ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ

1978ರಲ್ಲಿ ಗಿರೀಶ್ ಕಾರ್ನಾಡ್ ರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು.

ತಮ್ಮ ಮ್ಯಾನರಿಸಂ, ಡೈಲಾಗ್​ನಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಕರಾಟೆ ಕಿಂಗ್ ಶಂಕರ್​ ನಾಗ್ ಅಗಲಿ ಇಂದಿಗೆ 31 ವರ್ಷ. ಆಟೋರಾಜ ಎಂದು ಕೂಡಾ ಹೆಸರಾಗಿದ್ದ ಶಂಕರ್​​ನಾಗ್ ಅವರ ಫೋಟೋಗಳನ್ನು ಇಂದಿಗೂ ಕೂಡಾ ಬಹಳ ಆಟೋಗಳ ಮೇಲೆ ಕಾಣಬಹುದು.

ಓದು ಮುಗಿಸಿ ವಿದೇಶಕ್ಕೆ ಹೋಗಬೇಕು ಎಂದುಕೊಂಡಿದ್ದ ಶಂಕರ್ ನಾಗ್ ಅಣ್ಣನ ಬಲವಂತದಿಂದ ರಂಗಭೂಮಿ ಪ್ರವೇಶಿಸಿದರು. ನಂತರ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಅವರು ಬೇಡ ಎಂದುಕೊಂಡು ಬಂದ ಕ್ಷೇತ್ರವನ್ನು ಪ್ರೀತಿಯಿಂದ ಅಪ್ಪಿಕೊಂಡರು.

ಒಮ್ಮೆ ಅನಂತ್​​ನಾಗ್ ಅವರು ತಮ್ಮನ ಕಾಲೆಳೆಯುವ ಉದ್ದೇಶದಿಂದ ‘ಶಂಕರ ವಿದೇಶಕ್ಕೆ ಹೋಗಬೇಕೆಂದುಕೊಂಡೆ, ಯಾವಾಗಪ್ಪಾ ಹೋಗೋದು’ ಎಂದು ಕೇಳಿದ್ದರಂತೆ. ಅದಕ್ಕೆ ಉತ್ತರಿಸಿದ್ದ ಶಂಕರ್​​​ ನಾಗ್ ‘ಇನ್ನೆಲ್ಲಿಯ ವಿದೇಶ ಅಣ್ಣ’ ಎಂದರಂತೆ. ಏಕೆಂದರೆ ಅಷ್ಟರಲ್ಲಿ ಅವರು ಚಿತ್ರರಂಗದಲ್ಲಿ ಅಷ್ಟು ಬ್ಯುಸಿ ಆಗಿದ್ದರು. ಕಾರ್ಯಕ್ರಮವೊಂದರಲ್ಲಿ ಅನಂತ್ ನಾಗ್ ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದರು.

actor director shankar nag 31th death anniversary

ವರನಟ ಡಾ.ರಾಜ್​ಕುಮಾರ್​ ಅವರೊಂದಿಗೆ ಶಂಕರ್​ ನಾಗ್​

1978ರಲ್ಲಿ ಗಿರೀಶ್ ಕಾರ್ನಾಡ್ ಅವರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು. ತಾವು ನಿರ್ದೇಶಿಸಿದ ಮೊದಲ ಚಿತ್ರಕ್ಕೆ 7 ರಾಜ್ಯ ಪ್ರಶಸ್ತಿಗಳನ್ನು ಕೂಡ ಪಡೆದರು.

‘ಎಸ್​​​ಪಿ ಸಾಂಗ್ಲಿಯಾನ’ ಚಿತ್ರವನ್ನಂತೂ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಶಂಕರ್ ಖಾಕಿ ಧರಿಸಿದಾಗ ಅವರಿಗೆ ಎಲ್ಲರ ದೃಷ್ಟಿ ತಾಕುತ್ತಿತ್ತು. ಏಕೆಂದರೆ ಅವರಿಗೆ ಆ ಬಟ್ಟೆ ಅಷ್ಟು ಚೆನ್ನಾಗಿ ಒಪ್ಪುತ್ತಿತ್ತು ಎಂದು ಅವರ ಬಹಳಷ್ಟು ಆತ್ಮೀಯರು ಹೇಳಿದ್ದಾರೆ.

‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು ನಿರ್ದೇಶಿಸಿ ಶಂಕರ್​​ ನಾಗ್ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದರು. ಇದು ಹಿಂದಿ ಭಾಷೆಯಲ್ಲಿ ತಯಾರಾದರೂ ಇದರಲ್ಲಿ ನಟಿಸಿದ್ದು, ಕನ್ನಡ ಕಲಾವಿದರು. ಅನಂತ್ ನಾಗ್, ಡಾ. ವಿಷ್ಣುವರ್ಧನ್, ಗಿರೀಶ್ ಕಾರ್ನಾಡ್, ಗಾಯತ್ರಿ, ಮಾಸ್ಟರ್ ಮಂಜುನಾಥ್ ಹಾಗೂ ಇನ್ನಿತರರು ನಟಿಸಿದ್ದರು. ಶಿವಮೊಗ್ಗದಲ್ಲಿ ಸಂಪೂರ್ಣ ಚಿತ್ರೀಕರಣ ಮಾಡಲಾಗಿತ್ತು.

actor director shankar nag 31th death anniversary

ಡಾ. ವಿಷ್ಣುವರ್ಧನ್​ ಜೊತೆ ಶಂಕರ್​ ನಾಗ್​

ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ ಮಾಡಿದ್ದ ಅಭಿಮಾನಿಗಳ ಪ್ರೀತಿಯ ಶಂಕ್ರಣ್ಣ 35ನೇ ವಯಸ್ಸಿಗೆ ಈ ಲೋಕಕ್ಕೆ ವಿದಾಯ ಹೇಳಿದರು. 30 ಸೆಪ್ಟೆಂಬರ್​ 1990ರಂದು ಚಿತ್ರೀಕರಣ ಮುಗಿಸಿ ಬರುವಾಗ ದಾವಣಗೆರೆ ಬಳಿ ಅವರ ಕಾರು ಅಪಘಾತಕ್ಕೀಡಾಗಿ ನಿಧನರಾದರು. ಕರಾಟೆ ಕಿಂಗ್​​​​​​​​​​​​ ಶಂಕರ್​ನಾಗ್​​​​​​​​​​​​ ಇಂದು ನಮ್ಮೊಂದಿಗೆ ಇಲ್ಲವಾದರೂ ಅವರ ನೆನಪು ಮಾತ್ರ ಎಂದಿಗೂ ಹಸಿರಾಗಿರುತ್ತದೆ. ಒಂದು ವೇಳೆ ಶಂಕರ್​ ನಾಗ್ ಇಂದಿಗೂ ಬದುಕಿದ್ದರೆ ಕನ್ನಡ ಚಿತ್ರರಂಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಹೆಸರು ಮಾಡುತ್ತಿತ್ತು ಎಂಬುದು ಮಾತ್ರ ನಿಜ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *