Crime today -ಗೋಕರ್ಣದಲ್ಲಿ ಪ್ರವಾಸಿ ರಕ್ಷಣೆ, ಸಿದ್ಧಾಪುರದಲ್ಲಿ ಗಾಂಜಾದೊಂದಿಗೆ ಭಟ್ ಬಂಧನ

ಗೋಕರ್ಣದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ

ಕಾರವಾರ : ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.ಹುಬ್ಬಳ್ಳಿ ಮೂಲದ ರೋಹಿತ್ ಪಾಟೀಲ್ (21) ರಕ್ಷಣೆಗೊಳಗಾದವರಾಗಿದ್ದಾರೆ.

ಐದು ಜನರು ಹುಬ್ಬಳ್ಳಿಯ ರೇಣುಕಾ ನಗರದಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು.ಈ ವೇಳೆ ಸಮುದ್ರಕ್ಕೆ ಇಳಿದಿದ್ದ ರೋಹಿತ್ ಅಲೆಯ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿದ್ದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಉಪ್ಪಾರ್,ಪ್ರವಾಸಿ ಮಿತ್ರ ಶೇಖರ್ ಹರಿಕಾಂತ್,ಲೈಫ್ ಗಾರ್ಡ್ ರವಿ ಪೂಜಾರಿ ಅವರು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.

ಸಿದ್ಧಾಪುರ ಮಾಯ್ನೇರಮನೆಯಲ್ಲಿ ಗಾಂಜಾ ವಶ, ಆರೋಪಿ ಆರೆಸ್ಟ್-

ಸಿದ್ಧಾಪುರ ಅಳವಳ್ಳಿ ವ್ಯಾಪ್ತಿಯಲ್ಲಿ ಗಾಂಜಾ ಬೆಳೆ-ಮಾರಾಟದ ಪ್ರಕರಣಗಳು ಸುದ್ದಿಯಾಗುತಿದ್ದು ನಿನ್ನೆಯ ಪ್ರಕರಣದ ವಿವರ ಹೀಗಿದೆ.

ದಿನಾಂಕ:೨೭೦೯_ ೨೦೨೧ರಂದು ರಾತ್ರಿ ೯೧೫ ಗಂಟೆಗೆ ಸಿದ್ದಾಪುರ ತಾಲೂಕಿನ ವಾಜಗೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳವಳ್ಳಿ ಅಂಚೆ, ಕುಡಗುಂದ ಮಾಯ್ನೇರಮನೆ ಗ್ರಾಮದ ನಿವಾಸಿಯಾದ ಚಂದ್ರಶೇಖರ್ ಸುಬ್ರಾಯ ಭಟ್ ಈತನ ಮನೆಯಲ್ಲಿ ದಾಳಿ ನಡೆಸಲಾಗಿ, ಆರೋಪಿಯು ತನ್ನ ಜೇಬಿನಲ್ಲಿ ಹಾಗೂ ಮನೆಯ ಅಡುಗೆ ಕೋಣೆಯ ಕಟ್ಟೆಯ ಕೆಳಗಡೆ ಒಟ್ಟು ೧೬ ಪ್ಯಾಕೆಟ್ ಗಳಲ್ಲಿ ಬೀಜ ಮತ್ತು ಹೂವುಗಳನ್ನು ಒಳಗೊಂಡ ೧೩೦ ಗ್ರಾಮ್ ಒಣ ಗಾಂಜಾವನ್ನು ಮಾರಾಟಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿ ಅವುಗಳನ್ನು ಜಪ್ತುಪಡಿಸಿ, ಆರೋಪಿಯನ್ನು ದಸ್ತಗೀರ್ ಮಾಡಿ, ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿಕೊಳ್ಳಲಾಗಿದೆ.. ಶೈಲಜಾ ಕೋಟೆ, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಮಂಗಳೂರು ವಿಭಾಗದ ನಿರ್ದೇಶನದಂತೆ, ವನಜಾಕ್ಷಿ ಎಮ್. ಅಬಕಾರಿ ಉಪ ಆಯುಕ್ತರು ಉ.ಕ. ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ, ಆರ್.ವಿ.ತಳೇಕರ್ ಅಬಕಾರಿ ಉಪ_ ಅಧೀಕ್ಷಕರು, ಉಪ ವಿಭಾಗ ಯಲ್ಲಾಪುರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಮಹೇಂದ್ರ ಎಸ್. ನಾಯ್ಕ ಅಬಕಾರಿ ನಿರೀಕ್ಷಕರು ಉಪ ವಿಭಾಗ ಶಿರಸಿ ಇವರು ಮೊಕದ್ದಮೆ ದಾಖಲಿಸಿಕೊಂಡಿದ್ದು, ದಾಳಿಯಲ್ಲಿ ಸಿಬ್ಬಂದಿಗಳಾದ ಎನ್.ಕೆ.ವೈದ್ಯ,ಲೋಕೇಶ್ವರ ಬೋರ್ಕರ್, ಗಜಾನನ ನಾಯ್ಕ, ಅಬ್ದುಲ್ ಮಕಾನದಾರ ಈರಣ್ಣ ಗಾಳಿ ಮತ್ತು ಧ್ರುವ ಪಾಲ್ಗೊಂಡಿದ್ದರು…

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *