ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ & ವೈದ್ಯಕೀಯ ತಪಾಸಣಾ ಶಿಬಿರ

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.  

Arbaz_Aftab_Mulla1

ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಸಿದ್ದಾಪುರ
ಗ್ರಾಮೀಣ ಭಾಗದ ಎಲ್ಲ ಮಹಿಳೆಯರು, ಮಕ್ಕಳು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಹಾಗೂ ವೈದ್ಯಕೀಯ ಸೇವೆ ಸಕಾಲದಲ್ಲಿ ದೊರೆಯುವಂತಾಗಬೇಕು. ಆಗ ಮಾತ್ರ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ಹೇಳಿದರು.
ಅವರು ಕ್ಯಾದಗಿಯ ಸೇವಾ ಸಹಕಾರಿ ಸಂಘದಲ್ಲಿ ಗಣೇಶ ಹೆಗಡೆ ದೊಡ್ಮನೆ ಜನ್ಮ ಶತಾಬ್ದಿ ಅಂಗವಾಗಿ ಧನ್ವಂತರಿ ಆಯುರ್ವೇದ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕ್ಯಾದಗಿ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಗಣೇಶ ಭಟ್ಟ ಕೆರೆಹೊಂಡ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಧನ್ವಂತರಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯೆ ಡಾ|ರೂಪಾಭಟ್ಟ, ಪ್ರೊ| ಶ್ರೀಕಾಂತ ಭಟ್ ಕುಳಿಬೀಡು, ಸಹಕಾರಿ ಸಂಘದ ನಿರ್ದೇಶಕರಾದ ವಿ.ಕೆ.ಗೌಡ ಕುಂಬಾರಕುಳಿ, ಪರಮೇಶ್ವರ ನಾಯ್ಕ ಶಿರಗಳ್ಳೆ, ಜಿ.ಆರ್.ನಾಯ್ಕ ಹೆಗ್ಗಾರಕೈ, ಕೆ.ಪಿ.ರಘುಪತಿ ಕ್ಯಾದಗಿ, ವಿಜಯಾ ನಾಯ್ಕ ಹಳ್ಳಿಬೈಲ್ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್.ಗೌಡ ಆಲ್ಮನೆ ನಿರೂಪಿಸಿದರು.ವಿ.ಕೆ.ಗೌಡ ವಂದಿಸಿದರು.
ನಂತರ ಧನ್ವಂತರಿ ಆಯುರ್ವೇದ ಕಾಲೇಜಿನ ವೈದ್ಯರುಗಳಿಂದ ಉಚಿತ ತಪಾಸಣಾ ಶಿಬಿರ ನಡೆಯಿತು.

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.  

ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ.  ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಲ್ಲಾ ಕೆಲಸಕ್ಕಾಗಿ ಪ್ರತಿದಿನ ಬೆಳಗಾವಿಯಿಂದ ರೈಲಿನಲ್ಲಿ ಓಡಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಲ್ಲಾ ಪ್ರೀತಿಸುತ್ತಿದ್ದ ಹುಡುಗಿ ಕಡೆಯವರು ಆತನನ್ನು ಕೊಲೆ ಮಾಡಿರುವುದಾಗಿ ಯುವಕನ ತಾಯಿ ನಜೀಮಾ ಶಾಯಿಕ್ ಆರೋಪಿಸಿದ್ದಾರೆ. 

ಹುಡುಗಿಯಿಂದ ಬೇರೆಯಾಗುವಂತೆ ಬಿಜ್ರೆ ಮತ್ತು ಮಹಾರಾಜ್ ಸೇರಿದಂತೆ ಕೆಲವು ಜನರು ಕೆಲ ದಿನಗಳಿಂದ ತನ್ನ ಮಗನಿಗೆ ಬೆದರಿಕೆ ಹಾಕುತ್ತಿದ್ದರು.ಯುವತಿಯನ್ನು ತಡೆಯುವಂತೆ ಆಕೆಯ ತಾಯಿಯೊಂದಿಗೂ ಮಾತನಾಡಿದ್ದೆ ಆದರೆ, ಮುಲ್ಲಾ ಹಾಗೂ ಯುವತಿ ಮಾತು ಕೇಳುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.  ಪ್ರಾಥಮಿಕ ತನಿಖೆ ನಡೆಸಿದ ರೈಲ್ವೆ ಪೊಲೀಸರು, ಈ ವಿಚಾರವನ್ನು ಬೆಳಗಾವಿ ಜಿಲ್ಲಾ ಪೊಲೀಸರಿಗೆ ವರ್ಗಾಯಿಸಿದ್ದಾರೆ (kpc).

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *