನಾರಾಯಣ ಮದ್ದಳೆವಾದಕರಾಗಿ ಶ್ರೀಪಾದ ಭಟ್ಟ ಮೂಡಗಾರು ಹಿಮ್ಮೇಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿವಿಧ ಪಾತ್ರಗಳನ್ನು ಅಶೋಕ ಭಟ್ಟ ಸಿದ್ಧಾಪುರ, ಇಟಗಿ ಮಹಾಬಲೇಶ್ವರ, ವೆಂಕಟೇಶ್ ಹೆಗಡೆ ಬೊಗರಿಮಕ್ಖಿ, ಮುರೂರು ನಾಗೇಂದ್ರ ಭಟ್ಟ, ಮಧುಸೂಧನ ನಾವಡ ಸೊರಬ, ಹಾರೆಕೊಪ್ಪ ಮಹಾಬಲೇಶ್ವರ ಗೌಡ ಮೊದಲಾದವರು ನಿರ್ವಹಿಸಲಿದ್ದಾರೆ.
ದಿ: ೨೭ರ ಸಂಜೆ ೬-೦೦ ಗಂಟೆಗೆ ಹೊಸತೋಟ ಮಂಜುನಾಥ ಭಾಗವತ ವಿರಚಿತ “ಸತ್ಯವತಿ ಸಂತಾನ” ಎಂಬ ಮಹಾಭಾರತ ಕಥೆಯ ಯಕ್ಷಗಾನ ತಾಳಮದ್ದಳೆಯು ನಡೆಯಲಿದೆ. ಸಾಗರದ ಬಿ.ಟಿ. ಅರುಣ , ಗೊರಮನೆ ಮಂಜುನಾಥ ರಾವ್, ಗುಂಜಗೋಡು ಗಣಪತಿ ಹೆಗಡೆ, ವಿನಾಯ ಹೆಗಡೆ ಕವಲಕೊಪ್ಪ, ಇಟಗಿ ಮಹಾಬಲೇಶ್ವರ ಮುಂತಾದವರು ಅರ್ಥಧಾರಿಗಳಾಗಿ ಭಾಗವಹಿಸಲಿದ್ದಾರೆ. ಹಿಮ್ಮೇಳದಲ್ಲಿ ಸತೀಶ ಹೆಗಡೆ ದಂಟಕಲ್ ಹಾಗೂ ಅನಿರುದ್ದ ಹೆಗಡೆ ವರ್ಗಾಸರ ಕಾಣಿಸಿಕೊಳ್ಳಲಿದ್ದಾರೆ.
ದಿ:೨೮-೦೯-೨೦೨೧ ಮಂಗಳವಾರ ಸಂಜೆ ೬-೦೦ ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇಟಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ ಹೆಗಡೆ ಕೊಡ್ತಗಣಿಯವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಟಿ.ಎಸ್.ಎಸ್. ನಿರ್ದೇಶಕ ಆರ್.ಟಿ.ಹೆಗಡೆ ಅಳಗೋಡು, ಇಟಗಿ ರಾ.ವಿ. ಪ್ರೌಢಶಾಲೆಯ ಮುಖ್ಯಾಧ್ಯಾಪಕ ಡಿ.ಜಿ.ಪೂಜಾರ, ಗ್ರಾಮ ಪಂಚಾಯತ ಅಧ್ಯಕ್ಷ ಸುರೇಂದ್ರ ಮಡಿವಾಳ ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣೇಶ ಭಟ್ಟ ಸಿದ್ದಾಪುರ ಭಾಗವಹಿಸಲಿದ್ದಾರೆ.

ನಂತರ ಪ್ರೋ| ಎಮ್.ಎ.ಹೆಗಡೆ ದಂಟಕಲ್ ವಿರಚಿತ “ಸೀತಾ ಪರಿತ್ಯಾಗ” ಎಂಬ ಸುಂದರ ಕಥಾಭಾಗದ ಯಕ್ಷಗಾನ ಪ್ರದರ್ಶನವಿದೆ. ಭಾಗವತರಾಗಿ ದಂತಳಿಗೆ ಅನಂತ ಹೆಗಡೆ ಚಂಡೆ ಮದ್ದಳೆಯಲ್ಲಿ ಕೆ.ಎನ್. ಭಾರ್ಗವ ಹಾಗೂ ನಾಗಭೂಷಣ ರಾವ್ ಹೆಗ್ಗೋಡು ಪಾಲ್ಗೊಳ್ಳಲಿದ್ದಾರೆ. ಪಾತ್ರಧಾರಿಗಳಾಗಿ ಗೋಪಾಲಾಚಾರ್ಯ ತೀರ್ಥಹಳ್ಳಿ, ವಿನಾಯಕ ಹೆಗಡೆ ಕಲ್ಗದ್ದೆ, ಇಟಗಿ ಮಹಾಬಲೇಶ್ವರ ಬಟ್ಟ, ಗಣಪತಿ ಗುಂಜಗೋಡು, ನಾಗಪತಿ ಹೆಗಡೆ ಕೊಪ್ಪ, ನಾಗೇಂದ್ರ ಮುರೂರು ಮುಂತಾದ ಹಿರಿ ಕಿರಿಯ ಕಲಾವಿದರುಗಳು ಭಾಗವಹಿಸಲಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *