ಸಿದ್ದಾಪುರದಲ್ಲಿ ಕಾರ್ ಕಳವು.. ಭಟ್ಕಳದಲ್ಲಿ ಆರೋಪಿಗಳ ಬಂಧನ

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮದಲ್ಲಿ ಕಳ್ಳತನಕ್ಕೆ ಹೊಂಚುಹಾಕಿ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯ ಒಳಗೆ ಹಣ-ಆಭರಣಗಳಿಗಾಗಿ ಹುಡುಕಿ ಕೊನೆಗೆ ಮನೆಯ ಎದುರಿಗಿದ್ದ ಕಾರ್ ಕದ್ದೊಯ್ದ ಘಟನೆ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆ ಸಮಯದೊಳಗೆ ನಡೆದಿದೆ.

ಶಿರಳಗಿಯ ಖಾಸಗಿ ಬ್ಯಾಂಕ್ ಉದ್ಯೋಗಿ ಮತ್ತು ಶಿಕ್ಷಕಿ ದಂಪತಿಗಳ ಮನೆಯಲ್ಲಿ ಯಾರೂ ಇರದಿರುವುದನ್ನು ಅರಿತ ಕಳ್ಳರು ಬೆಳಿಗ್ಗೆ 2-3 ಗಂಟೆಯ ಸಮಯಕ್ಕೆ ಬಾಗಿಲು ಒಡೆದು ಮನೆಗೆ ನುಗ್ಗಿದ್ದಾರೆ. ಮನೆಯ ಒಳಗೆ ಆಭರಣ-ಹಣಕ್ಕಾಗಿ ತಡಕಾಡಿದ್ದಾರೆ. ಯಾವ ಸ್ವತ್ತೂ ಸಿಗದೆ ವಾರ್ಡ್ ರೋಬ್ ನಲ್ಲಿ ದೊರೆತ ಕಾರ್ ಆರ್.ಸಿ. ಪುಸ್ತಕ ಹಿಡಿದು ಮನೆಯ ಮೇಜಿನ ಮೇಲಿದ್ದ ಕಾರ್ ಕೀಲಿ ಪಡೆದು ಕಾರ್ ನೊಂದಿಗೆ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಮಾಹಿತಿ ಮೇರೆಗೆ ಪೊಲೀಸ್ ದೂರು ದಾಖಲಿಸಿ ಪರಿಶೀಲಿಸಿದಾಗ ಕಳ್ಳರು ಕಳ್ಳತನಕ್ಕಾಗಿ ಪ್ರಯತ್ನಿಸಿ ವಿಫಲರಾಗಿ ನಂತರ ಕಾರ್ ನೊಂದಿಗೆ ಪರಾರಿಯಾದ ವಾಸ್ತವ ತಿಳಿದಿದೆ.

ಸ್ಥಳಿಯರ ಮಾಹಿತಿ ಪ್ರಕಾರ ಬೆಳಿಗ್ಗೆ 2 ಗಂಟೆಯಿಂದ 2.30 ರ ಅವಧಿಯಲ್ಲಿ ಬಾಗಿಲು ಒಡೆದ ಶಬ್ಧ, ನಂತರ ಕಾರಿನ ಅವಾಜ್ ಗಮನಕ್ಕೆ ಬಂದಿದೆ. ಆದರೆ ಕಳ್ಳತನದ ಬಗ್ಗೆ ಸಂಶಯಿಸದ ಸ್ಥಳಿಯರು ತೆಂಗಿನ ಮರದಿಂದ ಕಾಯಿ ಬಿದ್ದಿರಬಹುದು ಎಂದು ಭಾವಿಸಿ ಸುಮ್ಮನಾಗಿದ್ದಾರೆ. ಮುಂಜಾನೆಯ ವೇಳೆ ಕಳ್ಳತನದ ವಿಷಯ ತಿಳಿಯುತ್ತಲೇ ಶಬ್ಧಬಂದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ ನಾಯ್ಕ ಕೆಲವು ದಿವಸ ಶಿರಳಗಿಯಲ್ಲಿ ಕೆಲವು ದಿವಸ ಹೊರ ಊರಲ್ಲಿ ಕುಟುಂಬದೊಂದಿಗೆ ಇರುತಿದ್ದರು. ಈ ಮಾಹಿತಿ ಸಂಗ್ರಹಿಸಿದ ಕಳ್ಳರು ಅವರ ಕುಟುಂಬ ಶಿರಳಗಿಯ ಮನೆಯಲ್ಲಿರದಿರುವುದನ್ನು ಖಚಿತಪಡಿಸಿಕೊಂಡು ಬಾಗಿಲು ಒಡೆದಿದೆ. ಈ ಕಳ್ಳತನದ ವೇಳೆ ಬೀಡಿ ಸೇದು ಎಸೆದಿರುವ ಕುರುಹುಗಳಿದ್ದು ಹಣ-ಆಭರಣ ದೋಚುವ ಉದ್ದೇಶದಿಂದ ಬಂದವರು ಹತಾಶರಾಗಿ ಕಾರ್ ಅಪಹರಿಸಿರುವ ಸಾಧ್ಯತೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿದ್ಧಾಪುರ ಪೊಲೀಸರು ಕಳ್ಳರು ಶಿವಮೊಗ್ಗ ಜಿಲ್ಲೆಯ ಕಡೆಯಿಂದ ಬಂದಿದ್ದು ಒಳದಾರಿಯಿಂದ ಪರಾರಿಯಾಗಿರುವ ಸಾಧ್ಯತೆ ಬಗ್ಗೆ ಊಹಿಸಿದ್ದಾರೆ.

ಭಟ್ಕಳ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : ಸಾಗವಾನಿ ಮರ ಕಡಿದು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನ

ಕಾರವಾರ : ಭಟ್ಕಳ ತಾಲೂಕಾ ಅರಣ್ಯ ವಲಯ ವ್ಯಾಪ್ತಿಯ ಶಿರಾಲಿ ಶಾಖೆಯ ಕೊಪ್ಪಾ ಮೀಸಲು ಅರಣ್ಯ ಸರ್ವೆ ನಂ.157 ರಲ್ಲಿ ಸಾಗವಾನಿ ಮರ ಕಡಿದು ತಲೆಮರೆಸಿಕೊಂಡಿದ್ದ ಆರೋಪಿಗಳಾದ ಇಲಿಯಾಸ ಕೊಳಗೇರಿ,ಉತ್ತರಕೊಪ್ಪಾ ಮತ್ತು ಸೋಮ ಕೃಷ್ಣ ಮರಾಠಿ,ಉತ್ತರಕೊಪ್ಪಾ ಈ ಇಬ್ಬರು ಆರೋಪಿಗಳನ್ನು ಬಂಧಿಸಿ ದಂಡ ವಸೂಲಿ ಮಾಡಲಾಯಿತು.

ಅಕ್ರಮವಾಗಿ ಕಡಿದ ಸಾಗವಾನಿ ತುಂಡುಗಳನ್ನು ವಶಪಡಿಸಿಕೊಂಡು ಸದರಿ ಆರೋಪಿಗಳಿಂದ ರೂ.25000/- ದಂಡ ವಸೂಲಿ ಮಾಡಲಾಯಿತು.ಈ ಕಾರ್ಯಚರಣೆಯಲ್ಲಿ ಭಟ್ಕಳ ವಲಯ ಅರಣ್ಯಾಧಿಕಾರಿ ಸವಿತಾ ಆರ್.ದೇವಾಡಿಗ, ಉಪ ವಲಯ ಅರಣ್ಯಾಧಿಕಾರಿಗಳಾದ ಜಗದೀಶ ನಾಯ್ಕ,ಮಧುಕುಮಾರ ನಾಯ್ಕ, ಸಂದೀಪ ಭಂಡಾರಿ,ಶ್ರೀಕಾಂತ ಪವಾರ,ಗಣಪತಿ ನಾಯ್ಕ,ಅರಣ್ಯ ರಕ್ಷಕರಾದ ಸಚಿನ್ ಕಾಡು ಗೋಲಬಾವಿ,ಮೃತ್ಯುಂಜಯ,ಪುಂಡಲೀಕ ಮತ್ತು ವಾಹನ ಚಾಲಕರು ಪಾಲ್ಗೊಂಡಿದ್ದರು.ತಾಲೂಕಿನಲ್ಲಿ ನಡೆದ ಅರಣ್ಯ ಇಲಾಖೆಯ ಈ ಕಾರ್ಯಾಚರಣೆಗೆ ತಾಲೂಕಿನಾದ್ಯಂತ ಪ್ರಶಂಸೆಯ ಸುರಿಮಳೆಯೇ ಹರಿದು ಬಂದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *