Jds news -ಮೂರು ಕ್ಷೇತ್ರಗಳಿಗೆ ಮಾತ್ರ ಬದಲಿ ಅಭ್ಯರ್ಥಿಗಳ ಹುಡುಕಾಟ

ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ : ಮಾಜಿ ಸಚಿವ ಆನಂದ ಅಸ್ನೋಟಿಕರ್

ಕರ್ನಾಟಕ ವಿಧಾನಸಭೆ ಚುನಾವಣೆ: ‘123 ಮಿಷನ್’ ಘೋಷವಾಕ್ಯದೊಂದಿಗೆ ಜೆಡಿಎಸ್ ಸ್ಪರ್ಧೆ, ಮೂರು ಕ್ಷೇತ್ರಗಳಿಗೆ ಬದಲಿ ಅಭ್ಯರ್ಥಿಗಳ ಹುಡುಕಾಟ 

2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಜೆಡಿಎಸ್ ಪಣತೊಟ್ಟಿದೆ.  ಜೆಡಿಎಸ್ ಎಲ್ಲಾ 224 ಕ್ಷೇತ್ರಗಳ ಮೇಲೆ ಗಮನಹರಿಸುವುದಿಲ್ಲ. ಗೆಲುವಿಗೆ ಸಾಧ್ಯತೆಯಿರುವ ಕ್ಷೇತ್ರಗಳ ಮೇಲೆ ಗಮನಹರಿಸಲಿದೆ. 20-25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿದೆ.

H D Deve Gowda

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಜೆಡಿಎಸ್ ಪಣತೊಟ್ಟಿದೆ. 

ಈ ವರ್ಷದ ಆರಂಭದಲ್ಲಿ ನಡೆದಿದ್ದ ಪಶ್ಚಿಮ ಬಂಗಾಳ ರಾಜ್ಯದ ಚುನಾವಣೆಯಲ್ಲಿ 294 ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಎ(ಸುಲಭವಾಗಿ ಗೆಲುವು ಸಾಧಿಸಬಹುದಾದ ಕ್ಷೇತ್ರ), ಬಿ(ಸ್ಪರ್ಧಿಸುವ ಕ್ಷೇತ್ರ) ಮತ್ತು ಸಿ(ಕಠಿಣ ಸ್ಪರ್ಧೆಯ ಕ್ಷೇತ್ರ) ಎಂದು ವಿಂಗಡಿಸಿತ್ತು. ರಾಜ್ಯದಲ್ಲಿ ಜೆಡಿಎಸ್ ಇದೀಗ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಮತ್ತೊಂದು ಎ+ ವಿಭಾಗವನ್ನು ಸೇರಿಸಿದೆ. ಅದು ಜೆಡಿಎಸ್ ಅತ್ಯಂತ ಪ್ರಾಬಲ್ಯ ಹೊಂದಿರುವ ಮತ್ತು ಅತ್ಯುತ್ತಮ ಅಭ್ಯರ್ಥಿಗಳನ್ನು ಹೊಂದಿರುವ ಕ್ಷೇತ್ರಗಳಾಗಿವೆ.

https://imasdk.googleapis.com/js/core/bridge3.482.0_en.html#goog_705639209

ಜೆಡಿಎಸ್, ರಾಮನಗರದ ಮಾಜಿ ಸಿಎಂ ಕುಮಾರಸ್ವಾಮಿಯವರ ಫಾರ್ಮ್ ಹೌಸ್ ಕೇತಗಾನಹಳ್ಳಿಯಲ್ಲಿ ನಿನ್ನೆಯಿಂದ ಹಮ್ಮಿಕೊಂಡಿರುವ 4 ದಿನಗಳ ಜನತಾ ಪರ್ವ 1.0 ಕಾರ್ಯಾಗಾರದಲ್ಲಿ ಈ ಎಲ್ಲಾ ವಿಷಯಗಳ ಕುರಿತು ಚರ್ಚಿಸಲಾಗಿದೆ. ಪಕ್ಷದ ‘ಮಿಷನ್ 123’ ಅಭಿಯಾನದ ಭಾಗವಾಗಿದೆ ಈ ಕಾರ್ಯಾಗಾರ.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಮತ್ತು ಕೋಲಾರ ಶಾಸಕ ಕೆ ಶ್ರೀನಿವಾಸ್ ಗೌಡ ಅವರು ಪಕ್ಷದಲ್ಲಿ ಬಂಡಾಯವೆದ್ದು ಪಕ್ಷ ತೊರೆದು ಹೋಗುವ ಸಂದರ್ಭದಲ್ಲಿ ಜೆಡಿಎಸ್ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ ಈ ಕಾರ್ಯಾಗಾರ ನಡೆಯುತ್ತಿದೆ. ನಿರೀಕ್ಷೆಯಂತೆ ಈ ಮೂವರು ನಿನ್ನೆಯ ಕಾರ್ಯಾಗಾರಕ್ಕೆ ಹಾಜರಾಗಿಲ್ಲ.

ಮಿಷನ್ 272 ಘೋಷವಾಕ್ಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ 2014ರ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದರು. ಅದೇ ಪರಿಕಲ್ಪನೆಯಲ್ಲಿ ನಾವು ಮಿಷನ್ 123 ಘೋಷವಾಕ್ಯದೊಂದಿಗೆ 2023ರ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಜೆಡಿಎಸ್ ಎಲ್ಲಾ 224 ಕ್ಷೇತ್ರಗಳ ಮೇಲೆ ಗಮನಹರಿಸುವುದಿಲ್ಲ. ಗೆಲುವಿಗೆ ಸಾಧ್ಯತೆಯಿರುವ ಕ್ಷೇತ್ರಗಳ ಮೇಲೆ ಗಮನಹರಿಸಲಿದೆ. 20-25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿದ್ದೇವೆ ಎಂದರು.

ಗುಬ್ಬಿ, ಕೋಲಾರ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳಿಗೆ ಜೆಡಿಎಸ್ ಬದಲಿ ಅಭ್ಯರ್ಥಿಗಳ ಹುಡುಕಾಟವನ್ನು ಈಗಾಗಲೇ ನಡೆಸುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಹೆಚ್ ಡಿ ಕುಮಾರಸ್ವಾಮಿಯವರ ಮನಸ್ಸಿನಲ್ಲಿ ಈಗಾಗಲೇ ಕೆಲವು ಹೆಸರುಗಳಿವೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಮ್ಮ ಕೆಲವು ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದೆ. 2018ರಲ್ಲಿ ಎರಡನೇ ಸ್ಥಾನ ಗಳಿಸಿದ ನಮ್ಮ ಪಕ್ಷದ ಅಭ್ಯರ್ಥಿಗಳ ಜೊತೆ ಕೂಡ ಸಂಪರ್ಕದಲ್ಲಿದೆ. ಆದರೆ ನನಗೆ ಏನೂ ಆತಂಕವಿಲ್ಲ, ಕಾಂಗ್ರೆಸ್ ಗೆ ಹೋಗಲು ಒಂದು ಕಾಲು ಆಚೆ ಇಟ್ಟಿರುವಂತಹ ನಾಯಕರನ್ನು ನಾನು ಕಾರ್ಯಾಗಾರಕ್ಕೆ ಕರೆದಿಲ್ಲ ಎಂದರು. 

ಜೆಡಿಎಸ್ ನ್ನು ಪದೇ ಪದೇ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ಯಾರಿಂದಲೂ ನಮ್ಮ ಪಕ್ಷವನ್ನು ನಾಶಗೊಳಿಸಲು ಸಾಧ್ಯವಿಲ್ಲ. ಬಿಜೆಪಿ ಬಗ್ಗೆ ನಾವು ಮೃದು ಧೋರಣೆ ಹೊಂದಿದ್ದೇವೆ, ಅವರ ಜೊತೆ ಕೈಜೋಡಿಸುತ್ತೇವೆ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಅಂತಹ ಟೀಕಾಕಾರರಿಗೆ ನಾವು 2023ರ ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ ಎಂದು ಮಾಜಿ ಪ್ರಧಾನ ಮಂತ್ರಿ ದೇವೇಗೌಡರು ನಿನ್ನೆ ಕಾರ್ಯಾಗಾರದ ನಂತರ ಸುದ್ದಿಗೋಷ್ಠಿಯಲ್ಲಿ ಗುಡುಗಿದರು.

ಮಾಯಕೊಂಡದ 2018ರ ಸ್ವತಂತ್ರ ಪರಾಭವಿ ಅಭ್ಯರ್ಥಿ ಆನಂದಯ್ಯ ಸೇರಿದಂತೆ ಹಲವು ಅಭ್ಯರ್ಥಿಗಳನ್ನು ಜೆಡಿಎಸ್ ನತ್ತ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದರು.

ಜೆಡಿಎಸ್ ತೊರೆಯುವುದಿಲ್ಲ: ಇನ್ನು ನಿನ್ನೆ ಹಾಸನದಲ್ಲಿ ಮಾತನಾಡಿರುವ ಜೆಡಿಎಸ್ ಶಾಸಕ ಕೆ ಎಂ ಶಿವಲಿಂಗೇ ಗೌಡ, ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವು ಹಿರಿಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಇರುವುದು ಹೌದು, ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಿಸಿಕೊಳ್ಳಲು ಅದನ್ನು ಬಳಸಿಕೊಳ್ಳುತ್ತೇನೆ ಎನ್ನುತ್ತಾರೆ.

ಆದರೆ ಸ್ಥಳೀಯ ಬಿಜೆಪಿ ಅಥವಾ ಕಾಂಗ್ರೆಸ್ ನಾಯಕರು ಮುಂದಿನ ವಿಧಾನಸಭೆ ಚುನಾವಣೆಯೊಳಗೆ ಶಿವಲಿಂಗೇಗೌಡ ಬಿಜೆಪಿ ಅಥವಾ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುತ್ತಾರೆ. (kpc)

ಕಾರವಾರ ಸುದ್ದಿ-

ಕಾರವಾರ : ಕ್ಷೇತ್ರಕ್ಕೆ ಬೇಕಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಸ್ವಾಗತ ಮಾಡಬೇಕು.ಅಲ್ಲದೆ ಎಲ್ಲ ಕೆಲಸಗಳು ಕಾರ್ಯರೂಪಕ್ಕೆ ಬರಬೇಕು.ಆದರೆ ಮಾಜಿ ಮತ್ತು ಹಾಲಿ ಶಾಸಕರು ಅಭಿವೃದ್ಧಿ ವಿಷಯದಲ್ಲಿ ಜಗಳ ಮಾಡಿಕೊಂಡು ಜನರನ್ನು ಮರಳು ಮಾಡಲು ಯತ್ನಿಸುತ್ತಿದ್ದು,ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗಲಿದೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ತಿಳ್‌ಮಾತಿ ಕಡಲ ತೀರಕ್ಕೆ ಸೇತುವೆ ಮಂಜೂರಿ ಮಾಡಿದ್ದೇನೆ ಎಂದು ಮಾಜಿ ಶಾಸಕ ಸತೀಶ್ ಸೈಲ್ ಹೇಳುತ್ತಿದ್ದಾರೆ.ಆದರೆ ಈ ಕಡಲತೀರಕ್ಕೆ ಸೇತುವೆ ನಿರ್ಮಾಣ ಮಾಡುವುದರಿಂದ ಜನರಿಗೆ ಹಾಗೂ ಪ್ರವಾಸಿಗರಿಗೆ ಎಷ್ಟು ಪ್ರಯೋಜನವಾಗಲಿದೆ.ಈ ಸೇತುವೆ ನಿರ್ಮಾಣದಿಂದಾಗಿ ಮೀನುಗಾರರಿಗೆ ತೊಂದರೆಯಾಗುತ್ತಿದೆ.ಸ್ಥಳೀಯರನ್ನು ಪರಿಗಣನೆಗೆ ತೆಗೆದುಕೊಳ್ಳದೆ ಯೋಜನೆ ರೂಪಿಸಲಾಗಿದೆ.ತಿಳ್ಮಾತಿಯಲ್ಲಿ ನೀರಿನ ಸಮಸ್ಯೆ,ಗೋವಾ ಮತ್ತು ರಾಜ್ಯದ ಗಡಿ ಸಮಸ್ಯೆ ಇದೆ.ಹೀಗಿರುವಾಗ ಮಾಜಿ ಹಾಗೂ ಹಾಲಿ ಶಾಸಕರಿಬ್ಬರು ಅಭಿವೃದ್ಧಿ ವಿಷಯದಲ್ಲಿ ಜಗಳವಾಡುತ್ತಿರುವುದನ್ನು ಜನರು ನೋಡುತ್ತಿದ್ದಾರೆ ಎಂದು ಹೇಳಿದರು.

ಅಸ್ನೋಟಿಕರ್ ಕಾಂಗ್ರೆಸ್ಸಿಗೆ ಹೋಗುತ್ತಾರೆ ಬಿಜೆಪಿಗೆ ಹೋಗುತ್ತಾರೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ.ಆದರೆ ನಾನು ಯಾವುದೇ ಪಾರ್ಟಿಗೂ ತೆರಳುತ್ತಿಲ್ಲ.ಯಾವುದೇ ನಾಯಕರನ್ನು ಭೇಟಿ ಮಾಡಿಲ್ಲ.ಸಹೋದರ ಸಮಾನರಾದ ಮಧು ಬಂಗಾರಪ್ಪ ಅವರನ್ನು ಭೆಟಿ ಮಾಡಿದಾಗ ಕಾಂಗ್ರೆಸ್ ಗೆ ಆಹ್ವಾನ ಮಾಡಿದ್ದಾರೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೊದಲಿನಿಂದಲೂ ಆತ್ಮೀಯರು.ಕಳೆದ ಬಾರಿಯೂ ಬಿಜೆಪಿಯಲ್ಲಿಯೇ ಇರುವಂತೆ ಒತ್ತಾಯ ಮಾಡಿದ್ದರು.ಹೀಗೆ ಎಲ್ಲ ಪಕ್ಷದಿಂದ ಅವಕಾಶ,ಆಹ್ವಾನ ಇದೆ.ಆದರೆ ಪಕ್ಷದ ನಾಯಕ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರನ್ನು ಬಿಟ್ಟು ನಾನು ಯಾವುದೇ ರಾಜಕೀಯ ನಿರ್ಣಯ ತೆಗೆದುಕೊಳ್ಳುವುದಿಲ್ಲ.ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ ಎಂದರು.

ಇನ್ನು ಕೈಗಾ ಐದು ಮತ್ತು ಆರನೇ ಘಟಕದ ಕಾಮಗಾರಿ ಪ್ರಾರಂಭಿಸಲಾಗಿದ್ದು, ವಿವಿಧ ಕೆಲಸಗಳಿಗೆ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ.ಆದರೆ ಸ್ಥಳೀಯವಾಗಿ ನೆಲೆ ಕಳೆದುಕೊಂಡವರಿಗೆ ಅವಕಾಶ ನೀಡುತ್ತಿಲ್ಲ.ವಿವಿಧ ರಾಜ್ಯಗಳಿಂದ ಬಂದಂತಹ ಅಧಿಕಾರಿಗಳು ಅವರ ಸಂಬಂಧಿಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದ್ದು,ಇದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲ ಪಕ್ಷದವರು ಒಗ್ಗಟ್ಟಾಗಿ ಹೋರಾಟ ಮಾಡಿ ಸ್ಥಳೀಯರಿಗೆ ಉದ್ಯೋಗ ಕೊಡಿಸಬೇಕಿದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *