ಖಂಡಗಾರನಲ್ಲಿ ಸರ್ಕಾರಿ ಭೂಮಿ ಅತಿಕ್ರಮಣ : ಕರವೇ ಸ್ವಾಭಿಮಾನಿ ಬಣ ಕ್ರಮಕ್ಕೆ ಆಗ್ರಹ

ಕಾರವಾರ : ಕುಮಟಾ ತಾಲೂಕಿನ ನಾಗೂರು ಗ್ರಾಮದಲ್ಲಿ ಸುಮಾರು 20 ಎಕರೆ ಸರ್ಕಾರಿ ಪಡಾ ಜಮೀನು ಅತಿಕ್ರಮಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಮಿರ್ಜಾನ್‌ ಗ್ರಾ.ಪಂ.ಜನಪ್ರತಿನಿಧಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮಿರ್ಜಾನ ಹೋಬಳಿಯ ಖಂಡಗಾರ ಮಜರೆಯಲ್ಲಿ ಸುಮಾರು 20 ಎಕರೆ
ಸರ್ಕಾರಿ ಪಡಾ ಜಮೀನು ಅತಿಕ್ರಮಣವಾಗಿದ್ದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ.ಅತಿಕ್ರಮಣ ಜಾಗದಲ್ಲಿದ್ದ ಸಾಗವಾನಿ,ಬೀಟೆ,ಮತ್ತಿ ಇತರೆ ಬೆಲೆ ಬಾಳುವ ಸುಮಾರು ಸಾವಿರಕ್ಕೂ ಅಧಿಕ ಮರಗಳನ್ನು ಕಡಿದು ಸಾಗಿಸಲಾಗಿದೆ.ಇಂದಿಗೂ ಆ ಜಾಗದಲ್ಲಿ ಕಡಿದ ಮರಗಳ ಬುಡಗಳು ಹಾಗೆಯೇ ಇದೆ.ಜನ ಸಾಮಾನ್ಯರು ಉರುವಲು ಕಟ್ಟಿಗೆಗಾಗಿ ಒಣಗಿದ ಸಣ್ಣ ಮರವನ್ನು ಕಡಿದರೂ ಅವರ ಮೇಲೆ ದರ್ಪ
ತೋರಿ,ಪ್ರಕರಣ ದಾಖಲಿಸುವ ಅರಣ್ಯ ಇಲಾಖೆಯ ಅಧಿಕಾರಿಗಳು ಈ ವಿಷಯದಲ್ಲಿ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದನ್ನು ಗಮನಿಸಿದರೆ, ಇಲಾಖೆಯ ಅಧಿಕಾರಿಗಳ ಮೇಲೆ ಶಂಕೆ ಮೂಡುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಮಿರ್ಜಾನ್‌ ಕಂದಾಯ ಅಧಿಕಾರಿಯು ಸ್ಥಳ ಪರಿಶೀಲನೆ ಮಾಡಿ,
ಅತಿಕ್ರಮಣವನ್ನು ತೆರವು ಮಾಡಿ,ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.ಈ ಕಾರಣಕ್ಕೆ ಅವರನ್ನು ವರ್ಗಾವಣೆಗೊಳಿಸಲು ಕೆಲ ಕಾಣದ ಕೈಗಳು ಪ್ರಬಲ ಹುನ್ನಾರ ನಡೆಸಿರುವ ಮಾಹಿತಿ ಕೂಡ ಲಭಿಸಿದೆ.ಹೀಗಾಗಿ ದಕ್ಷ ಅಧಿಕಾರಿಯನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಮನವಿಯಲ್ಲಿ
ಒತ್ತಾಯಿಸಲಾಗಿದೆ.

ಮನವಿಯನ್ನು ಕುಮಟಾ ತಹಸೀಲ್ದಾರ್‌ ವಿವೇಕ ಶೇಣ್ವಿ ಅವರು ಸ್ವೀಕರಿಸಿ,ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ರಾಜು ಮಾಸ್ತಿಹಳ್ಳ, ತಾಲೂಕು ಅಧ್ಯಕ್ಷ ಮಂಜುನಾಥ ಮರಾಠಿ,ಮಿರ್ಜಾನ್‌ ಗ್ರಾಪಂ.ಅಧ್ಯಕ್ಷ ಪರಮೇಶ್ವರ ಪಟಗಾರ,ಗ್ರಾ.ಪಂ.ಸದಸ್ಯರಾದ ಮಂಜುನಾಥ ಹರಿಕಾಂತ,ಪರಶು ಸಾವೇರಾ ಫರ್ನಾಂಡೀಸ್‌,ವಕೀಲ ನಾಗರಾಜ ಹೆಗಡೆ,ಕರವೇ ಸ್ವಾಭಿಮಾನಿ ಬಣದ ಈಶ್ವರ
ಉಪ್ಪಾರ,ರಿತೇಶ ಉಪ್ಪಾರ,ಮಾರುತಿ ಆನೆಗುಂದಿ,ಕೆ.ಎನ್‌. ಮಂಜು,ಶಿವಶಂಕರ ಮುಕ್ರಿ,ರಾಜೀವ ಗೌಡ,ಮೋಹನ ಪಟಗಾರ ಇತರರು ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *