equator prize- ಸ್ನೇಹಕುಂಜದಿಂದ ರಾಮಪತ್ರೆ ಜಡ್ಡಿ ಗುರುತಿಸಿದ ವಿಶ್ವಸಂಸ್ಥೆ

Karnataka's Snehakunja Trust bags prestigious Equator Prize 2021 given by UN

ಅಪರೂಪದ ರಾಮಪತ್ರೆ ಜಡ್ಡಿಗೆ ವಿಶ್ವಸಂಸ್ಥೆಯಲ್ಲಿ ಸ್ಥಾನಮಾನ: ಪ್ರಶಸ್ತಿ ಪಡೆದು ರಾಜ್ಯಕ್ಕೆ ಹೆಮ್ಮೆ ತಂದ ‘ಸ್ನೇಹಕುಂಜ’

ಅಳಿವಿನಂಚಿನಲ್ಲಿರುವ ವಿಶೇಷ ಸಸ್ಯರಾಶಿಗಳ ನೆಲೆಯಾದ ರಾಮಪತ್ರೆ ಜಡ್ಡಿಯ ಸಂರಕ್ಷಣಾ ಕಾರ್ಯ, ಸ್ಥಳೀಯರ ಸಹಭಾಗಿತ್ವ, ಅರಣ್ಯ ಉತ್ಪನ್ನಗಳ ಪರಿಚಯಿಸುವಿಕೆ ಹಾಗೂ ಬಯೋ ಬ್ಲ್ಯೂ ಕಾರ್ಬನ್ ಝೋನ್ ನ ಉಳಿಸುವಿಕೆಯಲ್ಲಿ ಮಹತ್ವ ಪಾತ್ರ ವಹಿಸಿದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡಿನ ಸ್ನೇಹಕುಂಜ ಸಂಸ್ಥೆಯು ವಿಶ್ವಸಂಸ್ಥೆ ನೀಡುವ ‘ಈಕ್ವೆಟರ್ 2021’ ಪ್ರಶಸ್ತಿಗೆ ಭಾಜನವಾಗಿದೆ.

ಶಿರಸಿ (ಉತ್ತರ ಕನ್ನಡ): ದೇಶದ ಹೆಮ್ಮೆ ಎನಿಸಿಕೊಂಡಿರೋ ರಾಜ್ಯದ ಪಶ್ಚಿಮ ಘಟ್ಟಗಳು ಹಲವಾರು ವಿಶೇಷತೆಗಳಿಗೆ ಸಾಕ್ಷಿಯಾಗಿವೆ. ಅದ್ರಲ್ಲೂ ವಿಶ್ವದಲ್ಲೇ ಎಲ್ಲೂ ಕಾಣಲಾರದ ಅಪರೂಪದ ಕತ್ತಲೆಕಾನು ಹಾಗೂ ರಾಮಪತ್ರೆ ಜಡ್ಡಿ ಅನ್ನೋ ನಿಸರ್ಗದ ವಿಶೇಷ ಸ್ಥಳಗಳ ತವರೂರು ಅನ್ನೋ ಹೆಮ್ಮೆ ಕೂಡ ಉತ್ತರ ಕನ್ನಡ ಜಿಲ್ಲೆಯದು. ಇದೀಗ ವಿಶ್ವದಲ್ಲೇ ಅಪರೂಪವಾದ ರಾಮಪತ್ರೆ ಜಡ್ಡಿಗೆ ವಿಶ್ವಸಂಸ್ಥೆಯಲ್ಲಿ ಸ್ಥಾನಮಾನ ದೊರೆತಿದೆ. ರಾಮಪತ್ರೆ ಜಡ್ಡಿಗಳ ಸಂರಕ್ಷಣೆಗೆ ಇಲ್ಲಿನ ಜನರು ಮಾಡಿದ ಕಾರ್ಯಗಳನ್ನ ನೋಡಿ ವಿಶ್ವಸಂಸ್ಥೆಯೇ ಬೆರಗುಗೊಂಡಿದ್ದು, ಜಿಲ್ಲೆಯ ಒಂದು ಸಂಸ್ಥೆಗೆ ವಿಶ್ವಸಂಸ್ಥೆಯ ಪ್ರಶಸ್ತಿ ಒಲಿದಿದೆ.

‘ಈಕ್ವೆಟರ್ 2021’ ಪ್ರಶಸ್ತಿ

ರಾಮಪತ್ರೆ ಜಡ್ಡಿ ಕಾಡು, ಇದು ಒಂದು ಅಳಿವಿನಂಚಿನಲ್ಲಿರುವ ವಿಶೇಷ ಸಸ್ಯರಾಶಿಗಳ ನೆಲೆಯಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿನ ಪಶ್ಚಿಮ ಘಟ್ಟಗಳು ಹಲವಾರು ಪ್ರಥಮಗಳಿಗೆ ಹಾಗೂ ನಿಸರ್ಗದ ಕೌತುಕಗಳಿಗೆ ಕಾರಣವಾಗಿವೆ. ಇವುಗಳಲ್ಲಿ ರಾಮಪತ್ರೆ ಜಡ್ಡಿಯೂ ಒಂದು. ಜಿಲ್ಲೆಯಲ್ಲಿರುವ ರಾಮಪತ್ರೆ ಜಡ್ಡಿಯ ಸಂರಕ್ಷಣಾ ಕಾರ್ಯ, ಸ್ಥಳೀಯರ ಸಹಭಾಗಿತ್ವ, ಅರಣ್ಯ ಉತ್ಪನ್ನಗಳ ಪರಿಚಯಿಸುವಿಕೆ ಹಾಗೂ ಬಯೋ ಬ್ಲ್ಯೂ ಕಾರ್ಬನ್ ಝೋನ್ ನ ಉಳಿಸುವಿಕೆಯಲ್ಲಿ ಮಹತ್ವ ಪಾತ್ರ ವಹಿಸಿದ ಜಿಲ್ಲೆಯ ಹೊನ್ನಾವರದ ಕಾಸರಕೋಡಿನ ಸ್ನೇಹಕುಂಜ ಸಂಸ್ಥೆಯು ವಿಶ್ವಸಂಸ್ಥೆ ನೀಡುವ ‘ಈಕ್ವೆಟರ್ 2021’ ಪ್ರಶಸ್ತಿಗೆ ಭಾಜನವಾಗಿದೆ.

ಅಪರೂಪದ ರಾಮಪತ್ರೆ ಜಡ್ಡಿಗೆ ವಿಶ್ವಸಂಸ್ಥೆಯಲ್ಲಿ ಸ್ಥಾನಮಾನ

ನರಸಿಂಹ ಹೆಗಡೆ ನೇತೃತ್ವದ ಸ್ನೇಹಕುಂಜ ಸಂಸ್ಥೆ

ಸಿದ್ದಾಪುರ ಹಾಗೂ ಶಿರಸಿ ತಾಲೂಕಿನ ಸುಮಾರು 60ಕ್ಕೂ ಹೆಚ್ಚು ಕಡೆಗಳಲ್ಲಿ ಸೇರಿದಂತೆ ಜಿಲ್ಲೆಯ ನೂರಕ್ಕೂ ಹೆಚ್ಚು ಕಡೆಗಳಲ್ಲಿ ಈ ರಾಮಪತ್ರೆ ಜಡ್ಡಿಗಳಿವೆ. ಅಪರೂಪದ ಅತ್ಯಂತ ಪ್ರಾಚೀನಕಾಲದ ಜೌಗು ಪ್ರದೇಶ ಇದಾಗಿದ್ದು, ಅನೇಕ ರೀತಿಯ ಅವನತಿಯ ಅಂಚಿನಲ್ಲಿರುವ ಕೀಟ ಪ್ರಬೇಧಗಳು ಇಲ್ಲಿವೆ. ಇಲ್ಲಿನ ರಾಮಪತ್ರೆ ಮರಗಳು ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ವಿಶಾಲವಾಗಿ ತಮ್ಮ ಬೇರುಗಳನ್ನು ಹರಡಿ ಮಣ್ಣು ಸವಕಳಿಯನ್ನು ತಡೆಯಲು ಯಶಸ್ವಿಯಾಗಿವೆ. ಅಲ್ಲದೇ ಇವು ಉಸಿರಾಟ ನಡೆಸುವುದಕ್ಕಾಗಿಯೇ ಬೇರುಗಳು ಮಣ್ಣಿನಿಂದ ಮೇಲೆ ಬರುತ್ತವೆ. ಇನ್ನೊಂದು ರೀತಿಯ ಒಂದಂಕಿ ಮರ ಕೂಡಾ ಬೇರೆಲ್ಲೂ ಸಿಗದ ಮತ್ತು ಬೆಳೆಯದ ಗಿಡವಾಗಿದ್ದು, ಇಲ್ಲಿನ ಕೀಟ, ಪ್ರಾಣಿ ಪ್ರಬೇಧಕ್ಕೆ ಪೂರಕವಾಗಿದೆ. ನರಸಿಂಹ ಹೆಗಡೆ ನೇತೃತ್ವದ ತಂಡ ಹಲವು ವರ್ಷಗಳ ಕಾಲ ಸ್ನೇಹಕುಂಜ ಸಂಸ್ಥೆಯ ಮುಖೇನ ರಾಮಪತ್ರೆ ಜಡ್ಡಿ ಪಾರಿಸಾರಿಕ ಪುನಶ್ಚೇತನ ಕೆಲಸವನ್ನು ಜನ ಸಹಭಾಗಿತ್ವದಲ್ಲಿ ಕೈಗೊಂಡು ಯಶಸ್ವಿಯಾಗಿತ್ತು.

ಸಂಸ್ಥೆಯ ಕಾರ್ಯ ಅಗಾಧ

ರಾಮಪತ್ರೆ ಜಡ್ಡಿ ಕಾಡುಗಳನ್ನು ಗುರುತಿಸಿ ನಕಾಶೆ ತಯಾರಿಸಿರುವುದು, ಅವುಗಳು ಎದುರಿಸುತ್ತಿರುವ ಸಮಸ್ಯೆ ಮತ್ತು ಪರಿಹಾರೋಪಾಯಗಳು, ಸ್ಥಳೀಯರೊಡನೆ ಸೇರಿ ಅಲ್ಲಿಯದೇ ಸಸ್ಯಗಳ ನರ್ಸರಿ ತಯಾರಿಕೆ, ಅವುಗಳನ್ನು ಸೂಕ್ತ ಮತ್ತು ಅವನತಿ ಹೊಂದುತ್ತಿರುವ ಜಡ್ಡಿ ಕಾಡುಗಳಲ್ಲಿ ವೈಜ್ಞಾನಿಕವಾಗಿ ನೆಟ್ಟು ಬೆಳೆಸುವ ಕೆಲಸವನ್ನು ಈ ಸಂಸ್ಥೆ ಮಾಡಿತ್ತು. ಅಲ್ಲದೇ ನಿರಂತರವಾಗಿ ಅವುಗಳ ಸಂರಕ್ಷಣಾ ಮಹತ್ವವನ್ನು ಕಾರ್ಯಾಗಾರ, ತರಬೇತಿ ಏರ್ಪಡಿಸುವ ಮುಖಾಂತರ ತಿಳಿಸೋ ಪ್ರಯತ್ನ ಮಾಡಿತ್ತು. ಇದರ ಜೊತೆಯಲ್ಲಿ ಅರಣ್ಯಾವಲಂಬಿ ಜೀವನಾಭಿವೃದ್ದಿ ಕ್ರಮಗಳನ್ನು ಪ್ರೋತ್ಸಾಹಿಸುವುದು, ಸಾಂಘಿಕ ಜೇನು ಕೃಷಿ, ಉಪವನ ಉತ್ಪನ್ನಗಳ ಮೌಲ್ಯವರ್ಧನೆ, ಶುದ್ಧ ಇಂಧನ ಬಳಸಿ ಕಿರು ಉದ್ದಿಮೆಗಳನ್ನು ಪ್ರೋತ್ಸಾಹಿಸಿರುವ ಕೆಲಸಗಳನ್ನ ಕೈಗೊಂಡಿತ್ತು.

ಅಪರೂಪದ ಜೌಗು ಪ್ರದೇಶದ ಕಾಡಿನ ಸಂರಕ್ಷಣೆ, ಜಾಗತಿಕ ಹವಾಮಾನ ವೈಪರೀತ್ಯ ತಡೆಗೆ ಪ್ರಯತ್ನ, ಆರ್ಥಿಕ ಹಾಗೂ ಅಭಿವೃದ್ಧಿ ಮಾದರಿಯಲ್ಲಿ ಧನಾತ್ಮಕ ಬದಲಾವಣೆಯನ್ನು ತಳಮಟ್ಟದಿಂದ ಹಿಡಿದು ನೀತಿ ನಿರೂಪಕರವರೆಗೆ ಕೊಂಡೊಯ್ದದ್ದು ಹಾಗೂ ಭೂಗೃಹ ಎದುರಿಸುತ್ತಿರುವ ಸವಾಲು ಎದುರಿಸಲು ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಪೂರಕ ಅಂಶಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. 130 ದೇಶಗಳ 600ಕ್ಕೂ ಹೆಚ್ಚು ನಾಮ ನಿರ್ದೇಶಿತಗೊಂಡವುಗಳಲ್ಲಿ ಅಂತಿಮವಾಗಿ ಸ್ನೇಹಕುಂಜ ಸಂಸ್ಥೆ ಆಯ್ಕೆಯಾಗಿದೆ. ಒಟ್ಟಿನಲ್ಲಿ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿಗೆ ರಾಜ್ಯದ ಸಂಸ್ಥೆಯೊಂದು ಆಯ್ಕೆಯಾಗಿದ್ದು ಇದೇ ಮೊದಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *