ಸದಾ ಕಾಡುವ ಅವ್ವ…

ನಮ್ಮನ್ನು ಮತ್ತೆ ಮತ್ತೆ ಕಾಡುವ ಲಂಕೇಶ್ ರ

” ಅವ್ವ”
ಕವಿತೆ —
———-🌷——–🌷———🌷——-‘

ನನ್ನವ್ವ ಫಲವತ್ತಾದ ಕಪ್ಪು ನೆಲ
ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;
ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು
ಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;
ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ.

ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳ ಬಂದಿಯ ಗೆದ್ದು,
ಹೆಂಟೆಗೊಂಡು ಮೊಗೆ ನೀರು ಹಿಗ್ಗಿ;
ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,
ಹೂವಲ್ಲಿ ಹೂವಾಗಿ, ಕಾಯಲ್ಲಿ ಕಾಯಾಗಿ
ಹಸುರು ಗದ್ದೆಯ ನೋಡಿಕೊಂಡು,
ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು.

ಸತ್ತಳು ಈಕೆ:
ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ?
ಎಷ್ಟುಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ?
ಎಷ್ಟು ಸಲ ಈ ಮುದುಕಿ ಅತ್ತಳು
ಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;
ಎಷ್ಟು ಸಲ ಹುಡುಕುತ್ತ ಊರೂರು ಅಲೆದಳು
ತಪ್ಪಿಸಿಕೊಂಡ ಮುದಿಯ ಎಮ್ಮೆಗೆ?

ಸತಿಸಾವಿತ್ರಿ, ಜಾನಕಿ, ಊರ್ಮಿಳೆಯಲ್ಲ;
ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ;
ಗಾಂಧೀಜಿ, ರಾಮಕೃಷ್ಣರ ಸತಿಯರಂತಲ್ಲ;
ದೇವರ ಪೂಜಿಸಲಿಲ್ಲ; ಹರಿಕತೆ ಕೇಳಲಿಲ್ಲ;
ಮುತ್ತೈದೆಯಾಗಿ ಕುಂಕುಮ ಕೂಡ ಇಡಲಿಲ್ಲ.

ಬನದ ಕರಡಿಯ ಹಾಗೆ
ಚಿಕ್ಕಮಕ್ಕಳ ಹೊತ್ತು
ಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳು
ನೊಂದ ನಾಯಿಯ ಹಾಗೆ ಬೈದು, ಗೊಣಗಿ, ಗುದ್ದಾಡಿದಳು;

ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ;
ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.
ಈಕೆ ಉರಿದೆದ್ದಾಳು
ಮಗ ಕೆಟ್ಟರೆ, ಗಂಡ ಬೇರೆ ಕಡೆ ಹೋದಾಗ ಮಾತ್ರ.

ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ;
ನನ್ನವ್ವ ಬದುಕಿದ್ದು
ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;
ಮೇಲೊಂದು ಸೂರು, ಅನ್ನ, ರೊಟ್ಟಿ, ಹಚಡಕ್ಕೆ;
ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ.

ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು;
ಹೆತ್ತದ್ದಕ್ಕೆ, ಸಾಕಿದ್ದಕ್ಕೆ; ಮಣ್ಣಲ್ಲಿ ಬದುಕಿ,
ಮನೆಯಿಂದ ಹೊಲಕ್ಕೆ ಹೋದಂತೆ
ತಣ್ಣಗೆ ಮಾತಾಡುತ್ತಲೇ ಹೊರಟು ಹೋದುದಕ್ಕೆ. (-ಪಿ. ಲಂಕೇಶ್)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *