ವರ್ಷಿತಾ ನಾಯ್ಕ ಪ್ರಥಮ & ಇತರ ಸ್ಥಳಿಯ ಸುದ್ದಿಗಳು

ಜಲ ಜೀವನ ಮಿಷನ್ ವತಿಯಿಂದ ಯಲ್ಲಾಪುರ ದಲ್ಲಿ
ನಡೆದ ಜಿಲ್ಲಾ ಮಟ್ಟದ ಚರ್ಚಾಸ್ಪರ್ಧೆಯಲ್ಲಿ ಸಿದ್ದಾಪುರ ತಾಲೂಕಿನ ಬಿಳೇಗೋಡ ಹಿ. ಪ್ರಾಥಮಿಕ. ಶಾಲೆಯ ವಿದ್ಯಾರ್ಥಿನಿ ಕುಮಾರಿ ವರ್ಷಿತಾ ನಾಯ್ಕ ಪ್ರಥಮ ಬಹುಮಾನ ಪಡೆದಿದ್ದಾ ಳೆ

ಸರಕುಳಿಯಲ್ಲಿ ಬ್ಯಾಗ್ ವಿತರಣೆ, ಮಾಹಿತಿ‌‌ ಕಾರ್ಯಾಗಾರ
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಗಡಿಯಲ್ಲಿ ಇರುವ ಸರಕುಳಿ ಶ್ರೀಜಗದಾಂಬಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ, ಸಿ ಸಿ ಕೆಮರಾ ಉದ್ಘಾಟನೆ, ಸಾರಿಗೆ ಅಧಿಕಾರಿಗಳಿಂದ ಸಂಚಾರ ಮಾರ್ಗದರ್ಶನ ಕಾರ್ಯಕ್ರಮಗಳು‌ ನಡೆದವು.
ನಿವೃತ್ತ ಮುಖ್ಯಾಧ್ಯಾಪಕ ಎಂ.ಎಂ.ಹೆಗಡೆ ಅವರು ಸಿಸಿಟಿವಿ‌ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ‌ನೀಡಿದರು. ಶಿರಸಿ ಆರ್ ಟಿಓ ಸಿ.ಡಿ.ನಾಯ್ಕ ಮಕ್ಕಳಿಗೆ ಸಾರಿಗೆ, ಸಂಚಾರದ ಮಾಹಿತಿ ನೀಡಿದರು. ಸಂಚಾರದ ನಿಯಮಗಳ ಕುರಿತು ಕೇಳಲಾದ ಪ್ರಶ್ನೆಗೆ ಸರಿ ಉತ್ತರ ಕೊಟ್ಟ ಮಕ್ಕಳಿಗೆ ಬಹುಮಾನ ಕೂಡ ವಿತರಿಸಿದರು.
ಎಂಟನೇ ವರ್ಗದ ೩೫ ಮಕ್ಕಳಿಗೆ ಆರ್ ಡಿಎಸ್ ಸ್ವಯಂ ಸೇವಾ ಸಂಸ್ಥೆ ೧೨೦೦ ರೂ. ಮೌಲ್ಯದ ಬ್ಯಾಗ್, ೨ ಜೊತೆ ಸಮಸವಸ್ತ್ರ, ಎರಡು‌ಪಟ್ಟಿ ವಿತರಿಸಿ ಶುಭಕೋರಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೯೦ಕ್ಕಿಂತ ಅಧಿಕ ಅಂಕ‌ ಪಡೆದು ಸಾಧನೆ ‌ಮಾಡಿದ ೧೦ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ‌ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಆರು‌ ಮುಖ್ಯಾಧ್ಯಾಪಕರು ಪಾಲ್ಗೊಂಡಿದ್ದರು. ಬಿ.ಎಂ.ಚಿತ್ರ ಗಿಮಠ, ಜಿ.ಎಸ್.ಹೆಗಡೆ, ಜಿ.ಆರ್.ಭಾಗವತ, ಟಿ.ಆರ್.ಜೋಶಿ, ಎಸ್.ಎನ್.ಭಟ್ಟ, ಎಂ.ಎಂ.ಹೆಗಡೆ ಪಾಲ್ಗೊಂಡರು. ಅಧ್ಯಕ್ಷತೆಯನ್ನು ಆಡಳಿತ ‌ಮಂಡಳಿ ಅಧ್ಯಕ್ಷ ಎಂ.ಜಿ.ಹೆಗಡೆ ವಹಿಸಿದ್ದರು.
ಸ್ತುತಿ‌ ಸಂಗಡಿಗರು ಪ್ರಾರ್ಥಿಸಿದರು. ಮುಖ್ಯಾಧ್ಯಾಪಕ ಕೃಷ್ಣಮೂರ್ತಿ ಹೆಗಡೆ ಸ್ವಾಗತಿಸಿದರು. ಎಂ.ವಿ.ನಾಯ್ಕ ವಂದಿಸಿದರು. ವಿ.ಎಸ್.ಭಟ್ಟ ನಿರ್ವಹಿಸಿದರು.

ಸಿದ್ಧಾಪುರ ಹಾವಿನಬೀಳು ಗ್ರಾಮದ ಹಿರಿಯ ವ್ಯಕ್ತಿ ಗಣಪತಿ ರಾಮಚಂದ್ರ ಭಟ್ಟ (87 ವರ್ಷ) ಇವರು ಇಂದು ನಿಧನರಾದರು .

ಇವರು ಈ ಹಿಂದೆ ಹಾವಿನಬೀಳು ಗ್ರಾಮದಲ್ಲಿ ಪೊಲೀಸ್ ಪಟೇಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಇವರ ತಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರೆಂಬುದನ್ನು ಇಲ್ಲಿ ಸ್ಮರಿಸಬಹುದು.

ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿಯನ್ನು ‘ಹಾವಿನಬೀಳು ಯುವ ವಾಹಿನಿ’, ‘ಹಳೆಯ ವಿದ್ಯಾರ್ಥಿಗಳ ಸಂಘ, ಹುಲ್ಕುತ್ರಿ’, ‘ಹುಲ್ಕುತ್ರಿ ಶಾಲೆಯ ಪಾಲಕರು’ ಹಾಗೂ ಸಮಸ್ತ ಹಾವಿನಬೀಳು ಗ್ರಾಮದ ನಾಗರಿಕರು ಅಂತಿಮ ನಮನ ಸಲ್ಲಿ ಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *