ಇಂದಿನ ಖುಷಿ ಕಬರ್- ಡಿಸೆಂಬರ್ 10 ರೊಳಗೆ 25 ಸಾವಿರ ಬಡಜನರ ಮನೆಗೆ ವಿದ್ಯುತ್ ಸಂಪರ್ಕ

ಕೆ.ಪಿಟಿ.ಸಿ.ಎಲ್ ನ ಎಲ್ಲಾ ವಿಭಾಗಗಳ ಆಯಾ ತಾಲೂಕು ಉಪಕೇಂದ್ರಗಳ ಮೂಲಕ ಫಲಾನುಭವಿಗಳ ಅರ್ಜಿ ಪಡೆದು ಮಾಹಿತಿ ನೀಡಲು ಮತ್ತು ಇದಕ್ಕೆ ಸಂಬಂಧಿಸಿದ ಪ್ರಕ್ರೀಯೆಗಳನ್ನುಆಯಾ ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳಿಯ ಸಂಸ್ಥೆ ಗಳ ಮೂಲಕ ಒಂದು ವಾರದ ಒಳಗೆ ತರಿಸಿಕೊಳ್ಳಲು ಆಯಾ ಉಪವಿಭಾಗದ ಮೂಲಕ ಆದೇಶದ ಮಾಹಿತಿ ನೀಡಿ ಕಾಲಮಿತಿಯಲ್ಲಿ ಫಲಾನುಭವಿಗಳ ಪಟ್ಟಿ ನೀಡಲು ಸೂಚಿಸಿರುವುದಾಗಿ ಕೆ.ಪಿ.ಟಿ.ಸಿ.ಎಲ್. ಮೂಲಗಳು samajamukhi.net ಪ್ರತಿನಿಧಿಗೆ ಮಾಹಿತಿ ನೀಡಿವೆ.

ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವಲ್ಲಿ ರಾಮಬಾಣವಾಗುತ್ತಿದೆ ಈ ಹೊಸ ಔಷಧಿ..!

ಕೊರೋನಾ ಸಾಂಕ್ರಾಮಿಕ 3ನೇ ಅಲೆಯ ಭೀತಿಯ ನಡುವಲ್ಲೇ ಭಾರತದಲ್ಲಿ ಸೋಂಕು ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದೆ. ಅಂತೆಯೇ ಸಾವಿನ ಪ್ರಮಾಣ ಕೂಡ ತಗ್ಗುತ್ತಿದ್ದು, ಇದರ ನಡುವೆಯೇ ಕೊರೋನಾ ಔಷಧಿ ಕುರಿತ ಆಶಾದಾಯಕ ಸುದ್ದಿಯೊಂದು ಹೊರ ಬಿದ್ದಿದೆ.

ಡಿಸೆಂಬರ್ 10 ರೊಳಗೆ ರಾಜ್ಯದ 25 ಸಾವಿರ ಬಡವರಿಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ

ವಿದ್ಯುತ್ ಸಂಪರ್ಕ ಅವಶ್ಯವಿರುವ ರಾಜ್ಯದ 25 ಸಾವಿರಕ್ಕೂ ಹೆಚ್ಚು ಬಡಜನರ ಮನೆಗಳಿಗೆ ಇದೇ ಡಿಸೆಂಬರ್ 10 ರ ರೊಳಗೆ ವಿದ್ಯುತ್ ವ್ಯವಸ್ಥೆ ಮಾಡುವಂತೆ ರಾಜ್ಯ ಇಂಧನ ಇಲಾಖೆ ಆದೇಶಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇಂಧನ ಸಚಿವ ವಿ.ಸುನಿಲ್ ಕುಮಾರ್ ವಿದ್ಯುತ್ ಸರಬರಾಜು ಕಾಮಗಾರಿಗೆ ಮೀಸಲಿರುವ ಮೊತ್ತವನ್ನು ಬಳಸಿಕೊಂಡು ರಾಜ್ಯದ 23ರಿಂದ 25 ಸಾವಿರ ಬಡ ಕುಟುಂಬಗಳಿಗೆ ಡಿಸೆಂಬರ್ ಹತ್ತರೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆದೇಶಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ದೀನ್ ದಯಾಳ್ ಗ್ರಾಮ ಜ್ಯೋತಿ ಯೋಜನೆಯಡಿ 2020 ರ ವರೆಗೆ 4.29 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಈಗ ಡಿಸೆಂಬರ್ 10 ರೊಳಗೆ ಇನ್ನೂ ಬಾಕಿ ಇರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಇಂಧನ ಇಲಾಖೆ ಯ ಅಧೀನ ಕಾರ್ಯದರ್ಶಿ ಎನ್. ಮಂಗಳಗೌರಿ ಆದೇಶದಲ್ಲಿ ತಿಳಿಸಿದ್ದಾರೆ.

ಕೆ.ಪಿಟಿ.ಸಿ.ಎಲ್ ನ ಎಲ್ಲಾ ವಿಭಾಗಗಳ ಆಯಾ ತಾಲೂಕು ಉಪಕೇಂದ್ರಗಳ ಮೂಲಕ ಫಲಾನುಭವಿಗಳ ಅರ್ಜಿ ಪಡೆದು ಮಾಹಿತಿ ನೀಡಲು ಮತ್ತು ಇದಕ್ಕೆ ಸಂಬಂಧಿಸಿದ ಪ್ರಕ್ರೀಯೆಗಳನ್ನುಆಯಾ ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳಿಯ ಸಂಸ್ಥೆ ಗಳ ಮೂಲಕ ಒಂದು ವಾರದ ಒಳಗೆ ತರಿಸಿಕೊಳ್ಳಲು ಆಯಾ ಉಪವಿಭಾಗದ ಮೂಲಕ ಆದೇಶದ ಮಾಹಿತಿ ನೀಡಿ ಕಾಲಮಿತಿಯಲ್ಲಿ ಫಲಾನುಭವಿಗಳ ಪಟ್ಟಿ ನೀಡಲು ಸೂಚಿಸಿರುವುದಾಗಿ ಕೆ.ಪಿ.ಟಿ.ಸಿ.ಎಲ್. ಮೂಲಗಳು samajamukhi.net ಪ್ರತಿನಿಧಿಗೆ ಮಾಹಿತಿ ನೀಡಿವೆ.

Molnupiravir

ನವದೆಹಲಿ: ಕೊರೋನಾ ಸಾಂಕ್ರಾಮಿಕ 3ನೇ ಅಲೆಯ ಭೀತಿಯ ನಡುವಲ್ಲೇ ಭಾರತದಲ್ಲಿ ಸೋಂಕು ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದೆ. ಅಂತೆಯೇ ಸಾವಿನ ಪ್ರಮಾಣ ಕೂಡ ತಗ್ಗುತ್ತಿದ್ದು, ಇದರ ನಡುವೆಯೇ ಕೊರೋನಾ ಔಷಧಿ ಕುರಿತ ಆಶಾದಾಯಕ ಸುದ್ದಿಯೊಂದು ಹೊರ ಬಿದ್ದಿದೆ.

ಹೌದು.. ಪ್ರಾಯೋಗಿಕ ಕೋವಿಡ್-19 ಮಾತ್ರೆಯು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಜನರಲ್ಲಿ ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಸಾಧ್ಯತೆಯನ್ನು ಅರ್ಧದಷ್ಟು ಕಡಿಮೆ ಮಾಡಿದೆ. ಈ ಮಾತ್ರೆಯನ್ನು ಕೋವಿಡ್ ರೋಗಿಗಳ ಬಳಕೆಗೆ ಅಧಿಕೃತಗೊಳಿಸಲು ಅಮೆರಿಕ ಮತ್ತು ಪ್ರಪಂಚದಾದ್ಯಂತದ ಇರುವ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸುವುದಾಗಿ ಹೇಳಿದೆ ಎಂದು ಔಷಧ ತಯಾರಿಕಾ ಕಂಪನಿ ಮರ್ಕ್ ಮತ್ತು ಕೋ ಹೇಳಿದೆ.

ಒಂದೊಮ್ಮೆ ಈ ಮಾತ್ರೆಗೆ ಅನುಮೋದನೆ ಸಿಕ್ಕರೆ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರಯತ್ನದಲ್ಲಿ ಪ್ರಮುಖ ಮುನ್ನಡೆಯಾಗಲಿದೆ. ಈ ಮೊಲ್ನುಪಿರವಿರ್  ಕೋವಿಡ್-19ಗೆ ಚಿಕಿತ್ಸೆ ನೀಡಬಹುದಾದದ ಮೊದಲ ಮಾತ್ರೆಯಾಗಲಿದೆ. ಅಮೆರಿಕದಲ್ಲಿ ಈಗ ಅಧಿಕೃತವಾಗಿರುವ ಎಲ್ಲಾ ಕೋವಿಡ್ -19 ಚಿಕಿತ್ಸೆಗೆ ಬಳಸುವ ಔಷಧಕ್ಕೆ ಐವಿ ಅಥವಾ ಇಂಜೆಕ್ಷನ್ ಅಗತ್ಯವಿದೆ. ಮೊಲ್ನುಪಿರವಿರ್ ಎಂದು ಕರೆಯಲ್ಪಡುವ ಈ ಮಾತ್ರೆಯನ್ನು ಪಡೆದ ರೋಗಿಗಳಲ್ಲಿ ಕೋವಿಡ್ -19 ರೋಗಲಕ್ಷಣಗಳು ಐದು ದಿನಗಳೊಳಗೆ ಕಡಿಮೆ ಆಗಿದ್ದು, ಅರ್ಧದಷ್ಟು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದೆ ಎಂದು ಮರ್ಕ್ ಮತ್ತು ಅದರ ಪಾಲುದಾರ ರಿಡ್ಜ್‌ಬ್ಯಾಕ್ ಬಯೋಥೆರಪೆಟಿಕ್ಸ್ ಸಂಸ್ಥೆ ಹೇಳಿದೆ.

ಮೆರ್ಕ್ ಮತ್ತು ರಿಡ್ಜ್‌ಬ್ಯಾಕ್ ಬಯೋಥೆರಪ್ಯೂಟಿಕ್ ಅಕ್ಟೋಬರ್ 2 ರಂದು ಮಾಡಿದ ಪ್ರಕಟಣೆಯ ಪ್ರಕಾರ ಸೌಮ್ಯ ಮತ್ತು ಮಧ್ಯಮ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆಯಿದೆ. ಪ್ರಮುಖವಾಗಿ ಸ್ಥೂಲಕಾಯ, ಮಧುಮೇಹ ಅಥವಾ ಹೃದ್ರೋಗದಂತಹ ಆರೋಗ್ಯ ಸಮಸ್ಯೆಗಳಿಂದಾಗಿ ಕೋವಿಡ್‌ನಿಂದ ಹೆಚ್ಚು ಅಪಾಯವೆಂದು ಪರಿಗಣಿಸಲ್ಪಟ್ಟ ಮಧ್ಯಮ ಪ್ರಮಾಣದ ಕೋವಿಡ್ -19 ಲಕ್ಷಣಗಳನ್ನು ಹೊಂದಿರುವ 775 ವಯಸ್ಕರ ಮೇಲೆ ಈ ಅಧ್ಯಯನ ನಡೆಸಲಾಗಿದೆ. ಮೆರ್ಕ್ ಸಂಸ್ಥೆಯ ವರದಿಯನ್ನು ಸದ್ಯ ಯಾವುದೇ ಉನ್ನತ ವೈದ್ಯಕೀಯ ತಂಡ ಪರಿಶೀಲನೆ ನಡೆಸಿಲ್ಲ. ಭವಿಷ್ಯದ ವೈದ್ಯಕೀಯ ಪರಿಶೀಲನೆಯಲ್ಲಿ ಅದನ್ನು ಪ್ರಸ್ತುತಪಡಿಸಲು ಯೋಜಿಸಲಾಗಿದೆ ಎಂದು ಮರ್ಕ್ ಹೇಳಿದೆ.

ವೈದ್ಯರು ಇದು ಕೋವಿಡ್ ರೋಗಿಗಳಿಗೆ ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡಲು ಉಪಯುಕ್ತ ಎಂದು ಹೇಳಲಾಗಿದ್ದು, ಏಕೆಂದರೆ ಆಸ್ಪತ್ರೆಯಲ್ಲಿನ ರೋಗಿಗಳ ಸಾವಿನ ಶೇ.50 ಇಳಿಕೆಯಾಗಿದೆ ಎಂದು ಹೇಳಲಾಗಿದೆ. ಪ್ರಯೋಗದ ಫಲಿತಾಂಶಗಳು ಪ್ರಬಲವಾಗಿರುವುದರಿಂದ ಸದ್ಯ ಮಾತ್ರೆಯ ಬಳಕೆ ನಿಲ್ಲಿಸುವಂತೆ ವೈದ್ಯಕೀಯ ತಜ್ಞರ ಸ್ವತಂತ್ರ ಗುಂಪು ಶಿಫಾರಸು ಮಾಡಿದೆ. ಮಾತ್ರೆಗೆ ಅನುಮೋದನೆ ನೀಡುವ ಕುರಿತಂತೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತದೊಂದಿಗೆ ಚರ್ಚಿಸುತ್ತಿದ್ದೇವೆ ಮತ್ತು ಮುಂದಿನ ದಿನಗಳಲ್ಲಿ ಡೇಟಾವನ್ನು ಪರಿಶೀಲನೆಗಾಗಿ ಸಲ್ಲಿಸಲು ಯೋಜಿಸಿದ್ದೇವೆ ಎಂದು ಕಂಪನಿಯ ಕಾರ್ಯನಿರ್ವಾಹಕರು ತಿಳಿಸಿದ್ದಾರೆ.

ಔಷಧಿ ಪರಿಣಾಮಕ್ಕಾಗಿ ಇನ್ನೂ ಕಾಯಬೇಕು
ಕ್ಲಿನಿಕಲ್ ಪ್ರಯೋಗಗಳ ಪ್ರಯೋಜನವನ್ನು ಪರಿಶೀಲಿಸಲು ಇನ್ನಷ್ಟು ದಿನ ಕಾಯಬೇಕು ಎಂದು ವೈಜ್ಞಾನಿಕ ಮಂಡಳಿಯ ಮುಖ್ಯಸ್ಥ ಮತ್ತು ಮಣಿಪಾಲ್ ಆಸ್ಪತ್ರೆಗಳ ಜೆರಿಯಾಟ್ರಿಕ್ ಮೆಡಿಸಿನ್ ಅಧ್ಯಕ್ಷರಾದ ಡಾ.ಅನೂಪ್ ಅಮರನಾಥ್ ಹೇಳಿದ್ದು, ಅಲ್ಲದೆ ಔಷಧ ನಿಯಂತ್ರಕ ಸಂಸ್ಥೆಯ ಅನುಮೋದನೆಗಾಗಿ ಕಾಯಬೇಕು ಎಂದು ಹೇಳಿದರು.

ಭಾರತದಲ್ಲಿ, ಐದು ಕಂಪನಿಗಳು ಈ ಔಷಧಕ್ಕಾಗಿ ಪ್ರಯೋಗಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಗಳ ಪಟ್ಟಿಯಲ್ಲಿ ಸಿಪ್ಲಾ, ಡಾ ರೆಡ್ಡಿ, ಎಮ್‌ಕ್ಯೂರ್, ಸನ್ ಫಾರ್ಮಾ ಮತ್ತು ಟೊರೆಂಟ್ ಸಂಸ್ಥೆಗಳು ಇವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *