Crime today -ಗೋಕರ್ಣದಲ್ಲಿ ಪ್ರವಾಸಿ ರಕ್ಷಣೆ, ಸಿದ್ಧಾಪುರದಲ್ಲಿ ಗಾಂಜಾದೊಂದಿಗೆ ಭಟ್ ಬಂಧನ

ಗೋಕರ್ಣದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ

ಕಾರವಾರ : ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.ಹುಬ್ಬಳ್ಳಿ ಮೂಲದ ರೋಹಿತ್ ಪಾಟೀಲ್ (21) ರಕ್ಷಣೆಗೊಳಗಾದವರಾಗಿದ್ದಾರೆ.

ಐದು ಜನರು ಹುಬ್ಬಳ್ಳಿಯ ರೇಣುಕಾ ನಗರದಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು.ಈ ವೇಳೆ ಸಮುದ್ರಕ್ಕೆ ಇಳಿದಿದ್ದ ರೋಹಿತ್ ಅಲೆಯ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿದ್ದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಉಪ್ಪಾರ್,ಪ್ರವಾಸಿ ಮಿತ್ರ ಶೇಖರ್ ಹರಿಕಾಂತ್,ಲೈಫ್ ಗಾರ್ಡ್ ರವಿ ಪೂಜಾರಿ ಅವರು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.

ಸಿದ್ಧಾಪುರ ಮಾಯ್ನೇರಮನೆಯಲ್ಲಿ ಗಾಂಜಾ ವಶ, ಆರೋಪಿ ಆರೆಸ್ಟ್-

ಸಿದ್ಧಾಪುರ ಅಳವಳ್ಳಿ ವ್ಯಾಪ್ತಿಯಲ್ಲಿ ಗಾಂಜಾ ಬೆಳೆ-ಮಾರಾಟದ ಪ್ರಕರಣಗಳು ಸುದ್ದಿಯಾಗುತಿದ್ದು ನಿನ್ನೆಯ ಪ್ರಕರಣದ ವಿವರ ಹೀಗಿದೆ.

ದಿನಾಂಕ:೨೭೦೯_ ೨೦೨೧ರಂದು ರಾತ್ರಿ ೯೧೫ ಗಂಟೆಗೆ ಸಿದ್ದಾಪುರ ತಾಲೂಕಿನ ವಾಜಗೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳವಳ್ಳಿ ಅಂಚೆ, ಕುಡಗುಂದ ಮಾಯ್ನೇರಮನೆ ಗ್ರಾಮದ ನಿವಾಸಿಯಾದ ಚಂದ್ರಶೇಖರ್ ಸುಬ್ರಾಯ ಭಟ್ ಈತನ ಮನೆಯಲ್ಲಿ ದಾಳಿ ನಡೆಸಲಾಗಿ, ಆರೋಪಿಯು ತನ್ನ ಜೇಬಿನಲ್ಲಿ ಹಾಗೂ ಮನೆಯ ಅಡುಗೆ ಕೋಣೆಯ ಕಟ್ಟೆಯ ಕೆಳಗಡೆ ಒಟ್ಟು ೧೬ ಪ್ಯಾಕೆಟ್ ಗಳಲ್ಲಿ ಬೀಜ ಮತ್ತು ಹೂವುಗಳನ್ನು ಒಳಗೊಂಡ ೧೩೦ ಗ್ರಾಮ್ ಒಣ ಗಾಂಜಾವನ್ನು ಮಾರಾಟಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿ ಅವುಗಳನ್ನು ಜಪ್ತುಪಡಿಸಿ, ಆರೋಪಿಯನ್ನು ದಸ್ತಗೀರ್ ಮಾಡಿ, ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿಕೊಳ್ಳಲಾಗಿದೆ.. ಶೈಲಜಾ ಕೋಟೆ, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಮಂಗಳೂರು ವಿಭಾಗದ ನಿರ್ದೇಶನದಂತೆ, ವನಜಾಕ್ಷಿ ಎಮ್. ಅಬಕಾರಿ ಉಪ ಆಯುಕ್ತರು ಉ.ಕ. ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ, ಆರ್.ವಿ.ತಳೇಕರ್ ಅಬಕಾರಿ ಉಪ_ ಅಧೀಕ್ಷಕರು, ಉಪ ವಿಭಾಗ ಯಲ್ಲಾಪುರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಮಹೇಂದ್ರ ಎಸ್. ನಾಯ್ಕ ಅಬಕಾರಿ ನಿರೀಕ್ಷಕರು ಉಪ ವಿಭಾಗ ಶಿರಸಿ ಇವರು ಮೊಕದ್ದಮೆ ದಾಖಲಿಸಿಕೊಂಡಿದ್ದು, ದಾಳಿಯಲ್ಲಿ ಸಿಬ್ಬಂದಿಗಳಾದ ಎನ್.ಕೆ.ವೈದ್ಯ,ಲೋಕೇಶ್ವರ ಬೋರ್ಕರ್, ಗಜಾನನ ನಾಯ್ಕ, ಅಬ್ದುಲ್ ಮಕಾನದಾರ ಈರಣ್ಣ ಗಾಳಿ ಮತ್ತು ಧ್ರುವ ಪಾಲ್ಗೊಂಡಿದ್ದರು…

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *