ಕುಮಟಾದಲ್ಲಿ ನದಿಗೆ ಬಿದ್ದ ಯುವಕನ ಸಾವು

ನದಿಯಲ್ಲಿ ಬಿದ್ದು ಯುವಕ ಸಾವು : ಬಡಗಣಿ ನದಿಯಲ್ಲಿ ದುರ್ಘಟನೆ

ಕಾರವಾರ : ಕುಮಟಾ ತಾಲೂಕಿನ ಬಡಗಣಿ ನದಿಯಲ್ಲಿ ಬಿದ್ದು ಯುವಕನೊಬ್ಬ ಮೃತಪಟ್ಟ ದುರ್ಘಟನೆ ಇಂದು ನಡೆದಿದೆ.ಕುಮಟಾ ತಾಲೂಕಿನ ಊರಕೇರಿ ಗ್ರಾಮದ ಹರಿಜನಕೇರಿ ನಿವಾಸಿ ಮಂಜುನಾಥ ಮಾಳು ಮುಕ್ರಿ ಮೃತಪಟ್ಟ ಯುವಕನೆಂದು ಗುರುತಿಸಲಾಗಿದೆ.

ಮನೆಯ ಸಾಮಗ್ರಿಗಳನ್ನು ಖರೀದಿಸಿ ಮರಳುವಾಗ ಬಡಗಣಿ ನದಿಯಲ್ಲಿ ಹಾಕಲಾದ ಕಾಲು ಸಂಕ ದಾಟುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ನದಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.ಈ ಘಟನೆಗೆ ಸಂಬಂಧಿಸಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಾಗೂ ಕುಮಟಾ ಪೊಲೀಸರು ಸ್ಥಳಕ್ಕಾಗಮಿಸಿ ಮಂಜುನಾಥ ಮುಕ್ರಿ ಅವರ ಮೃತದೇಹವನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿ. ಶೇಷಾದ್ರಿ ನಿರ್ದೇಶನದ ‘ಮೋಹನದಾಸ’ ಚಿತ್ರ ಅಕ್ಟೋಬರ್ 1ರಂದು ತೆರೆಗೆ

ಮಹಾತ್ಮ ಗಾಂಧಿ ಅವರ ಬಾಲ್ಯದ ಬಗ್ಗೆ ತಿಳಿಸುವ ಚಿತ್ರ “ಮೋಹನದಾಸ” ಅಕ್ಟೋಬರ್ 1 ರಂದು ಗಾಂಧಿ ಜಯಂತಿ ವೇಳೆಗೆ ತೆರೆಗೆ ಬರಲಿದೆ. ಕನ್ನಡಕ್ಕೆ ಹಲವು ರಾಷ್ಟ್ರಪ್ರಶಸ್ತಿ ತಂದುಕೊಟ್ಟಿರುವ ನಿರ್ದೇಶಕ ಪಿ.ಶೇಷಾದ್ರಿ ಈ ಚಿತ್ರ ನಿರ್ದೇಶಿಸಿದ್ದಾರೆ.

Movie Team

ಬೆಂಗಳೂರು: ಮಹಾತ್ಮ ಗಾಂಧಿ ಅವರ ಬಾಲ್ಯದ ಬಗ್ಗೆ ತಿಳಿಸುವ ಚಿತ್ರ “ಮೋಹನದಾಸ” ಅಕ್ಟೋಬರ್ 1 ರಂದು ಗಾಂಧಿ ಜಯಂತಿ ವೇಳೆಗೆ ತೆರೆಗೆ ಬರಲಿದೆ. ಕನ್ನಡಕ್ಕೆ ಹಲವು ರಾಷ್ಟ್ರಪ್ರಶಸ್ತಿ ತಂದುಕೊಟ್ಟಿರುವ ನಿರ್ದೇಶಕ ಪಿ.ಶೇಷಾದ್ರಿ ಈ ಚಿತ್ರ ನಿರ್ದೇಶಿಸಿದ್ದಾರೆ.

ಈ ವರೆಗೂ ಗಾಂಧೀಜಿಯವರ ಕುರಿತು ಸಾಕಷ್ಟು ‌ಸಾಕ್ಷ್ಯಚಿತ್ರ ಹಾಗೂ ಪುಸ್ತಕಗಳು ಬಂದಿವೆಯಾದರೂ, ಚಲನಚಿತ್ರಗಳು ಬಂದಿರುವುದು ಕಡಿಮೆ. ಬಾಲ್ಯದ ಕುರಿತಾದ ಚಿತ್ರ ಬಂದಿಲ್ಲ. ರಿಚರ್ಡ್ ಆಟನ್ ಬರೋ ಅವರ “ಗಾಂಧಿ” ಹಾಗೂ ಶ್ಯಾಮ್ ಬೆನಗಲ್ ಅವರ “ಮೇಕಿಂಗ್ ಆಫ್ ಮಹಾತ್ಮ” ಎರಡು ಚಿತ್ರಗಳು ಬಹಳ ವರ್ಷಗಳ ಹಿಂದೆ ಬಂದಿದೆ. ಆದರೆ ಗಾಂಧೀಜಿಯವರ ಬಾಲ್ಯದ ದಿನಗಳು ಎರಡೂ ಚಿತ್ರಗಳಲ್ಲಿಯೂ ಇಲ್ಲ. ಗಾಂಧಿ ಅವರು ಸಹ ತಮ್ಮ ಆತ್ಮಚರಿತ್ರೆ ಯಲ್ಲಿ ಕೇವಲ ಮೂವತ್ತು ಪುಟಗಳಷ್ಟು ಮಾತ್ರ ಬಾಲ್ಯದ ಬಗ್ಗೆ ಬರೆದುಕೊಂಡಿದ್ದಾರೆ ಎಂದು ನಿರ್ದೇಶಕ ಶೇಷಾದ್ರಿ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದ್ದಾರೆ.

ನಾನು ಬೊಳುವಾರು ಅವರು ಬರೆದಿರುವ “ಪಾಪು ಗಾಂಧಿ ಬಾಪು ಗಾಂಧಿ ಆದ ಕಥೆ” ಪುಸ್ತಕ ಓದಿದ್ದಾಗಿನಿಂದಲ್ಲೂ‌, ಗಾಂಧಿ ಅವರ ಬಾಲ್ಯದ ಜೀವನದ ಬಗ್ಗೆ ಚಿತ್ರ ಮಾಡಬೇಕೆಂದು ಕೊಂಡಿದ್ದೆ. ಗಾಂಧಿ ಅವರು ಮೋಹನದಾಸ ಆಗಿದ್ದಾಗ ಅಂದರೆ, ಅವರ ಸುಮಾರು 7 ರಿಂದ 14 ವರ್ಷಗಳಲ್ಲಿನ ಜೀವನದ ಘಟನೆಗಳು ಮಾತ್ರ ನಮ್ಮ ಚಿತ್ರದಲ್ಲಿದೆ ಎಂದಿದ್ದಾರೆ.

ಗುಜರಾತ್ ನ ಪೋರ್ ಬಂದರ್, ರಾಜಕೋಟ್ ನಲ್ಲಿ ಚಿತ್ರೀಕರಾಣ ನಡೆಸಲಾಗಿದೆ. ಗಾಂಧಿ ಅವರು ಹುಟ್ಟಿಬೆಳೆದ ಮನೆಯಲ್ಲೂ ಚಿತ್ರೀಕರಣ ಮಾಡಿರುವುದು ವಿಶೇಷ. ಗಾಂಧಿ ಜಯಂತಿ ಸುಸಂದರ್ಭದಲ್ಲೇ ನಮ್ಮ ಚಿತ್ರ ಸುಮಾರು ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ‌ನಿರ್ಮಾಣವಾಗಿದೆ. ಈ ಚಿತ್ರವನ್ನು ನೋಡುವುದರ ಮೂಲಕ ಗಾಂಧಿ ಜಯಂತಿಯನ್ನು ಸಮರ್ಥವಾಗಿ ಆಚರಿಸೋಣ ಎಂದರು ನಿರ್ದೇಶಕ ಪಿ.ಶೇಷಾದ್ರಿ. 

ಕಳೆದಬಾರಿ ಲಾಕ್ ಡೌನ್ ತೆರವುಗೊಂಡಾಗ ನನ್ನ “ಆಕ್ಟ್ 1978” ಬಿಡುಗಡೆಯಾಗಿತ್ತು.‌ ಈ ಬಾರಿ ಸರ್ಕಾರ ನೂರರಷ್ಟು ಚಿತ್ರಮಂದಿರಗಳಲ್ಲಿ ಭರ್ತಿಗೆ ಅವಕಾಶ ನೀಡಿರುವ ಸಂದರ್ಭದಲ್ಲಿ ನನ್ನ ಅಭಿನಯದ “ಮೋಹನದಾಸ” ಮೊದಲ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.‌ ಪಿ.ಶೇಷಾದ್ರಿ ಅವರ ಜೊತೆ ಕೆಲಸ ಮಾಡಿದ್ದು ಸಂತಸ ತಂದಿದೆ.‌ ಮಹಾತ್ಮ ಗಾಂಧಿ ಆಗುವುದಕ್ಕಿಂತ ಮುಂಚೆ ಅವರು ಮೋಹನದಾಸ.‌ ಗಾಂಧಿ ಅವರ ಬಾಲ್ಯದ ಕಥೆಯನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗಿದೆ. ನಾನು ಮೋಹನದಾಸ‌ ಅವರ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ಹಿರಿಯ ನಟಿ ಶೃತಿ. 

ಮೋಹನದಾಸ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಮರ್ಥ, ಹಿರಿಯನಟ ದತ್ತಣ್ಣ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಹಿರಿಯ ನಟ ದತ್ತಣ್ಣ ಅಭಿನಯದ 200ನೇ ಚಿತ್ರ ಇದು. ನನ್ನ ನಿರ್ದೇಶನದ 12 ನೇ ಚಿತ್ರವಿದು. ನನ್ನ ಅಷ್ಟು ಚಿತ್ರಗಳಲ್ಲೂ ಅವರು ಅಭಿನಯಿಸಿದ್ದಾರೆ. ನಾನು ದತ್ತಣ್ಣ ಇಲ್ಲದೇ ಚಿತ್ರವನ್ನೇ ಮಾಡಿಲ್ಲ ಎಂಬ ಖುಷಿಯ ವಿಚಾರವನ್ನು 

ಪಿ.ಶೇಷಾದ್ರಿ ಈ ಸಂದರ್ಭದಲ್ಲಿ ಹಂಚಿಕೊಂಡರು. ಮಿತ್ರಚಿತ್ರ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಪಿ.ಶೇಷಾದ್ರಿ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಜಿ.ಎಸ್.ಭಾಸ್ಕರ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜ್ ಸಂಕಲನ ಹಾಗೂ ಪ್ರವೀಣ್ ಗೋಡ್ಕಿಂಡಿ ಅವರ ಸಂಗೀತ ಹಾಗೂ ಹೊಸ್ಮನೆ ಮೂರ್ತಿ ಅವರ‌ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಮರ್ಥ, ಪರಮಸ್ವಾಮಿ, ಶೃತಿ, ಅನಂತ್ ಮಹದೇವನ್, ದತ್ತಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *