ನೆಟ್​​​ವರ್ಕ್​​​ಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಸಿದ ಶರಾವತಿ ಮುಳುಗಡೆ ಸಂತ್ರಸ್ತರು

ಅಡಿಕೆ ಬೆಳೆಗಾರರಿಗೆ ಸರ್ಕಾರದ ಹೊಡೆತ: ರೈತ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಬಂದ್

ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ, ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ ಕ್ಲಿನಿಕ್) ಅನುದಾನದ ಕೊರತೆಯಿಂದ ಸದ್ಯ ಬಾಗಿಲು ಮುಚ್ಚಿದೆ.

ಶಿರಸಿ: ಮಲೆನಾಡಿನ ಅಡಿಕೆ ಬೆಳೆಗಾರರ ಪಾಲಿಗಿದು ಮತ್ತೊಂದು ಕಹಿಸುದ್ದಿ. ಕೊಳೆ ರೋಗದಂತಹ ಹಲವಾರು ರೋಗಗಳಿಗೆ ತುತ್ತಾಗುತ್ತಿರೋ ಅಡಿಕೆಯ ಬಗೆಗಿನ ಸಂಶೋಧನಾ ಕ್ಲಿನಿಕ್ ಇದೀಗ ಮುಚ್ಚಿದೆ.

ಆಸ್ಪತ್ರೆಯ ಹೊರರೋಗಿ ವಿಭಾಗದಂತಿದ್ದ ಅಡಿಕೆಯ ಹಾರ್ಟಿ ಕ್ಲಿನಿಕ್‌ನ ಬಾಗಿಲನ್ನು ಸರ್ಕಾರದ ಅನುದಾನ ಇಲ್ಲದೆ ಮುಚ್ಚುವಂತಾಗಿದೆ. ಇದು ಸಾವಿರಾರು ಅಡಿಕೆ ಬೆಳೆಗಾರರಿಗೆ ಸಂಕಷ್ಟ ತಂದಿದೆ.

ರೈತರ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಕ್ಲೋಸ್​​

ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ ಹಾಗು ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ ಕ್ಲಿನಿಕ್) ಅನುದಾನದ ಕೊರತೆಯಿಂದ ಸದ್ಯ ಬಾಗಿಲು ಹಾಕಿಕೊಂಡಿದೆ.

ಪ್ರತಿಜಿಲ್ಲೆಗೆ ಒಂದರಂತೆ ತೋಟಗಾರಿಕಾ ಕ್ಷೇತ್ರ ಹೆಚ್ಚಿರೋ 26 ಜಿಲ್ಲೆಗಳಲ್ಲಿ 2010-11ರಲ್ಲಿ ಹಾರ್ಟಿ ಕ್ಲಿನಿಕ್ ಆರಂಭಿಸಲಾಗಿತ್ತು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳು, ಹವಾಮಾನ ವೈಪರೀತ್ಯದ ಪರಿಣಾಮ, ಉತ್ಪನ್ನಗಳ ಇಳುವರಿ ಮೇಲೆ ಉಂಟಾಗಬಹುದಾದ ದುಷ್ಪರಿಣಾಮ ಮತ್ತು ಅದಕ್ಕೆ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮ ಸೇರಿದಂತೆ ಉಪಯುಕ್ತ ಮಾಹಿತಿ ಒದಗಿಸೋದು ಈ ಕೇಂದ್ರದ ಕೆಲಸವಾಗಿತ್ತು.

ಹಾರ್ಟಿ ಕ್ಲಿನಿಕ್ ಉತ್ತರ ಕನ್ನಡ ಜಿಲ್ಲೆಯ ಕೇಂದ್ರ ಶಿರಸಿಯ ತೋಟಗಾರಿಕಾ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಇದೆ. ಹತ್ತು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅನುದಾನ ಬಿಡುಗಡೆಯಾಗದ ಕಾರಣ ಅದು ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಿದೆ.

ಜಿಲ್ಲೆಗೆ ಒಂದರಂತೆ ಸ್ಥಾಪಿಸಲಾದ ಹಾರ್ಟಿ ಕ್ಲಿನಿಕ್‍ಗೆ ವಾರ್ಷಿಕ ಕೇವಲ ₹2 ಲಕ್ಷ ಅನುದಾನ ಬಿಡುಗಡೆಗೊಳ್ಳುತ್ತಿತ್ತು. ಮಾಸಿಕ ₹20 ಸಾವಿರ ಗೌರವಧನ ಪಡೆಯುತ್ತಿದ್ದ, ಕೃಷಿ ವಿಷಯದಲ್ಲಿ ಪದವಿ ಪಡೆದ ವಿಷಯ ತಜ್ಞರೊಬ್ಬರನ್ನು ಹೊರತುಪಡಿಸಿ ಬೇರೆ ಸಿಬ್ಬಂದಿ ನೇಮಕಾತಿ ಇರಲ್ಲಿಲ್ಲ. ಕೃಷಿ ವಿಷಯದಲ್ಲಿ ಪದವಿ ಪಡೆದವರೊಬ್ಬರನ್ನು ವಿಷಯ ತಜ್ಞರೆಂದು ಈ ಕ್ಲಿನಿಕ್ ಗೆ ನೇಮಿಸಲಾಗಿತ್ತು.

ಜಿಲ್ಲೆಯಲ್ಲಿ ಪ್ರಮುಖವಾಗಿ ಅಡಿಕೆ, ಕಾಳುಮೆಣಸು, ಶುಂಠಿ, ಮಾವು, ಗೇರು, ಅನಾನಸ್, ತೆಂಗು ಸೇರಿದಂತೆ ಮುಖ್ಯ ಬೆಳೆಗಳ ಸಂರಕ್ಷಣೆ, ಪೋಷಣೆ ಕುರಿತು ಅವರು ರೈತರಿಗೆ ಸಕಾಲಕ್ಕೆ ಸಲಹೆ ನೀಡಲು ಅನುಕೂಲವಾಗಿತ್ತು.

ತೋಟಗಾರಿಕಾ ಬೆಳೆಗಳಿಗೆ ಕಾಡುವ ರೋಗ, ಇಳುವರಿ ಕುಂಠಿತ ಸಮಸ್ಯೆಗೆ ವಿಷಯ ತಜ್ಞರಿಂದ ಸಲಹೆ ಪಡೆದುಕೊಳ್ಳಲು ಹಾರ್ಟಿ ಕ್ಲಿನಿಕ್ ಅಗತ್ಯವಿತ್ತು. ಕೃಷಿಗೆ ಒತ್ತು ನೀಡುವುದಾಗಿ ಹೇಳುವ ಸರ್ಕಾರ ರೈತಪರ ಯೋಜನೆ ಸ್ಥಗಿತಗೊಳಿಸುವುದು ಸರಿಯಲ್ಲ. ಬೇರೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ ಹಾರ್ಟಿ ಕ್ಲಿನಿಕ್‌ನಂತಹ ರೈತಪರ ಸೌಲಭ್ಯ ಪುನರಾರಂಭಿಸಲಿ ಅನ್ನೋದು ರೈತರ ಒತ್ತಾಯ.

ಇಂತಹ ಹಾರ್ಟಿ ಕ್ಲಿನಿಕ್ ಉತ್ತರ ಕನ್ನಡ ಜಿಲ್ಲೆಗೆ ಅತಿ ಅಗತ್ಯವಿದೆ. ಕೋವಿಡ್ ಪರಿಸ್ಥಿತಿಯಲ್ಲೂ ಸರ್ಕಾರ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿಲ್ಲ. ಅಲ್ಪ ಅನುದಾನದಲ್ಲಿ ರೈತರಿಗೆ ಅನುಕೂಲವಾಗಿರೋ ಯೋಜನೆ ಒಂದನ್ನ ಸ್ಥಗಿತಗೊಳಿಸುತ್ತಿರುವುದು ದುರದೃಷ್ಟಕರ. ಪ್ರಾರಂಭ ಮಾಡಿದ ಒಳ್ಳೇ ಯೋಜನೆಯೊಂದನ್ನ ಏಕಾಏಕಿ ನಿಲ್ಲಿಸೋದು ಎಷ್ಟರಮಟ್ಟಿಗೆ ಸರಿ? ಅನ್ನೋದು ರೈತರ ಪ್ರಶ್ನೆ. (etbk)

ನೆಟ್​​​ವರ್ಕ್ ಇಲ್ಲದೆ ಆನ್​​ಲೈನ್ ಕ್ಲಾಸ್, ವರ್ಕ್ ಫ್ರಂ ಹೋಂ ಮಾಡುವುದು ಕಷ್ಟಕರವಾಗಿದೆ. ಅಲ್ಲದೆ ವೈದ್ಯಕೀಯ ಸೇವೆಗಾಗಿ 108ಕ್ಕೆ ಕರೆ ಮಾಡುವುದು ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು..

ಶಿವಮೊಗ್ಗ : ನೋ ನೆಟ್​ವರ್ಕ್​​, ನೋ ವೋಟಿಂಗ್​​ ಎಂಬ ಅಭಿಯಾನದ ಭಾಗವಾಗಿ ಶರಾವತಿ ಮುಳುಗಡೆಯ ಸಂತ್ರಸ್ತರು ಕಟ್ಟಿನಕಾರು ಗ್ರಾಮದಿಂದ ಕೋಗಾರು ಗ್ರಾಮದವರೆಗೂ ಪಾದಯಾತ್ರೆ ನಡೆಸಿ ಮೊಬೈಲ್ ನೆಟ್​​ವರ್ಕ್​​ಗಾಗಿ ಆಗ್ರಹಿಸಿದರು.

ಕಟ್ಟಿನಕಾರು ಸೇರಿ ಸುತ್ತಮುತ್ತಲ ಗ್ರಾಮಗಳ ಸುಮಾರು‌ 15 ಕಿ.ಮೀ ದೂರದಲ್ಲಿ ಯಾವುದೇ ಮೊಬೈಲ್​ ಕಂಪನಿಯ ನೆಟ್​​​ವರ್ಕ್ ಲಭ್ಯವಾಗುವುದಿಲ್ಲ. ಇದರಿಂದ ಈ ಭಾಗದ ಜನರಿಗೆ ಹೊರ ಜಗತ್ತಿನೊಂದಿಗೆ ಸಂಪರ್ಕವೇ ಇಲ್ಲದಂತಾಗಿದೆ. ಇದರಿಂದ ತಮಗೆ ಮೊಬೈಲ್ ನೆಟ್​​​​ವರ್ಕ್ ಸೌಲಭ್ಯ ವದಗಿಸಬೇಕೆಂದು ಆಗ್ರಹಿಸಿದರು.

ನೋ‌ ನೆಟ್ ವರ್ಕ್, ನೋ ವೋಟಿಂಗ್ ಅಭಿಯಾನ : ಚನ್ನಗೊಂಡ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಟ್ಟಿನಕಾರು, ಕಾರಣಿ, ಹಾಳಸಸಿ ಭಾಗದ ಜನರು ಕಳೆದ ಆರು ತಿಂಗಳಿಂದ ಜನತೆ ಅಭಿಯಾನ ಆರಂಭಿಸಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಪಾದಯಾತ್ರೆ, ರಸ್ತೆ ತಡೆ ನಡೆಸಿ ಕಟ್ಟಿನಕಾರು ಗ್ರಾಮದಿಂದ ಚನ್ನಗೊಂಡ ಗ್ರಾಮ ಪಂಚಾಯತ್‌ವರೆಗೆ ಪಾದಯಾತ್ರೆ ನಡೆಸಿದರು.

ಸಮಸ್ಯೆಯ ಸುಳಿಯಲ್ಲಿ ಜನತೆ : ನೆಟ್​​​ವರ್ಕ್ ಇಲ್ಲದೆ ಆನ್​​ಲೈನ್ ಕ್ಲಾಸ್, ವರ್ಕ್ ಫ್ರಂ ಹೋಂ ಮಾಡುವುದು ಕಷ್ಟಕರವಾಗಿದೆ. ಅಲ್ಲದೆ ವೈದ್ಯಕೀಯ ಸೇವೆಗಾಗಿ 108ಕ್ಕೆ ಕರೆ ಮಾಡುವುದು ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.

ಪಾದಯಾತ್ರೆಯಲ್ಲಿ 6 ವರ್ಷದ ಬಾಲಕನಿಂದ 70 ವರ್ಷದ ವಯೋವೃದ್ದರು ಸಹ ಭಾಗಿಯಾಗಿದ್ದರು. ಚನ್ನಗೊಂಡ ಗ್ರಾಮ ಪಂಚಾಯಿತಿ ಮುಂಭಾಗ ಭಟ್ಕಳ ರಸ್ತೆಯಲ್ಲಿ ಸಾಂಕೇತಿಕ‌ ಧರಣಿ ಮಾಡಿ ಪ್ರತಿಭಟನೆ ನಡೆಸಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *