

ಆ್ಯಂಬುಲೆನ್ಸ್ಗಳಲ್ಲಿ ASV ಇಂಜೆಕ್ಷನ್ ಶೇಖರಣೆಗೆ ಶಾಸಕ ಹರತಾಳು ಹಾಲಪ್ಪ ಮನವಿ
Published on: 18 hours ago

ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಚ್ಚಿದ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್ಗಳ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸುವಾಗ ಆಗುವ ಅನಾಹುತಗಳನ್ನುತಪ್ಪಿಸಲು ಹಾಗೂ ತುರ್ತು ಚಿಕಿತ್ಸೆ ನೀಡಲು ಅಗತ್ಯವಿರುವ ASV ಇಂಜೆಕ್ಷನ್ಗಳನ್ನು ಆ್ಯಂಬುಲೆನ್ಸ್ಗಳಲ್ಲಿ ಶೇಖರಿಸಿಡಲು ಸಾಗರ ಶಾಸಕ ಹರತಾಳು ಹಾಲಪ್ಪ ಮನವಿ ಮಾಡಿದ್ದಾರೆ.

ಬುದ್ಧಿಮತ್ತೆ ಪರೀಕ್ಷೆಯಲ್ಲಿ ಬಾಲಕನ ಸಾಧನೆ : ದೇಶಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಪುರಸ್ಕಾರ
ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಪುರಸ್ಸರ್ನಿಗೆ ಖ್ಯಾತ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಹಿ ಇರುವ ಪಾರಿತೋಷಕ, ಆ್ಯಪಲ್ ಕಂಪನಿ ಮ್ಯಾಕ್ಬುಕ್, ಬ್ಯಾಗ್, ಪೆನ್ಡ್ರೈವ್ ಸೇರಿ ಮಕ್ಕಳ ಅಭ್ಯಾಸಕ್ಕೆ ಅನುಕೂಲವಾಗುವ ವಸ್ತುಗಳನ್ನು ಅಕಾಡೆಮಿ ನೀಡಿದೆ..
ಕಾರವಾರ : ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಗೀಳು ಹೆಚ್ಚಾಗಿದೆ. ಆನ್ಲೈನ್ ಕ್ಲಾಸ್ ಹೆಸರಲ್ಲಿ ಮೊಬೈಲ್ ಅನ್ನು ಕಾಲಹರಣ ಮಾಡೋದಕ್ಕೆ ಬಳಕೆ ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ಬಾಲಕ ಲಾಕ್ಡೌನ್ ಅವಧಿಯಲ್ಲಿ ಬೇಸರ ಕಳೆಯಲು ಮೊಬೈಲ್ ತೆಗೆದುಕೊಂಡಿದ್ದು ಇದೀಗ ಆತನ ಸಾಧನೆಗೆ ಮೆಟ್ಟಿಲಾಗಿ ನಿಂತಿದೆ.

ಬಾಲಕ ಪುರಸ್ಸರ್ ದೇವಾನಂದ ಗಾಂವ್ಕರ ಸಾಧನೆ..
ಉತ್ತರಕನ್ನಡ ಜಿಲ್ಲೆಯ ಕಾರವಾರ ಮೂಲದ ಪುರಸ್ಸರ್ ದೇವಾನಂದ ಗಾಂವ್ಕರ್ ಎಂಬ ಬಾಲಕ ದೇಶದ ಪ್ರತಿಷ್ಠಿತ ಅನ್ ಅಕಾಡೆಮಿ ಎಮರ್ಜ್ ಟೀಚಿಂಗ್ ಸಂಸ್ಥೆ ಬುದ್ಧಿಮತ್ತೆ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾನೆ. ಇದನ್ನು ಮೆಚ್ಚಿ ಸಂಸ್ಥೆ ಈತನ ಸಾಧನೆಯನ್ನು ಗುರುತಿಸಿ ದೇಶದಲ್ಲಿಯೇ ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿ ಪುರಸ್ಕರಿಸಿದೆ.
9ನೇ ತರಗತಿ ವಿದ್ಯಾರ್ಥಿಯಾಗಿರುವ ಪುರಸ್ಸರ್, ಲಾಕ್ಡೌನ್ ಸಂದರ್ಭದಲ್ಲಿ ಬೇಸರ ಕಳೆಯಲು ಕೆಲಹೊತ್ತು ತಾಯಿಯ ಮೊಬೈಲ್ ಪಡೆದುಕೊಂಡು ವೀಡಿಯೋಗಳನ್ನು ನೋಡುತ್ತಿದ್ದನು. ಒಮ್ಮೆ ಈತ ಮೊಬೈಲ್ನಲ್ಲಿ ನೋಡುತ್ತಿದ್ದ ವೇಳೆ ಅನ್ಅಕಾಡೆಮಿಯ ಬುದ್ದಿಮತ್ತೆ ಪರೀಕ್ಷೆಯ ಜಾಹೀರಾತೊಂದು ಕಾಣಿಸಿತ್ತು. ಅದನ್ನು ಕ್ಲಿಕ್ ಮಾಡಿದ್ದ.
ಬಳಿಕ ಕುತೂಹಲಕ್ಕೆ ಆ ಪರೀಕ್ಷೆ ಬರೆಯುವ ಮನಸ್ಸು ಮಾಡಿದ್ದು, ಒಂದು ತಾಸಿನ ಎಮರ್ಜ್ ಪರೀಕ್ಷೆಯಲ್ಲಿ ಬಾಲಕ ನೂರಕ್ಕೂ ಅಧಿಕ ಪ್ರಶ್ನೆಗಳಿಗೆ ಕೇವಲ 13 ನಿಮಿಷಗಳಲ್ಲಿ ಸರಿಯಾಗಿ ಉತ್ತರ ನೀಡಿದ್ದನು. ದೇಶದಲ್ಲಿ ಸುಮಾರು 76 ಸಾವಿರ ಮಕ್ಕಳು ಪರೀಕ್ಷೆ ಬರೆದಿದ್ದು, ನೂರಕ್ಕೂ ಅಧಿಕ ಮಂದಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಆದರೆ, ಈ ಬಾಲಕ ಕಡಿಮೆ ಅವಧಿಯಲ್ಲಿ ಸರಿಯಾದ ಉತ್ತರ ನೀಡಿದ್ದಕ್ಕಾಗಿ ಸಂಸ್ಥೆ ಪುರಸ್ಸರ್ನಿಗೆ ಪ್ರಥಮ ಬಹುಮಾನ ನೀಡಿದೆ.
ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಪುರಸ್ಸರ್ನಿಗೆ ಖ್ಯಾತ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಹಿ ಇರುವ ಪಾರಿತೋಷಕ, ಆ್ಯಪಲ್ ಕಂಪನಿ ಮ್ಯಾಕ್ಬುಕ್, ಬ್ಯಾಗ್, ಪೆನ್ಡ್ರೈವ್ ಸೇರಿ ಮಕ್ಕಳ ಅಭ್ಯಾಸಕ್ಕೆ ಅನುಕೂಲವಾಗುವ ವಸ್ತುಗಳನ್ನು ಅಕಾಡೆಮಿ ನೀಡಿದೆ.
ಈ ಸಂಸ್ಥೆ 6 ರಿಂದ 12ನೇ ತರಗತಿವರೆಗಿನ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆ ಬಗ್ಗೆ ನಮ್ಮ ರಾಜ್ಯದ ಮಕ್ಕಳಿಗೆ ಮಾಹಿತಿ ಕೊರತೆ ಇದ್ದು, ಈ ರೀತಿ ಪರೀಕ್ಷೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಕಡಿಮೆ ಅವಧಿಯಲ್ಲಿ ಮಗನ ಸಾಧನೆಗೆ ಪಾಲಕರು ಸಂತಸ ವ್ಯಕ್ತಪಡಿಸಿದ್ದು, ಆತನ ಬುದ್ಧಿಮತ್ತೆ ಕಂಡು ಹೆಮ್ಮೆ ಪಡುತ್ತಿದ್ದಾರೆ. ಅಲ್ಲದೆ ಪುರಸ್ಸರ್ ಪ್ರಥಮ ಸ್ಥಾನ ಗಳಿಸಿದ್ದರಿಂದ ಲಕ್ಷಾಂತರ ವೆಚ್ಚದ ಸಿಲೆಬಸ್ ಕೋರ್ಸ್, ಐಕಾನಿಕ್ ಸಾಫ್ಟ್ವೇರ್ ಕೋಡಿಂಗ್ ಸೇರಿ ಹಲವು ಶಿಕ್ಷಣಕ್ಕೆ ಅನುಕೂಲವಾಗುವ ಕ್ಲಾಸ್ಗಳು ಉಚಿತವಾಗಿ ಸಿಕ್ಕಿದೆ. ಈ ಬಾಲಕನ ತಂದೆ ದೇವಾನಂದ ಗಾಂವ್ಕರ್ ಪ್ರಸಿದ್ಧ ಹಾಡುಗಾರರು.
ಶಿವಮೊಗ್ಗ: ಆ್ಯಂಬುಲೆನ್ಸ್ಗಳಲ್ಲಿ Anti Venom Serum (ASV) ಶೇಖರಿಸಿಡಲು ಕ್ರಮ ಕೈಗೊಳ್ಳುವಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಚ್ಚಿದ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್ಗಳ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸುವಾಗ ಆಗುವ ಅನಾಹುತಗಳನ್ನುತಪ್ಪಿಸಲು ಹಾಗೂ ತುರ್ತು ಚಿಕಿತ್ಸೆ ನೀಡಲು ASV ಇಂಜೆಕ್ಷನ್ಗಳು ಸಹಾಯಕವಾಗುತ್ತವೆ. ಹೀಗಾಗಿ ಈ ಇಂಜೆಕ್ಷನ್ಗಳನ್ನು ಆ್ಯಂಬುಲೆನ್ಸ್ಗಳಲ್ಲಿ ಶೇಖರಿಸಿಡಲು ಶಾಸಕರು ಸರ್ಕಾರ ಒತ್ತಾಯಿಸಿದ್ದಾರೆ.

ASV ಇಂಜೆಕ್ಷನ್ ಶೇಖರಣೆಗೆ ಶಾಸಕ ಹರತಾಳು ಹಾಲಪ್ಪ ಮನವಿ
ಇನ್ನು ಸಾಗರ ಉಪವಿಭಾಗೀಯ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ RT-PCR ಪ್ರಯೋಗಾಲಯಕ್ಕೆ ಪೂರಕ ಸಲಕರಣೆ ಒದಗಿಸುವಂತೆ ಹಾಗೂ ಸದರಿ ಆಸ್ಪತ್ರೆಯನ್ನು 100 ಹಾಸಿಗೆಯಿಂದ 150 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
